ಜಿಲ್ಲೆಗಳು

ಹಸಿರು ನಿಯಮ ಕಡ್ಡಾಯದ ನಡುವೆ ಕರಗಿದ ಪಟಾಕಿ ಸಂಭ್ರಮ

ದೀಪಾವಳಿ ಸಂಭ್ರಮ ಮತ್ತೆ ಬಂದಿದೆ. ಜನರು ಹಬ್ಬದ ಆಚರಣೆಗೆ ಸಜ್ಜಾಗಿದ್ದಾರೆ. ಆದರೆ ಹಬ್ಬದ ಪ್ರಮುಖ ಭಾಗವಾಗಿದ್ದ ಪಟಾಕಿ ಅಬ್ಬರ ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಬಂದಿದೆ. ಸುಪ್ರೀಕೋರ್ಟ್‌ ನಿರ್ದೇಶನ, ಸರಕಾರದ ನಿಯಂತ್ರಣ ಕ್ರಮಗಳು ಮತ್ತು ಜನರಲ್ಲಿ ಹೆಚ್ಚುತ್ತಿರುವ ಜಾಗೃತಿಯ ನಡುವೆ ಪಟಾಕಿ ವ್ಯಾಪಾರ ವರ್ಷದಿಂದ ವರ್ಷಕ್ಕೆ ಕುಸಿಯುತ್ತಲೇ ಸಾಗಿದೆ.

ಈ ವರ್ಷದಿಂದ ರಾಜ್ಯದಲ್ಲಿ ಹಸಿರು ಪಟಾಕಿಯನ್ನಷ್ಟೇ ಮಾರಲು ಅವಕಾಶ ನೀಡಲಾಗಿದೆ. ಜತೆಗೆ ಎಲ್ಲ ಪಟಾಕಿ ಲೇಬಲ್‌ ಗಳ ಮೇಲೆ ಕ್ಯೂ. ಆರ್‌. ಕೋಡ್‌ ಕಡ್ಡಾಯಗೊಳಿಸಲಾಗಿದೆ. ಈ ಎಲ್ಲ ನಿರ್ಬಂಧಗಳ ನಡುವೆಯೂ ಮೈಸೂರಿನ ಜೆ.ಕೆ. ಮೈದಾನದಲ್ಲಿ ಎಂದಿನಂತೆ ಮೈಸೂರಿನ ಪಟಾಕಿ ವ್ಯಾಪಾರಸ್ಥರ ಸಂಘದ ವತಿಯಿಂದ ಮಳಿಗೆಗಳನ್ನು ಹಾಕಲಾಗಿದೆ. ಆದರೆ ದೀಪಾವಳಿಗೆ ಮುನ್ನವೇ ನೂರಾರು ಸಂಖ್ಯೆಯಲ್ಲಿ ಧಾಂಗುಡಿ ಇಡುತ್ತಿದ್ದ ಗ್ರಾಹಕರ ಅಬ್ಬರ ಈ ಬಾರಿ ಕಾಣಿಸುತ್ತಿಲ್ಲ. ವ್ಯಾಪಾರಸ್ಥರ ಮೊಗದಲ್ಲೂ ಈ ಬಗ್ಗೆ ಚಿಂತೆಯ ಗೆರೆಗಳು ಮೂಡಿವೆ.

 

ಈ ಬಾರಿ ಸರಕಾರದ ನಿರ್ದೇಶನದಂತೆ ಹಸಿರು ಪಟಾಕಿಗಳನ್ನಷ್ಟೇ ಮಾರುತ್ತಿದ್ದೇವೆ. ಇದರಿಂದ ಪರಿಸರ ಮಾಲಿನ್ಯದ ಭಯವಿಲ್ಲ. ಈ ಬಾರಿ ಕ್ಯೂಆರ್‌ ಕೋಡ್‌ ಕಡ್ಡಾಯಗೊಳಿಸಿರುವುದರಿಂದ ಗ್ರಾಹಕರು ಕೋಡ್‌ ಸ್ಕ್ಯಾನ್‌ ಮಾಡಿ ಅದು ಎಲ್ಲಿ ಉತ್ಪಾದನೆಯಾಗಿದೆ ಎನ್ನುವುದನ್ನೂ ತಿಳಿದುಕೊಳ್ಳಬಹುದು. ನಕಲಿ ಪಟಾಕಿಗಳ ಪತ್ತೆಗೆ ಇದು ಸಹಕಾರಿಯಾಗಿದೆ. ಗ್ರಾಹಕರು ಧೈರ್ಯವಾಗಿ ಪಟಾಕಿ ಖರೀದಿಸಬಹುದು ಎಂದು ಆಂದೋಲನ ಡಿಜಿಟಲ್‌ ಜತೆ ಮಾತನಾಡಿದ ಪಟಾಕಿ ವರ್ತಕರ ಸಂಘದ ಉಪಾಧ್ಯಕ್ಷ ಶರತ್‌ ಸತೀಶ್‌‌ ಅವರು ತಿಳಿಸಿದ್ದಾರೆ.

ಮಳೆ ಇನ್ನೂ ಮುಂದುವರಿದಿದೆ. ಈ ಕಾರಣದಿಂದ ಜನರು ಪಟಾಕಿ ಖರೀದಿಗೆ ಆಸಕ್ತಿ ತೋರಿಸಿಲ್ಲ. ಮಳೆ ಬಿಡುವು ನೀಡಿದರೆ ಇಂದು ಸಂಜೆಯಿಂದಲೇ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದೆ ಎಂದು ಪಟಾಕಿ ವರ್ತಕರ ಸಂಘದ ಅಧ್ಯಕ್ಷ ಮಂಜುನಾಥ್‌ ಆಂದೋಲನಕ್ಕೆ ತಿಳಿಸಿದರು.

ವರ್ಷಕ್ಕೊಮ್ಮೆ ಜೆ.ಕೆ.ಮೈದಾನದಲ್ಲಿ ಪಟಾಕಿ ಮಳಿಗೆ ಹಾಕಿ ಅದರಿಂದ ಬಂದ ಆದಾಯದಿಂದಲೇ ಕುಟುಂಬ ನಿರ್ವಹಣೆ ಮಾಡುವ ಹಲವು ಕುಟುಂಬಗಳಿವೆ. ಇವರೆಲ್ಲರೂ ವ್ಯಾಪಾರ ಗರಿದೆದರುವ ನಿರೀಕ್ಷೆಯಲ್ಲಿದ್ದಾರೆ.

andolana

Recent Posts

ಮಂತ್ರಾಲಯಕ್ಕೆ ಭೇಟಿ ನೀಡಿದ ನಟ ರಿಷಬ್‌ ಶೆಟ್ಟಿ ಕುಟುಂಬ

ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.…

15 mins ago

ಬಿಪಿಎಲ್‌ ಕಾರ್ಡ್‌ದಾರರಿಗೆ ಜನವರಿಯಿಂದ ಇಂದಿರಾ ಕಿಟ್:‌ ಸಚಿವ ಮುನಿಯಪ್ಪ

ಬೆಂಗಳೂರು: ಬಿಪಿಎಲ್‌ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.…

31 mins ago

ಅಶ್ಲೀಲ ಮೆಸೇಜ್:‌ ಪೊಲೀಸ್‌ ಕಮಿಷನರ್‌ಗೆ ದೂರು ನೀಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

ಬೆಂಗಳೂರು: ನಟ ದರ್ಶನ್‌ ಹಾಗೂ ನಟ ಕಿಚ್ಚ ಸುದೀಪ್‌ ಫ್ಯಾನ್ಸ್‌ ವಾರ್‌ ತಾರಕಕ್ಕೇರಿರುವ ಮಧ್ಯೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌…

55 mins ago

ಸರ್ಫರಾಜ್‌ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಪ್ರತಿಕ್ರಿಯೆ

ಮೈಸೂರು:  ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…

1 hour ago

ಮುಂದಿನ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್‌ ಪಕ್ಷವನ್ನು ಹೊರಗೆ ಕಳಿಸೋದು ಗ್ಯಾರಂಟಿ: ಆರ್.‌ಅಶೋಕ್‌

ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…

1 hour ago

ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಡಾ. ಶಾಮನೂರು ಶಿವಶಂಕಪ್ಪಗೆ ನುಡಿ ನಮನ

ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…

2 hours ago