ಜಿಲ್ಲೆಗಳು

ನಾಳೆ ‘ಆಂದೋಲನ 50ರ ಸಾರ್ಥಕ ಪಯಣ’

ಚಾಮರಾಜನಗರ: ‘ಆಂದೋಲನ 50ರ ಸಾರ್ಥಕ ಪಯಣ ಹಾಗೂ ಚಾಮರಾಜನಗರ-25 ಬೆಳ್ಳಿಹಬ್ಬ ಕಾರ್ಯಕ್ರಮ ಜ.26ರಂದು ನಗರದಲ್ಲಿರುವ ವರನಟ ಡಾ.ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿದೆ.

ಬೆಳಿಗ್ಗೆ 11ಗಂಟೆಗೆ ವಸತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ವಿ.ಸೋಮಣ್ಣ ಹಾಗೂ ಸಂಸದ ವಿ.ಶ್ರೀನಿವಾಸಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕರಾದ ಆರ್.ನರೇಂದ್ರ, ಎನ್.ಮಹೇಶ್, ಸಿ.ಎಸ್.ನಿರಂಜನಕುಮಾರ್, ಚಾಮರಾಜನಗರ ನಗರಸಭೆ ಅಧ್ಯಕ್ಷೆ ಆಶಾ ನಟರಾಜು, ಕೊಳ್ಳೇಗಾಲ ನಗರಸಭೆ ಅಧ್ಯಕ್ಷೆ ರೇಖಾ ರಮೇಶ್ ಹಾಗೂ ವಿಶೇಷ ಆಹ್ವಾನಿತರಾಗಿ ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್, ಆಂದೋಲನ ದಿನಪತ್ರಿಕೆ ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ, ಸಂಪಾದಕರಾದ ರವಿ ಕೋಟಿ ಭಾಗವಹಿಸಲಿದ್ದಾರೆ.
ಚಿಂತಕರು, ದೀನಬಂಧು ಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ ಜಿ.ಎಸ್.ಜಯದೇವ್ ಅವರು, ಚಾಮರಾಜನಗರ ಜಿಲ್ಲೆ ಮತ್ತು ತಾಲ್ಲೂಕಿನ ಮುನ್ನೋಟ, ಭಾಷಣ ಮಾಡಲಿದ್ದಾರೆ. ಆಂದೋಲನ 50ರ ಸಾರ್ಥಕ ಪಯಣದ ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಗುವುದು.

andolanait

Recent Posts

ಮೈಸೂರಿನಲ್ಲೇ ಗಾಂಜಾ ಕೇಸು ಜಾಸ್ತಿ ಯಾಕೆ.? ಹೈಕೋರ್ಟ್‌ ಕಳವಳ

ಬೆಂಗಳೂರು: ಲೋಕ್‌ ಅದಾಲತ್‌ನಲ್ಲಿ ಗಾಂಜಾ ಆರೋಪದ ಕೇಸುಗಳನ್ನು ಸೆಟಲ್‌ ಮಾಡಲಾಗುತ್ತದೆಯೇ ಎಂದು ಹೈಕೋರ್ಟ್‌ ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ. ಗಾಂಜಾ ಮಾರಾಟದ…

22 mins ago

ಮಡಿಕೇರಿ| ಜಿಪ್ಸಿ ವಾಹನ ವಶಪಡಿಸಿಕೊಂಡ ಪೊಲೀಸರು: ಕಾರಣ ಏನ್‌ ಗೊತ್ತಾ?

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್‌ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು…

2 hours ago

ರಸ್ತೆ ಮಧ್ಯೆ ಪುಂಡರ ವ್ಹೀಲಿಂಗ್:‌ ವಿಡಿಯೋ ವೈರಲ್‌

ಹಾಸನ: ಪುಂಡರಿಬ್ಬರು ವ್ಹೀಲಿಂಗ್‌ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ…

2 hours ago

ಚಾರ್ಮಾಡಿ ಘಾಟ್‌ ಅರಣ್ಯದಲ್ಲಿ ಮತ್ತೆ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ…

2 hours ago

ವಿರಾಜಪೇಟೆ| ಮಣ್ಣು ಕುಸಿದು ಟಿಪ್ಪರ್ ಚಾಲಕ ಸಾವು

ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ.…

3 hours ago

ಕುಶಾಲನಗರ| ಕಳಪೆ ಕಾಮಗಾರಿಗೆ ಶಾಸಕ ಡಾ.ಮಂಥರ್ ಗೌಡ ಅಸಮಾಧಾನ

ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್‌ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು…

3 hours ago