ಜಿಲ್ಲೆಗಳು

ಕೃಷ್ಣ ಮೃಗದ ಚರ್ಮ ಮಾರಾಟಕ್ಕೆ ಯತ್ನ; ಬಂಧನ

ಮಡಿಕೇರಿ: ಕೃಷ್ಣ ಮೃಗದ ಚರ್ಮವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ.

ಚಿತ್ರದುರ್ಗದ ನಿವಾಸಿಗಳಾದ ನರಸಿಂಹ ಮೂರ್ತಿ ಹಾಗೂ ನಾಗರಾಜು ಎಂಬವರು ಬಂಧಿತ ಆರೋಪಿಗಳು.

ನ.೩೦ರಂದು ಕುಶಾಲನಗರದ ಕಾರ್ಯಪ್ಪ ವೃತ್ತದಿಂದ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ತೆರಳುವ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳು ಕೃಷ್ಣ ಮೃಗದ ಚರ್ಮವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ, ಆರೋಪಿಗಳಿಂದ ೧ ಕೃಷ್ಣ ಮೃಗದ ಚರ್ಮವನ್ನು ವಶಕ್ಕೆ ಪಡೆಯಲಾಗಿದೆ.

ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್‌ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ.ವಿಶ್ವನಾಥ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯ ಚರಣೆಯಲ್ಲಿ ಮಡಿಕೇರಿ ಅರಣ್ಯ ಸಂಚಾರ ದಳದ ಪಿಎಸ್‌ಐ ಸಿಯು.ಸವಿ, ಸಿಬ್ಬಂದಿಗಳಾದ ಶೇಖರ್, ರಾಘವೇಂದ್ರ, ಯೋಗೇಶ್, ಮೋಹನ, ಸ್ವಾಮಿ ಹಾಗೂ ಮಂಜುನಾಥ ಪಾಲ್ಗೊಂಡಿದ್ದರು.

andolana

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

13 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago