ಜಿಲ್ಲೆಗಳು

ಪಶುಸಂಜೀವಿನಿ ಆಂಬ್ಯುಲೆನ್ಸ್ ಸೇವೆಗೆ ಉತ್ತಮ ಸ್ಪಂದನೆ

ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ, ಜಾನುವಾರುಗಳಿಗೆ ಚಿಕಿತ್ಸೆ ನೀಡುವ ಸೌಲಭ್ಯ

ದಾ.ರಾ.ಮಹೇಶ್

ವೀರನಹೊಸಹಳ್ಳಿ: ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಜಾರಿಗೆ ತಂದ ಪಶುಸಂಜೀವಿನಿ ಆಂಬ್ಯುಲೆನ್ಸ್ ಸೇವೆಗೆ ಉತ್ತಮ ಸ್ಪಂದನೆ ಸಿಗುತ್ತಿದೆ.

ಸುಸಜ್ಜಿತ ಆಂಬುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಿವೆ. ೧೯೬೨ ಸಹಾಯವಾಣಿ ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸುತ್ತಿದೆ. ಸೇವೆಗಳನ್ನು ಇಲಾಖೆಯ ಹೆಲ್ಪ್‌ಲೈನ್ ಸೇವೆಗೆ ಲಿಂಕ್ ಮಾಡಲಾಗಿದೆ.
ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಸಂಜೀವಿನಿ ಆಂಬ್ಯುಲೆನ್ಸ್ ಸೇವೆಯನ್ನು ಜಾರಿಗೆ ತರಲಾಗಿತ್ತು. ಈ ಸೇವೆಗೆ ಉತ್ತಮ ಪ್ರತಿಕ್ರಿೆುಂ ಸಿಗುತ್ತಿದೆ.
ಈವರೆಗೆ ಎಷ್ಟು ಜಾನುವಾರುಗಳಿಗೆ ಚಿಕಿತ್ಸೆ?: ಜಾನುವಾರುಗಳ ಚಿಕಿತ್ಸೆಗಾಗಿ ವಿಶೇಷ ಆಂಬ್ಯುಲೆನ್ಸ್ ಸೇವೆಯನ್ನು ಸರ್ಕಾರ ಕಳೆದ ವರ್ಷ ಆಗಸ್ಟ್‌ನಲ್ಲಿ ಜಾರಿಗೆ ತಂದಿತ್ತು. ಈ ಆಂಬ್ಯುಲೆನ್ಸ್‌ಗಳು ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ವಾಹನಗಳಾಗಿವೆ. ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸುವ ಈ ಸೇವೆಗಳನ್ನು ಇಲಾಖೆಯ ಹೆಲ್ಪ್‌ಲೈನ್ ಸೇವೆಗೆ ಲಿಂಕ್ ಮಾಡಲಾಗಿದೆ.

ಆಂಬ್ಯುಲೆನ್ಸ್ ವಿಶೇಷತೆ ಏನು?: ಸುಸಜ್ಜಿತ ಆಂಬ್ಯುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಿವೆ. ಶಸ್ತ್ರ ಚಿಕಿತ್ಸಾ ಘಟಕವಿದೆ. ವಾಹನದಲ್ಲಿ ಪ್ರೋಂಗಶಾಲೆ, ಸ್ಕ್ಯಾನಿಂಗ್ ಉಪಕರಣ ಅಳವಡಿಕೆ ಮಾಡಲಾಗಿದೆ. ೨೫೦ ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಹೊಂದಿದ್ದು, ೨೦೦ ಕೆ.ಜಿ. ತೂಕ ಸಾಮರ್ಥ್ಯದ ಶಸ್ತ್ರಚಿಕಿತ್ಸಾ ಟೇಬಲ್, ಎಸಿ ವ್ಯವಸ್ಥೆ, ಪಶುವೈದ್ಯರು ಮತ್ತು ಸಿಬ್ಬಂದಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಮಾಡಲಾಗಿದೆ. ವಾಶ್ ಬೇಸಿನ್, ೧೦೦ ವೋಲ್ಟ್ ಎಲ್‌ಇಡಿ ಲೈಟ್, ಆಕ್ಸಿಜನ್ ಸಪೋರ್ಟ್ ಸಿಸ್ಟಮ್, ಆಕಸ್ಮಿಕ ಬೆಂಕಿ ಅನಾಹುತ ತಡೆಗೆ ವ್ಯವಸ್ಥೆ, ಶಸ್ತ್ರಚಿಕಿತ್ಸಾ ಉಪಕರಣಗಳ ಕಿಟ್, ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್, ಪ್ರಸೂತಿ ಕಿಟ್‌ಗಳ ಪೆಟ್ಟಿಗೆಗಳು ಮತ್ತು ಇತರೆ ಉಪಕರಣಗಳನ್ನು ಇಡಲು ಕಪಾಟುಗಳ ವ್ಯವಸ್ಥೆ ಹೊಂದಿದೆ.

ಚಿಕಿತ್ಸೆ ಏನು?: ವಿಷಪ್ರಾಸನ, ಪ್ರಸವಕ್ಕೆ ಸಂಬಂಧಿಸಿದ ತೊಂದರೆಗಳು, ಹೊಟ್ಟೆ ಉಬ್ಬರ, ಉಸಿರುಗಟ್ಟುವಿಕೆ, ಅಪಘಾತ, ಮೂಳೆಮುರಿತ, ಆಂಥ್ರಾಕ್ಸ್, ಚಪ್ಪೆರೋಗ, ಗಳಲೆ ರೋಗ, ಹಾಲುಜ್ವರ, ಕೆಚ್ಚಲು ಬಾವಿಗೆ ಚಿಕಿತ್ಸೆ ನೀಡಲಾಗುತ್ತದೆ. ವಿವಿಧ ರೋಗೋದ್ರೇಕಗಳು ಹಾಗೂ ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಜಾನುವಾರುಗಳನ್ನು ವಾಹನದಲ್ಲಿ ಕರೆದುಕೊಂಡು ಹೋಗಿ ಚಿಕಿತ್ಸೆ ಪಡೆಯಬಹುದಾಗಿದೆ. ರೈತರ ಮನೆ ಬಾಗಿಲಿಗೆ ತೆರಳುವ ತಜ್ಞ ಪಶುವೈದ್ಯರು ಹಾಗೂ ಸುಸಜ್ಜಿತ ಪಶು ಚಿಕಿತ್ಸಾ ವಾಹನ ದನ, ಎಮ್ಮೆ, ಕುರಿ, ಮೇಕೆ, ಹಾಗೂ ಇನ್ನಿತರೆ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ಪ್ರಾಣ ಹಾನಿ ಆಗುವುದನ್ನು ತಡೆಗಟ್ಟಲಿದ್ದಾರೆ.


ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೂ ಪಶುವೈದ್ಯಕೀಯ ಆಂಬ್ಯುಲೆನ್ಸ್ ನೀಡಲಾಗುತ್ತಿದೆ. ಇದನ್ನು ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲು ಸರ್ಕಾರ ಮುಂದಾಗಿದೆ. ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಜಾರಿಯಾದ ಈ ಸೇವೆಗೆ ಉತ್ತಮ ಜನಸ್ಪಂದನೆ ಸಿಗುತ್ತಿದೆ. ಅನಾರೋಗ್ಯದಿಂದ ಬಳಲುತ್ತಿರುವ ಜಾನುವಾರುಗಳಿಗೆ ಚಿಕಿತ್ಸೆ ನೀಡಲು ಈ ಸುಸಜ್ಜಿತ ಆಂಬ್ಯುಲೆನ್ಸ್ ರೈತರಿಗೆ ಅನುಕೂಲಕರವಾಗಿದೆ. ಆಂಬ್ಯುಲೆನ್ಸ್‌ಗಳು ಒಟ್ಟು ೩೦,೨೫೫ ಕಿ.ಮೀ. ಕ್ರಮಿಸಿದ್ದು, ಮೇ ತಿಂಗಳಲ್ಲಿ ೪೨ ಜಾನುವಾರುಗಳಿಗೆ ಶಸ್ತ್ರಚಿಕಿತ್ಸೆ ನೀಡಲಾಗಿದೆ. ೭೫ ಗ್ರಾಮಗಳಿಗೆ ತೆರಳಿ ಶಸ್ತ್ರಚಿಕಿತ್ಸೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೂ ಒಂದೊಂದು ಆಂಬ್ಯುಲೆನ್ಸ್ ನೀಡಿದ್ದು, ಪ್ರತಿ ತಾಲ್ಲೂಕಿಗೆ ೨ರಿಂದ ೩ ಆಂಬ್ಯುಲೆನ್ಸ್ ನೀಡಲು ಪ್ರಸ್ತಾವನೆ ಸಲ್ಲಿಸಿದ್ದು, ಸದ್ಯದಲ್ಲೇ ಅನುಮೋದನೆ ಸಿಗಲಿದೆ.

ಷಡಕ್ಷರಿ ಸ್ವಾಮಿ, ಪಶುಸಂಗೋಪನೆ ಇಲಾಖೆ ಜಿಲ್ಲಾ ನಿರ್ದೇಶಕ

andolanait

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

6 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

6 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

6 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

6 hours ago