ಜಿಲ್ಲೆಗಳು

ಅಮಿತ್ ಷಾ ಮತ ಕೇಳಲು ಬರುತ್ತಿದ್ದಾರೆ: ಎಚ್.ಡಿ.ಕೆ

ಮಂಡ್ಯ: ಡಿಸೆಂಬರ್ 30ರಂದು ಅಮಿತ್ ಶಾ ಮಂಡ್ಯ ಜಿಲ್ಲೆಗೆ ಬರುತ್ತಿರುವುದರಲ್ಲಿ ಆಶ್ಚರ್ಯ ಪಡಬೇಕಿಲ್ಲ.ಮುಂದಿನ ಮೇ ತಿಂಗಳ ವರೆಗೆ ಅಮಿತ್ ಶಾ ಹಾಗೂ ಮೋದಿ ಕರ್ನಾಟಕಕ್ಕೆ ಬರುತ್ತಲೇ ಇರುತ್ತಾರೆ.ಅವರು ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಬರುತ್ತಿಲ್ಲ, ಮತ ಕೇಳಲು ಬರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.

ಶ್ರೀರಂಗಪಟಣ ತಾಲೂಕಿನ ಕೆಆರ್‌ಎಸ್‌ ನಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಡಕ್ಕೆ ಅಮಿತಾ ಬರುವುದರಲ್ಲಿ ಆಶ್ಚರ್ಯವೇನೂ ಇಲ್ಲ. ಅವರಿಗೆ ಜನನ ಸಮಸ್ಯೆಗಳಿಗೆ ಪರಿಹಾರ ಸೂಚಿಸುವುದಕ್ಕಿಂತ ಮತಗೊಳಿಸುವುದೇ ಮುಖ್ಯ. ಅದಕ್ಕಾಗಿ ಬರುತ್ತಿದ್ದಾರೆ‌‌. ಈಗಾಗಲೇ ಮಂತ್ರಿಗಳ ದಂಡೇ ರಾಜ್ಯಕ್ಕೆ ಬರುತ್ತಿದೆ‌.ಮೋದಿ ಕೂಡ ಬರುತ್ತಾರೆ. ಅದರಿಂದ ನಮಗೇನು ತೊಂದರೆ ಆಗದು ಎಂದು ತಿಳಿಸಿದರು.

*ಜನತೆ ತೀರ್ಮಾನಿಸುತ್ತಾರೆ*
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಮತ ನೀಡಬೇಡಿ ಎಂದು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ. ಕಾಂಗ್ರೆಸ್ ಶಾಸಕರಾದ ಪಕ್ಷದ ನಾಯಕನಾಗಿ ಅವರು ಜೆಡಿಎಸ್ ಮತ್ತು ಬಿಜೆಪಿಗೆ ಮತ ಹಾಕಬೇಡಿ ಎಂದು ಹೇಳದೆ, ಇನ್ನೇನು ನಮ್ಮ ಜೆಡಿಎಸ್ ಗೆ ಮತ ಹಾಕಲಿ ಎಂದು ಹೇಳಲು ಸಾಧ್ಯವೇ? ಇಂದು ಬಹಳ ಜನರಿಗೆ ಸಿಎಂ ಆಗಲು ಆಸೆ ಇದೆ. ಆದರೆ ಅಂತಿಮವಾಗಿ ದೇವರು ಮತ್ತು ಜನತೆಯ ಆಶೀರ್ವಾದ ಯಾರ ಪರವಾಗಿರುತ್ತೋ ಅವರು ಸಿಎಂ ಆಗ್ತಾರೆ ಎಂದರು.

*7ಕ್ಕೆ 7 ಸ್ಥಾನ*
ಮಂಡ್ಯ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆಗೆ ಅತ್ಯುದ್ಬುತವಾದ ಬೆಂಬಲವನ್ನು ಈ ಭಾಗದ ಜನತೆ ತೋರಿಸಿದ್ದಾರೆ. ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಜನತೆಯ ಆಶೀರ್ವಾದ ಜೆಡಿಎಸ್ ಅಭ್ಯರ್ಥಿಗಳ ಪರವಾಗಿದ್ದು, ಈ ಬಾರಿಯೂ ಕಳೆದ ಬಾರಿಗಿಂತ ಹೆಚ್ಚು ಅಂತರದಿಂದ ಏಳು ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ಆತ್ಮವಿಶ್ವಾಸ ಮೂಡಿದೆ ಎಂದರು.

ಕೊರೋನಾ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮುಂಜಾಗ್ರತ ಕ್ರಮವನ್ನು ಸರ್ಕಾರ ತೆಗೆದುಕೊಳ್ಳಲಿ. ಜನತೆ ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರವೇ ಮುಂದೆ ಎಲ್ಲಾ ಸೌಕರ್ಯಗಳನ್ನು ಒದಗಿಸಬೇಕು ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಸಿ. ಎಸ್. ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ,ಜಿಲ್ಲಾಧ್ಯಕ್ಷ ಡಿ. ರಮೇಶ್,ಮನ್ಮುಲ್ ಅಧ್ಯಕ್ಷ ಬಿ‌.ಆರ್. ರಾಮಚಂದ್ರ ಮತ್ತಿತರರು ಉಪಸ್ಥಿತರಿದ್ದರು.

andolanait

Recent Posts

ಶಿವಾಜಿ ಗಣೇಶನ್ ಅವರ ವಾರದ ಅಂಕಣ : ಬಂಗಾಳ, ತಮಿಳುನಾಡಿನ ರಾಜಕಾರಣದಲ್ಲಿ ಬಿರುಗಾಳಿ

ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…

1 hour ago

ಭಾನುವಾರದ ಹಾಡುಪಾಡು | ಆಡುಮಾತಿಗೆ ಹತ್ತಿರವಿರುವ ಕಾವ್ಯಾನುವಾದ

ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…

2 hours ago

ಭಾನುವಾರದ ಹಾಡುಪಾಡು | ವಿಯಟ್ಟಾಮಿನಲ್ಲೂ ಹುಡುಗಿಯರೇ ಸ್ಟ್ರಾಂಗೂ ಗುರೂ

ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…

2 hours ago

ಭಾನುವಾರದ ಹಾಡುಪಾಡು | “ಇಲ್ಲ ಕಣ್‌ ಪುಟ್ರಂಗಾ, ಡಿಕೆ ಏನಾರೂ ಮಾಡದ್ರೂ ಮಾಡಬೋದು ಅನಿಸ್ತಾದೆ”

• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್‌ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು.…

2 hours ago

ಎಲ್‌ಪಿಜಿ ಸಿಲಿಂಡರ್‌ ದರ ಮತ್ತೆ ಏರಿಕೆ ; ಪರಿಷ್ಕೃತ ದರ ಇಂದಿನಿಂದಲೇ ಜಾರಿ

ಹೊಸದಿಲ್ಲಿ :  ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 7 ಭಾನುವಾರ

5 hours ago