ಮೈಸೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ‘ಅಮೃತ ಭಾರತಿಗೆ ಕನ್ನಡದಾರತಿ’ ಎಂಬ ಅಮೃತ ಪುಸ್ತಕ ಮಾರಾಟ ಅಭಿಯಾನ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನವನ್ನು
ಆ.10ರಂದು ನಗರದಲ್ಲಿ ಆಯೋಜಿಸಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಆವರಣದಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕಿ ಡಾ.ವಿಜಯಕುಮಾರಿ ಕರಿಕಲ್ ಹಾಗೂ ಪುಸ್ತಕ ಮಾರಾಟಕ್ಕೆ ಪ್ರಾಧ್ಯಾಪಕಿ ಎಸ್.ಡಿ.ಶಶಿಕಲಾ ಚಾಲನೆ ನೀಡುವರು.
ಮಧ್ಯಾಹ್ನ 12 ಗಂಟೆಗೆ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಗಿರಿಧರ ರಾವ್ ಹಾಗೂ ಪುಸ್ತಕ ಮಾರಾಟಕ್ಕೆ ಮಹಾರಾಣಿ ಮಹಿಳಾ ಕಾಲೇಜಿನ ಪ್ರಚಾರ್ಯರಾದ ಪ್ರೊ.ಶ್ರೀನಿವಾಸ್ ಚಾಲನೆ ನೀಡುವರು. ಕನ್ನಡ ವಿಭಾಗದ ಮುಖ್ಯಸ್ಥರಾದ ವಿಜಯಲಕ್ಷ್ಮಿ, ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯೋಜಕಿ ಡಾ.ಎಚ್.ಎಂ.ಕಲಾಶ್ರೀ, ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾದ ನಲ್ಲತಂಬಿ ಹಾಗೂ ವೈ.ಸಿ.ಭಾನುಮತಿ ಉಪಸ್ಥಿತರಿರುವರು.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪುಸ್ತಕಗಳು ಶೇ 50ರಷ್ಟು ದರದಲ್ಲಿ ಮಾರಾಟ ಇರುತ್ತದೆ ಎಂದು ಅಕಾಡೆಮಿ ಅಧ್ಯಕ್ಷರಾದ ಡಾ. ಬಿ.ವಿ.ವಸಂತಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…