ಜಿಲ್ಲೆಗಳು

ನಾಳೆ ‘ಆಂದೋಲನ 50ರ ಸಾರ್ಥಕ ಪಯಣ’

ಚಾಮರಾಜನಗರ: ‘ಆಂದೋಲನ 50ರ ಸಾರ್ಥಕ ಪಯಣ ಹಾಗೂ ಚಾಮರಾಜನಗರ-25 ಬೆಳ್ಳಿಹಬ್ಬ ಕಾರ್ಯಕ್ರಮ ಜ.26ರಂದು ನಗರದಲ್ಲಿರುವ ವರನಟ ಡಾ.ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿದೆ.

ಬೆಳಿಗ್ಗೆ 11ಗಂಟೆಗೆ ವಸತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ವಿ.ಸೋಮಣ್ಣ ಹಾಗೂ ಸಂಸದ ವಿ.ಶ್ರೀನಿವಾಸಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕರಾದ ಆರ್.ನರೇಂದ್ರ, ಎನ್.ಮಹೇಶ್, ಸಿ.ಎಸ್.ನಿರಂಜನಕುಮಾರ್, ಚಾಮರಾಜನಗರ ನಗರಸಭೆ ಅಧ್ಯಕ್ಷೆ ಆಶಾ ನಟರಾಜು, ಕೊಳ್ಳೇಗಾಲ ನಗರಸಭೆ ಅಧ್ಯಕ್ಷೆ ರೇಖಾ ರಮೇಶ್ ಹಾಗೂ ವಿಶೇಷ ಆಹ್ವಾನಿತರಾಗಿ ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್, ಆಂದೋಲನ ದಿನಪತ್ರಿಕೆ ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ, ಸಂಪಾದಕರಾದ ರವಿ ಕೋಟಿ ಭಾಗವಹಿಸಲಿದ್ದಾರೆ.
ಚಿಂತಕರು, ದೀನಬಂಧು ಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ ಜಿ.ಎಸ್.ಜಯದೇವ್ ಅವರು, ಚಾಮರಾಜನಗರ ಜಿಲ್ಲೆ ಮತ್ತು ತಾಲ್ಲೂಕಿನ ಮುನ್ನೋಟ, ಭಾಷಣ ಮಾಡಲಿದ್ದಾರೆ. ಆಂದೋಲನ 50ರ ಸಾರ್ಥಕ ಪಯಣದ ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಗುವುದು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

5 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

13 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

13 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

13 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

16 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

16 hours ago