ಜಿಲ್ಲೆಗಳು

108 ಆಂಬುಲೆನ್ಸ್ ನಲ್ಲಿಯೇ ಗಂಡು ಮಗುವಿಗೆ ಜನ್ಮ; ಹೆರಿಗೆಗಾಗಿ ಕರೆದೊಯ್ಯುತ್ತಿದ್ದಾಗ ಚೆಂಗಡಿ ಕೌದಳ್ಳಿ ಮಾರ್ಗಮಧ್ಯೆ ಘಟನೆ

ಹನೂರು: ಹೆರಿಗೆಗಾಗಿ ಕರೆದೊಯ್ಯುತ್ತಿದ್ದ ವೇಳೆ ಗರ್ಭಿಣಿಯೊಬ್ಬರು 108 ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ಚೆಂಗಡಿ ಕೌದಳ್ಳಿ ಮಾರ್ಗಮಧ್ಯದಲ್ಲಿ ಜರುಗಿದೆ.
ಹನೂರು ತಾಲೂಕಿನ ಚಂಗಡಿ ಗ್ರಾಮದ ವೆಂಕಟರಾಜು ರವರ ಪತ್ನಿ ವಿಶಾಲಾಕ್ಷಿ ಅವರಿಗೆ ಶುಕ್ರವಾರ ಬೆಳಿಗ್ಗೆ 10 ರ ವೇಳೆಯಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಕುಟುಂಬಸ್ಥರ ಈಕೆಯನ್ನು ಕೌದಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ . ತಕ್ಷಣ ಚಂಗಡಿ ಗ್ರಾಮಕ್ಕೆ ತೆರಳಿದ ಆಂಬುಲೆನ್ಸ್ ನಲ್ಲಿ ಕೌದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ.ಈ ವೇಳೆ ತುರ್ತು ವೈದ್ಯಕೀಯ ಸಿಬ್ಬಂದಿ ನಾಗರಾಜು ಹಾಗೂ ಚಾಲಕ ಮಲ್ಲೇಶ್ ಅವರ ಸಹಕಾರ ಪಡೆದು ತಾಯಿ ಮಗುವನ್ನು ಆರೈಕೆ ಮಾಡಿ ಬಳಿಕ ಕೌದಳ್ಳಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಯಿತು. ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ಆಂಬ್ಯುಲೆನ್ಸ್ ತುರ್ತು ವಾಹನದ ಸಿಬ್ಬಂದಿ ನಾಗರಾಜು ಆಂದೋಲನಕ್ಕೆ ತಿಳಿಸಿದರು.
ಸಂಚಾರಕ್ಕೆ ತೊಂದರೆ : ವಡಕೆಹಳ್ಳ ಸಮೀಪದ ಅಡ್ಡರಸ್ತೆಯಿಂದ ಚಂಗಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ತೀವ್ರ ಹದಗೆಟ್ಟಿರುವುದರಿಂದ ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ಸಂಚರಿಸಲು ತೊಂದರೆಯಾಗಿದೆ. ಈ ಮಧ್ಯೆ ಗರ್ಭಿಣಿ ಮಹಿಳೆ ಯೋರ್ವರನ್ನು ಚೆಂಗಡಿ ಗ್ರಾಮದಿಂದ ಕೌದಳ್ಳಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲು ತೆರಳಿದ್ದ 108ಆಂಬ್ಯುಲೆನ್ಸ್
ಚಾಲಕ ಮಲ್ಲೇಶ್ ಹರಸಾಹಸಪಟ್ಟು ಗರ್ಭಿಣಿಗೆ ಯಾವುದೇ ತೊಂದರೆಯಾಗದಂತೆ ನಿಧಾನವಾಗಿ ಕೌದಳ್ಳಿ ಆಸ್ಪತ್ರೆಗೆ ಕರೆತಂದಿದ್ದಾರೆ.

ಗ್ರಾಮಸ್ಥರ ಆಕ್ರೋಶ : ಚಂಗಡಿ ಗ್ರಾಮವು ಮಲೆಮಹದೇಶ್ವರ ವನ್ಯಧಾಮ ವಲಯ ವ್ಯಾಪ್ತಿಯಲ್ಲಿ ಬರುವುದರಿಂದ ಗ್ರಾಮಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ತೊಂದರೆಯಾಗುತ್ತಿದೆ .ಈ ಹಿನ್ನೆಲೆ ಚೆಂಗಡಿ ಸ್ಥಳಾಂತರ ಕಾರ್ಯವು ಸುಮಾರು 6 ವರ್ಷಗಳಿಂದ ನಡೆಯುತ್ತಿದೆ. ಈಗಾಗಲೇ ಹನೂರು ತಾಲ್ಲೂಕಿನ ವೈಶಂಪಾಳ್ಯ ಗ್ರಾಮದ ಸಮೀಪ ನಿವೇಶನ ಗುರುತಿಸಲಾಗಿದೆ. ಆದರೆ ಸರ್ಕಾರದಿಂದ ಅನುದಾನ ಬಾರದೇ ಇರುವುದರಿಂದ ಸ್ಥಳಾಂತರ ಕಾರ್ಯ ಪೂರ್ಣವಾಗಿಲ್ಲ ಆದ್ದರಿಂದ ಸರ್ಕಾರ ಹಾಗೂ ಜನಪ್ರತಿನಿಧಿಗಳು ಈ ಕೂಡಲೇ ಚೆಂಗಡಿ ಗ್ರಾಮವನ್ನು ಸ್ಥಳಾಂತರ ಮಾಡಬೇಕು ಇಲ್ಲದಿದ್ದರೆ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ .

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

2 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

2 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

3 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

3 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

3 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

3 hours ago