ಮಂಡ್ಯ: ಡಿಸೆಂಬರ್ 30ರಂದು ಅಮಿತ್ ಶಾ ಮಂಡ್ಯ ಜಿಲ್ಲೆಗೆ ಬರುತ್ತಿರುವುದರಲ್ಲಿ ಆಶ್ಚರ್ಯ ಪಡಬೇಕಿಲ್ಲ.ಮುಂದಿನ ಮೇ ತಿಂಗಳ ವರೆಗೆ ಅಮಿತ್ ಶಾ ಹಾಗೂ ಮೋದಿ ಕರ್ನಾಟಕಕ್ಕೆ ಬರುತ್ತಲೇ ಇರುತ್ತಾರೆ.ಅವರು ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಬರುತ್ತಿಲ್ಲ, ಮತ ಕೇಳಲು ಬರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.
ಶ್ರೀರಂಗಪಟಣ ತಾಲೂಕಿನ ಕೆಆರ್ಎಸ್ ನಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಡಕ್ಕೆ ಅಮಿತಾ ಬರುವುದರಲ್ಲಿ ಆಶ್ಚರ್ಯವೇನೂ ಇಲ್ಲ. ಅವರಿಗೆ ಜನನ ಸಮಸ್ಯೆಗಳಿಗೆ ಪರಿಹಾರ ಸೂಚಿಸುವುದಕ್ಕಿಂತ ಮತಗೊಳಿಸುವುದೇ ಮುಖ್ಯ. ಅದಕ್ಕಾಗಿ ಬರುತ್ತಿದ್ದಾರೆ. ಈಗಾಗಲೇ ಮಂತ್ರಿಗಳ ದಂಡೇ ರಾಜ್ಯಕ್ಕೆ ಬರುತ್ತಿದೆ.ಮೋದಿ ಕೂಡ ಬರುತ್ತಾರೆ. ಅದರಿಂದ ನಮಗೇನು ತೊಂದರೆ ಆಗದು ಎಂದು ತಿಳಿಸಿದರು.
*ಜನತೆ ತೀರ್ಮಾನಿಸುತ್ತಾರೆ*
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಮತ ನೀಡಬೇಡಿ ಎಂದು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ. ಕಾಂಗ್ರೆಸ್ ಶಾಸಕರಾದ ಪಕ್ಷದ ನಾಯಕನಾಗಿ ಅವರು ಜೆಡಿಎಸ್ ಮತ್ತು ಬಿಜೆಪಿಗೆ ಮತ ಹಾಕಬೇಡಿ ಎಂದು ಹೇಳದೆ, ಇನ್ನೇನು ನಮ್ಮ ಜೆಡಿಎಸ್ ಗೆ ಮತ ಹಾಕಲಿ ಎಂದು ಹೇಳಲು ಸಾಧ್ಯವೇ? ಇಂದು ಬಹಳ ಜನರಿಗೆ ಸಿಎಂ ಆಗಲು ಆಸೆ ಇದೆ. ಆದರೆ ಅಂತಿಮವಾಗಿ ದೇವರು ಮತ್ತು ಜನತೆಯ ಆಶೀರ್ವಾದ ಯಾರ ಪರವಾಗಿರುತ್ತೋ ಅವರು ಸಿಎಂ ಆಗ್ತಾರೆ ಎಂದರು.
*7ಕ್ಕೆ 7 ಸ್ಥಾನ*
ಮಂಡ್ಯ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆಗೆ ಅತ್ಯುದ್ಬುತವಾದ ಬೆಂಬಲವನ್ನು ಈ ಭಾಗದ ಜನತೆ ತೋರಿಸಿದ್ದಾರೆ. ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಜನತೆಯ ಆಶೀರ್ವಾದ ಜೆಡಿಎಸ್ ಅಭ್ಯರ್ಥಿಗಳ ಪರವಾಗಿದ್ದು, ಈ ಬಾರಿಯೂ ಕಳೆದ ಬಾರಿಗಿಂತ ಹೆಚ್ಚು ಅಂತರದಿಂದ ಏಳು ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ಆತ್ಮವಿಶ್ವಾಸ ಮೂಡಿದೆ ಎಂದರು.
ಕೊರೋನಾ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮುಂಜಾಗ್ರತ ಕ್ರಮವನ್ನು ಸರ್ಕಾರ ತೆಗೆದುಕೊಳ್ಳಲಿ. ಜನತೆ ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರವೇ ಮುಂದೆ ಎಲ್ಲಾ ಸೌಕರ್ಯಗಳನ್ನು ಒದಗಿಸಬೇಕು ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಸಿ. ಎಸ್. ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ,ಜಿಲ್ಲಾಧ್ಯಕ್ಷ ಡಿ. ರಮೇಶ್,ಮನ್ಮುಲ್ ಅಧ್ಯಕ್ಷ ಬಿ.ಆರ್. ರಾಮಚಂದ್ರ ಮತ್ತಿತರರು ಉಪಸ್ಥಿತರಿದ್ದರು.
ವೈಡ್ ಆಂಗಲ್ ನಿರ್ದೇಶಕ ಚೈತನ್ಯ ಇಮ್ಮಡಿ ಪುಲಿಕೇಶಿಯ ಜೀವನ ಯಾನವನ್ನು ಮುಂಬೈ ಮೂಲದ ನಿರ್ಮಾಣ ಸಂಸ್ಥೆಗಾಗಿ ಬೆಳ್ಳಿತೆರೆಗೆ ನಿರ್ದೇಶಿಸಲಿದ್ದಾರೆ. ಅದರ…
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಏ.೨೪ರಂದು ಪ್ರಕಟವಾಗಲಿದೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದರು ಎಂಬ ನಾಣ್ಣುಡಿಯಂತೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿರುವ…
ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದು ಶಿಕ್ಷಣ ಇಲಾಖೆಯ ವ್ಯವಸ್ಥಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಅಂಕಿಅಂಶಗಳ ಪ್ರಕಾರ…
ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…
ಪ್ರಶಾಂತ್ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…
ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು…