ಜಿಲ್ಲೆಗಳು

ಹಸಿರು ನಿಯಮ ಕಡ್ಡಾಯದ ನಡುವೆ ಕರಗಿದ ಪಟಾಕಿ ಸಂಭ್ರಮ

ದೀಪಾವಳಿ ಸಂಭ್ರಮ ಮತ್ತೆ ಬಂದಿದೆ. ಜನರು ಹಬ್ಬದ ಆಚರಣೆಗೆ ಸಜ್ಜಾಗಿದ್ದಾರೆ. ಆದರೆ ಹಬ್ಬದ ಪ್ರಮುಖ ಭಾಗವಾಗಿದ್ದ ಪಟಾಕಿ ಅಬ್ಬರ ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಬಂದಿದೆ. ಸುಪ್ರೀಕೋರ್ಟ್‌ ನಿರ್ದೇಶನ, ಸರಕಾರದ ನಿಯಂತ್ರಣ ಕ್ರಮಗಳು ಮತ್ತು ಜನರಲ್ಲಿ ಹೆಚ್ಚುತ್ತಿರುವ ಜಾಗೃತಿಯ ನಡುವೆ ಪಟಾಕಿ ವ್ಯಾಪಾರ ವರ್ಷದಿಂದ ವರ್ಷಕ್ಕೆ ಕುಸಿಯುತ್ತಲೇ ಸಾಗಿದೆ.

ಈ ವರ್ಷದಿಂದ ರಾಜ್ಯದಲ್ಲಿ ಹಸಿರು ಪಟಾಕಿಯನ್ನಷ್ಟೇ ಮಾರಲು ಅವಕಾಶ ನೀಡಲಾಗಿದೆ. ಜತೆಗೆ ಎಲ್ಲ ಪಟಾಕಿ ಲೇಬಲ್‌ ಗಳ ಮೇಲೆ ಕ್ಯೂ. ಆರ್‌. ಕೋಡ್‌ ಕಡ್ಡಾಯಗೊಳಿಸಲಾಗಿದೆ. ಈ ಎಲ್ಲ ನಿರ್ಬಂಧಗಳ ನಡುವೆಯೂ ಮೈಸೂರಿನ ಜೆ.ಕೆ. ಮೈದಾನದಲ್ಲಿ ಎಂದಿನಂತೆ ಮೈಸೂರಿನ ಪಟಾಕಿ ವ್ಯಾಪಾರಸ್ಥರ ಸಂಘದ ವತಿಯಿಂದ ಮಳಿಗೆಗಳನ್ನು ಹಾಕಲಾಗಿದೆ. ಆದರೆ ದೀಪಾವಳಿಗೆ ಮುನ್ನವೇ ನೂರಾರು ಸಂಖ್ಯೆಯಲ್ಲಿ ಧಾಂಗುಡಿ ಇಡುತ್ತಿದ್ದ ಗ್ರಾಹಕರ ಅಬ್ಬರ ಈ ಬಾರಿ ಕಾಣಿಸುತ್ತಿಲ್ಲ. ವ್ಯಾಪಾರಸ್ಥರ ಮೊಗದಲ್ಲೂ ಈ ಬಗ್ಗೆ ಚಿಂತೆಯ ಗೆರೆಗಳು ಮೂಡಿವೆ.

 

ಈ ಬಾರಿ ಸರಕಾರದ ನಿರ್ದೇಶನದಂತೆ ಹಸಿರು ಪಟಾಕಿಗಳನ್ನಷ್ಟೇ ಮಾರುತ್ತಿದ್ದೇವೆ. ಇದರಿಂದ ಪರಿಸರ ಮಾಲಿನ್ಯದ ಭಯವಿಲ್ಲ. ಈ ಬಾರಿ ಕ್ಯೂಆರ್‌ ಕೋಡ್‌ ಕಡ್ಡಾಯಗೊಳಿಸಿರುವುದರಿಂದ ಗ್ರಾಹಕರು ಕೋಡ್‌ ಸ್ಕ್ಯಾನ್‌ ಮಾಡಿ ಅದು ಎಲ್ಲಿ ಉತ್ಪಾದನೆಯಾಗಿದೆ ಎನ್ನುವುದನ್ನೂ ತಿಳಿದುಕೊಳ್ಳಬಹುದು. ನಕಲಿ ಪಟಾಕಿಗಳ ಪತ್ತೆಗೆ ಇದು ಸಹಕಾರಿಯಾಗಿದೆ. ಗ್ರಾಹಕರು ಧೈರ್ಯವಾಗಿ ಪಟಾಕಿ ಖರೀದಿಸಬಹುದು ಎಂದು ಆಂದೋಲನ ಡಿಜಿಟಲ್‌ ಜತೆ ಮಾತನಾಡಿದ ಪಟಾಕಿ ವರ್ತಕರ ಸಂಘದ ಉಪಾಧ್ಯಕ್ಷ ಶರತ್‌ ಸತೀಶ್‌‌ ಅವರು ತಿಳಿಸಿದ್ದಾರೆ.

ಮಳೆ ಇನ್ನೂ ಮುಂದುವರಿದಿದೆ. ಈ ಕಾರಣದಿಂದ ಜನರು ಪಟಾಕಿ ಖರೀದಿಗೆ ಆಸಕ್ತಿ ತೋರಿಸಿಲ್ಲ. ಮಳೆ ಬಿಡುವು ನೀಡಿದರೆ ಇಂದು ಸಂಜೆಯಿಂದಲೇ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದೆ ಎಂದು ಪಟಾಕಿ ವರ್ತಕರ ಸಂಘದ ಅಧ್ಯಕ್ಷ ಮಂಜುನಾಥ್‌ ಆಂದೋಲನಕ್ಕೆ ತಿಳಿಸಿದರು.

ವರ್ಷಕ್ಕೊಮ್ಮೆ ಜೆ.ಕೆ.ಮೈದಾನದಲ್ಲಿ ಪಟಾಕಿ ಮಳಿಗೆ ಹಾಕಿ ಅದರಿಂದ ಬಂದ ಆದಾಯದಿಂದಲೇ ಕುಟುಂಬ ನಿರ್ವಹಣೆ ಮಾಡುವ ಹಲವು ಕುಟುಂಬಗಳಿವೆ. ಇವರೆಲ್ಲರೂ ವ್ಯಾಪಾರ ಗರಿದೆದರುವ ನಿರೀಕ್ಷೆಯಲ್ಲಿದ್ದಾರೆ.

andolana

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

9 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

13 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

13 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

13 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

14 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

14 hours ago