ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ, ಜಾನುವಾರುಗಳಿಗೆ ಚಿಕಿತ್ಸೆ ನೀಡುವ ಸೌಲಭ್ಯ
ದಾ.ರಾ.ಮಹೇಶ್
ವೀರನಹೊಸಹಳ್ಳಿ: ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಜಾರಿಗೆ ತಂದ ಪಶುಸಂಜೀವಿನಿ ಆಂಬ್ಯುಲೆನ್ಸ್ ಸೇವೆಗೆ ಉತ್ತಮ ಸ್ಪಂದನೆ ಸಿಗುತ್ತಿದೆ.
ಸುಸಜ್ಜಿತ ಆಂಬುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಿವೆ. ೧೯೬೨ ಸಹಾಯವಾಣಿ ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸುತ್ತಿದೆ. ಸೇವೆಗಳನ್ನು ಇಲಾಖೆಯ ಹೆಲ್ಪ್ಲೈನ್ ಸೇವೆಗೆ ಲಿಂಕ್ ಮಾಡಲಾಗಿದೆ.
ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಸಂಜೀವಿನಿ ಆಂಬ್ಯುಲೆನ್ಸ್ ಸೇವೆಯನ್ನು ಜಾರಿಗೆ ತರಲಾಗಿತ್ತು. ಈ ಸೇವೆಗೆ ಉತ್ತಮ ಪ್ರತಿಕ್ರಿೆುಂ ಸಿಗುತ್ತಿದೆ.
ಈವರೆಗೆ ಎಷ್ಟು ಜಾನುವಾರುಗಳಿಗೆ ಚಿಕಿತ್ಸೆ?: ಜಾನುವಾರುಗಳ ಚಿಕಿತ್ಸೆಗಾಗಿ ವಿಶೇಷ ಆಂಬ್ಯುಲೆನ್ಸ್ ಸೇವೆಯನ್ನು ಸರ್ಕಾರ ಕಳೆದ ವರ್ಷ ಆಗಸ್ಟ್ನಲ್ಲಿ ಜಾರಿಗೆ ತಂದಿತ್ತು. ಈ ಆಂಬ್ಯುಲೆನ್ಸ್ಗಳು ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ವಾಹನಗಳಾಗಿವೆ. ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸುವ ಈ ಸೇವೆಗಳನ್ನು ಇಲಾಖೆಯ ಹೆಲ್ಪ್ಲೈನ್ ಸೇವೆಗೆ ಲಿಂಕ್ ಮಾಡಲಾಗಿದೆ.
ಆಂಬ್ಯುಲೆನ್ಸ್ ವಿಶೇಷತೆ ಏನು?: ಸುಸಜ್ಜಿತ ಆಂಬ್ಯುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಿವೆ. ಶಸ್ತ್ರ ಚಿಕಿತ್ಸಾ ಘಟಕವಿದೆ. ವಾಹನದಲ್ಲಿ ಪ್ರೋಂಗಶಾಲೆ, ಸ್ಕ್ಯಾನಿಂಗ್ ಉಪಕರಣ ಅಳವಡಿಕೆ ಮಾಡಲಾಗಿದೆ. ೨೫೦ ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಹೊಂದಿದ್ದು, ೨೦೦ ಕೆ.ಜಿ. ತೂಕ ಸಾಮರ್ಥ್ಯದ ಶಸ್ತ್ರಚಿಕಿತ್ಸಾ ಟೇಬಲ್, ಎಸಿ ವ್ಯವಸ್ಥೆ, ಪಶುವೈದ್ಯರು ಮತ್ತು ಸಿಬ್ಬಂದಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಮಾಡಲಾಗಿದೆ. ವಾಶ್ ಬೇಸಿನ್, ೧೦೦ ವೋಲ್ಟ್ ಎಲ್ಇಡಿ ಲೈಟ್, ಆಕ್ಸಿಜನ್ ಸಪೋರ್ಟ್ ಸಿಸ್ಟಮ್, ಆಕಸ್ಮಿಕ ಬೆಂಕಿ ಅನಾಹುತ ತಡೆಗೆ ವ್ಯವಸ್ಥೆ, ಶಸ್ತ್ರಚಿಕಿತ್ಸಾ ಉಪಕರಣಗಳ ಕಿಟ್, ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್, ಪ್ರಸೂತಿ ಕಿಟ್ಗಳ ಪೆಟ್ಟಿಗೆಗಳು ಮತ್ತು ಇತರೆ ಉಪಕರಣಗಳನ್ನು ಇಡಲು ಕಪಾಟುಗಳ ವ್ಯವಸ್ಥೆ ಹೊಂದಿದೆ.
ಚಿಕಿತ್ಸೆ ಏನು?: ವಿಷಪ್ರಾಸನ, ಪ್ರಸವಕ್ಕೆ ಸಂಬಂಧಿಸಿದ ತೊಂದರೆಗಳು, ಹೊಟ್ಟೆ ಉಬ್ಬರ, ಉಸಿರುಗಟ್ಟುವಿಕೆ, ಅಪಘಾತ, ಮೂಳೆಮುರಿತ, ಆಂಥ್ರಾಕ್ಸ್, ಚಪ್ಪೆರೋಗ, ಗಳಲೆ ರೋಗ, ಹಾಲುಜ್ವರ, ಕೆಚ್ಚಲು ಬಾವಿಗೆ ಚಿಕಿತ್ಸೆ ನೀಡಲಾಗುತ್ತದೆ. ವಿವಿಧ ರೋಗೋದ್ರೇಕಗಳು ಹಾಗೂ ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಜಾನುವಾರುಗಳನ್ನು ವಾಹನದಲ್ಲಿ ಕರೆದುಕೊಂಡು ಹೋಗಿ ಚಿಕಿತ್ಸೆ ಪಡೆಯಬಹುದಾಗಿದೆ. ರೈತರ ಮನೆ ಬಾಗಿಲಿಗೆ ತೆರಳುವ ತಜ್ಞ ಪಶುವೈದ್ಯರು ಹಾಗೂ ಸುಸಜ್ಜಿತ ಪಶು ಚಿಕಿತ್ಸಾ ವಾಹನ ದನ, ಎಮ್ಮೆ, ಕುರಿ, ಮೇಕೆ, ಹಾಗೂ ಇನ್ನಿತರೆ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ಪ್ರಾಣ ಹಾನಿ ಆಗುವುದನ್ನು ತಡೆಗಟ್ಟಲಿದ್ದಾರೆ.
ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೂ ಪಶುವೈದ್ಯಕೀಯ ಆಂಬ್ಯುಲೆನ್ಸ್ ನೀಡಲಾಗುತ್ತಿದೆ. ಇದನ್ನು ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲು ಸರ್ಕಾರ ಮುಂದಾಗಿದೆ. ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಜಾರಿಯಾದ ಈ ಸೇವೆಗೆ ಉತ್ತಮ ಜನಸ್ಪಂದನೆ ಸಿಗುತ್ತಿದೆ. ಅನಾರೋಗ್ಯದಿಂದ ಬಳಲುತ್ತಿರುವ ಜಾನುವಾರುಗಳಿಗೆ ಚಿಕಿತ್ಸೆ ನೀಡಲು ಈ ಸುಸಜ್ಜಿತ ಆಂಬ್ಯುಲೆನ್ಸ್ ರೈತರಿಗೆ ಅನುಕೂಲಕರವಾಗಿದೆ. ಆಂಬ್ಯುಲೆನ್ಸ್ಗಳು ಒಟ್ಟು ೩೦,೨೫೫ ಕಿ.ಮೀ. ಕ್ರಮಿಸಿದ್ದು, ಮೇ ತಿಂಗಳಲ್ಲಿ ೪೨ ಜಾನುವಾರುಗಳಿಗೆ ಶಸ್ತ್ರಚಿಕಿತ್ಸೆ ನೀಡಲಾಗಿದೆ. ೭೫ ಗ್ರಾಮಗಳಿಗೆ ತೆರಳಿ ಶಸ್ತ್ರಚಿಕಿತ್ಸೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೂ ಒಂದೊಂದು ಆಂಬ್ಯುಲೆನ್ಸ್ ನೀಡಿದ್ದು, ಪ್ರತಿ ತಾಲ್ಲೂಕಿಗೆ ೨ರಿಂದ ೩ ಆಂಬ್ಯುಲೆನ್ಸ್ ನೀಡಲು ಪ್ರಸ್ತಾವನೆ ಸಲ್ಲಿಸಿದ್ದು, ಸದ್ಯದಲ್ಲೇ ಅನುಮೋದನೆ ಸಿಗಲಿದೆ.
–ಷಡಕ್ಷರಿ ಸ್ವಾಮಿ, ಪಶುಸಂಗೋಪನೆ ಇಲಾಖೆ ಜಿಲ್ಲಾ ನಿರ್ದೇಶಕ
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…