ಜಿಲ್ಲೆಗಳು

ಅಮೃತ ಶಾಲಾ ಸೌಲಭ್ಯ ಯೋಜನೆಯಡಿ ಶಾಲೆಗಳ ಅಭಿವೃದ್ಧಿ

ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಆಯ್ಕೆಯಾಗಿದ್ದ  ಕೊಡಗಿನ 16 ಶಾಲೆಗಳು

ಪುನೀತ್ ಮಡಿಕೇರಿ
ಮಡಿಕೇರಿ: ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಆಯ್ಕೆಯಾಗಿದ್ದ ಕೊಡಗು ಜಿಲ್ಲೆಯ ೧೬ ಶಾಲೆಗಳು ಅಮೃತ ಶಾಲಾ ಸೌಲಭ್ಯ ಯೋಜನೆಯಡಿ ಅಭಿವೃದ್ಧಿ ಕಂಡಿದ್ದು, ಶಾಲಾ ವಾತಾವರಣ ಮತ್ತಷ್ಟು ಕಲಿಕಾ ಸ್ನೇಹಿಯಾಗಿ ಬದಲಾಗಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವ ನೆನಪಿನಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಹೊಸ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಮುಂದಾಗಿದ್ದು, ಇದೇ ನಿಟ್ಟಿನಲ್ಲಿ ೨೦೨೧-೨೨ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳ ಅಭಿವೃದ್ಧಿಗೂ ಸರ್ಕಾರ ಯೋಜನೆ ಹಮ್ಮಿಕೊಂಡಿತ್ತು. ಇದರಲ್ಲಿ ಜಿಲ್ಲೆಯ ೧೬ ಶಾಲೆಗಳು ಆಯ್ಕೆಯಾಗಿದ್ದವು. ಪ್ರಸ್ತುತ ೧೨ ಶಾಲೆಗಳಲ್ಲಿ ನಾನಾ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದ್ದು, ನಾಲ್ಕು ಶಾಲೆಗಳಲ್ಲಿ ಕೊನೆಯ ಹಂತದ ನಾನಾ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ.


ಶಾಲಾ-ಕಾಲೇಜುಗಳನ್ನು ಗುರುತಿಸಿ, ಅಲ್ಲಿನ ವಿದ್ಯಾರ್ಥಿಗಳನ್ನು ಸಮುದಾಯ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಲು ಅಮೃತ ಸಮುದಾಯ ಅಭಿವೃದ್ಧಿ ಯೋಜನೆ ರೂಪಿಸಲಾಗಿದೆ. ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಕುಶಾಲನಗರ ತಾಲ್ಲೂಕಿನ ೩ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ೪ ಶಾಲೆಗಳು ಆಯ್ಕೆಯಾಗಿದ್ದವು. ತಲಾ ೧೦ ಲಕ್ಷ ರೂ. ವೆಚ್ಚದಲ್ಲಿ ಶಾಲೆಗೆ ಬೇಕಿರುವ ಸುಸಜ್ಜಿತ ಕಟ್ಟಡ, ಪ್ರೋಂಗಾಲುಂ, ಗ್ರಂಥಾಲುಯ, ಶೌಚಾಲಯ ಮತ್ತಿತರೆ ಸೌಲಭ್ಯಗಳನ್ನು ಪಡೆದುಕೊಳ್ಳಲು ಅಮೃತ ಶಾಲಾ ಸೌಲಭ್ಯ ಯೋಜನೆಯಲ್ಲಿ ಅವಕಾಶ ಕಲ್ಪಿಸಲಾಗಿತ್ತು.


ಜಿಲ್ಲೆಯಲ್ಲಿ ಅತಿ ಹೆಚ್ಚು ಮಕ್ಕಳಿರುವ ಶಾಲೆ, ಆಧುನಿಕ ಸೌಲಭ್ಯಗಳಿಂದ ವಂಚಿತವಾಗಿರುವ ಶಾಲೆಗಳನ್ನು ಆದ್ಯತೆ ಮೇಲೆ ಪರಿಗಣಿಸಿ ಈ ಯೋಜನೆಗೆ ಶಾಲೆಗಳನ್ನು ಆಯ್ಕೆ ವಾಡಲಾಗಿತ್ತು. ಜಿಲ್ಲೆಗೆ ಸಂಬಂಧಿಸಿದಂತೆ ಹೊದವಾಡದ ಆರ್‌ಎಂಎಸ್‌ಎ ಉನ್ನತೀಕರಣ ಪ್ರೌಢಶಾಲೆ, ಸಂಪಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಡಂಗದ ಸ.ಹಿ.ಪ್ರಾ. ಶಾಲೆ, ವಾದಾಪುರದ ಸ.ಪ್ರೌ ಶಾಲೆ, ದೊಡ್ಡಮಳ್ತೆಯ ಸ.ಹಿ.ಪ್ರಾ ಶಾಲೆ, ಕೊಡ್ಲಿಪೇಟೆಯ ಸ.ವಾ.ಪ್ರಾ ಶಾಲೆ, ವಾಲ್ನೂರು ತ್ಯಾಗತ್ತೂರಿನ ಸ.ಹಿ.ಪ್ರಾ ಶಾಲೆ, ಹೆಬ್ಬಾಲೆಯಲ್ಲಿ ಸ.ವಾ.ಪ್ರಾ.ಶಾಲೆ, ಸುಂಟಿಕೊಪ್ಪದ ಸ.ವಾ.ಪ್ರಾ.ಶಾಲೆ, ಹೆಗ್ಗಳದ ಸ.ಹಿ.ಪ್ರಾ.ಶಾಲೆ, ಅಮ್ಮತ್ತಿಯ ಸ.ವಾ.ಪ್ರಾ.ಶಾಲೆ, ಪಾಲಿಬೆಟ್ಟದ ಸ.ವಾ.ಪ್ರಾ.ಶಾಲೆ, ಟಿ.ಶೆಟ್ಟಿಗೇರಿಯ ಸ.ವಾ.ಪ್ರಾ.ಶಾಲೆ, ತಿತಿಮತಿಯ ಸ.ಹಿ.ಪ್ರಾ ಶಾಲೆ, ಗೋಣಿಕೊಪ್ಪ ಸ.ವಾ.ಪ್ರಾ ಶಾಲೆ ಮತ್ತು ಕುಟ್ಟದ ಸ.ಹಿ.ಪ್ರಾ ಶಾಲೆ ಆಯ್ಕೆಯಾಗಿತ್ತು. ಸದ್ಯ ವಾದಾಪುರದ ಸ.ಪ್ರೌ ಶಾಲೆ, ಕೊಡ್ಲಿಪೇಟೆ ಸ.ವಾ.ಪ್ರಾ ಶಾಲೆ, ಕಡಂಗದ ಸ.ಹಿ.ಪ್ರಾ. ಶಾಲೆ ಹಾಗೂ ಕುಟ್ಟದ ಸ.ಹಿ.ಪ್ರಾ ಶಾಲೆಯ ಪ್ರಗತಿ ಕಾರ್ಯ ಅಂತಿಮ ಹಂತದಲ್ಲಿದೆ.
ಯೋಜನೆಗೆ ಆಯ್ಕೆಯಾದ ಶಾಲೆಗಳು ಆದ್ಯತೆ ಮೇರೆಗೆ ಡಿಜಿಟಲ್ ಗ್ರಂಥಾಲಯ, ಪ್ರಯೋಗಾಲಯ, ಸ್ಮಾರ್ಟ್ ತರಗತಿ, ಕ್ರೀಡಾ ಸಾಮಗ್ರಿ, ನೀರಿನ ಸೌಲಭ್ಯ, ಶೌಚಾಲಯ, ಶಾಲಾ ಮೇಲ್ಛಾವಣಿ, ಶಾಲಾ ಉಪೋಂಗಕ್ಕೆ ಬೋರ್‌ವೆಲ್ ಕೊರೆಸುವುದು, ಕಂಪ್ಯೂಟರ್, ಲ್ಯಾಪ್‌ಟಾಪ್, ಪ್ರೋಜೆಕ್ಟರ್, ಪ್ರಿಂಟರ್, ಲ್ಯಾಬ್ ಮೆಟಿರಿಯಲ್, ಗ್ರೀನ್ ಬೋರ್ಡ್, ವೈಟ್ ವಾರ್ಕರ್ ಬೋರ್ಡ್, ವಾಟರ್ ಫಿಲ್ಟರ್, ಮೈಕ್ ಸೆಟ್, ಹೈಟೆಕ್ ಶೌಚಾಲಯ, 100 ಮೀ. ಕಾಂಪೌಂಡ್, ಶುದ್ಧ ಕುಡಿಯುವ ನೀರಿನ ಘಟಕ, ಶಾಲಾ ಗ್ರಂಥಾಲಯಕ್ಕೆ ಬೇಕಾದ ಕಪಾಟುಗಳು, ೧೦ನೇ ತರಗತಿ ಕೊಠಡಿಗಳಿಗೆ ಸುಣ್ಣ-ಬಣ್ಣ, ನೆಲದ ಹಾಸು, ಪ್ರಯೋಗಾಲಕ್ಕೆ ಸೀಲಿಂಗ್, ಶಾಲೆಯ ಮುಂಭಾಗದ ಕಟ್ಟಡಗಳಿಗೆ ಸುಣ್ಣ-ಬಣ್ಣ, ಗ್ರಂಥಾಲಯಗಳಿಗೆ ಕುರ್ಚಿ, ಅಲ್ಮೇರಾ, ಮೇಜು, ರ್ಯಾಕ್, ಕೊಠಡಿಗಳಿಗೆ ಟೈಲ್ಸ್‌ಗಳನ್ನು ಅಳವಡಿಸಿಕೊಂಡಿದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

4 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

4 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

5 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

7 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

10 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

10 hours ago