ಜಿಲ್ಲೆಗಳು

ಅಮಿತ್ ಷಾ ಮತ ಕೇಳಲು ಬರುತ್ತಿದ್ದಾರೆ: ಎಚ್.ಡಿ.ಕೆ

ಮಂಡ್ಯ: ಡಿಸೆಂಬರ್ 30ರಂದು ಅಮಿತ್ ಶಾ ಮಂಡ್ಯ ಜಿಲ್ಲೆಗೆ ಬರುತ್ತಿರುವುದರಲ್ಲಿ ಆಶ್ಚರ್ಯ ಪಡಬೇಕಿಲ್ಲ.ಮುಂದಿನ ಮೇ ತಿಂಗಳ ವರೆಗೆ ಅಮಿತ್ ಶಾ ಹಾಗೂ ಮೋದಿ ಕರ್ನಾಟಕಕ್ಕೆ ಬರುತ್ತಲೇ ಇರುತ್ತಾರೆ.ಅವರು ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಬರುತ್ತಿಲ್ಲ, ಮತ ಕೇಳಲು ಬರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.

ಶ್ರೀರಂಗಪಟಣ ತಾಲೂಕಿನ ಕೆಆರ್‌ಎಸ್‌ ನಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಡಕ್ಕೆ ಅಮಿತಾ ಬರುವುದರಲ್ಲಿ ಆಶ್ಚರ್ಯವೇನೂ ಇಲ್ಲ. ಅವರಿಗೆ ಜನನ ಸಮಸ್ಯೆಗಳಿಗೆ ಪರಿಹಾರ ಸೂಚಿಸುವುದಕ್ಕಿಂತ ಮತಗೊಳಿಸುವುದೇ ಮುಖ್ಯ. ಅದಕ್ಕಾಗಿ ಬರುತ್ತಿದ್ದಾರೆ‌‌. ಈಗಾಗಲೇ ಮಂತ್ರಿಗಳ ದಂಡೇ ರಾಜ್ಯಕ್ಕೆ ಬರುತ್ತಿದೆ‌.ಮೋದಿ ಕೂಡ ಬರುತ್ತಾರೆ. ಅದರಿಂದ ನಮಗೇನು ತೊಂದರೆ ಆಗದು ಎಂದು ತಿಳಿಸಿದರು.

*ಜನತೆ ತೀರ್ಮಾನಿಸುತ್ತಾರೆ*
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಮತ ನೀಡಬೇಡಿ ಎಂದು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ. ಕಾಂಗ್ರೆಸ್ ಶಾಸಕರಾದ ಪಕ್ಷದ ನಾಯಕನಾಗಿ ಅವರು ಜೆಡಿಎಸ್ ಮತ್ತು ಬಿಜೆಪಿಗೆ ಮತ ಹಾಕಬೇಡಿ ಎಂದು ಹೇಳದೆ, ಇನ್ನೇನು ನಮ್ಮ ಜೆಡಿಎಸ್ ಗೆ ಮತ ಹಾಕಲಿ ಎಂದು ಹೇಳಲು ಸಾಧ್ಯವೇ? ಇಂದು ಬಹಳ ಜನರಿಗೆ ಸಿಎಂ ಆಗಲು ಆಸೆ ಇದೆ. ಆದರೆ ಅಂತಿಮವಾಗಿ ದೇವರು ಮತ್ತು ಜನತೆಯ ಆಶೀರ್ವಾದ ಯಾರ ಪರವಾಗಿರುತ್ತೋ ಅವರು ಸಿಎಂ ಆಗ್ತಾರೆ ಎಂದರು.

*7ಕ್ಕೆ 7 ಸ್ಥಾನ*
ಮಂಡ್ಯ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆಗೆ ಅತ್ಯುದ್ಬುತವಾದ ಬೆಂಬಲವನ್ನು ಈ ಭಾಗದ ಜನತೆ ತೋರಿಸಿದ್ದಾರೆ. ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಜನತೆಯ ಆಶೀರ್ವಾದ ಜೆಡಿಎಸ್ ಅಭ್ಯರ್ಥಿಗಳ ಪರವಾಗಿದ್ದು, ಈ ಬಾರಿಯೂ ಕಳೆದ ಬಾರಿಗಿಂತ ಹೆಚ್ಚು ಅಂತರದಿಂದ ಏಳು ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ಆತ್ಮವಿಶ್ವಾಸ ಮೂಡಿದೆ ಎಂದರು.

ಕೊರೋನಾ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮುಂಜಾಗ್ರತ ಕ್ರಮವನ್ನು ಸರ್ಕಾರ ತೆಗೆದುಕೊಳ್ಳಲಿ. ಜನತೆ ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರವೇ ಮುಂದೆ ಎಲ್ಲಾ ಸೌಕರ್ಯಗಳನ್ನು ಒದಗಿಸಬೇಕು ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಸಿ. ಎಸ್. ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ,ಜಿಲ್ಲಾಧ್ಯಕ್ಷ ಡಿ. ರಮೇಶ್,ಮನ್ಮುಲ್ ಅಧ್ಯಕ್ಷ ಬಿ‌.ಆರ್. ರಾಮಚಂದ್ರ ಮತ್ತಿತರರು ಉಪಸ್ಥಿತರಿದ್ದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago