ಜಿಲ್ಲೆಗಳು

ಆಂದೋಲನ ಸಂದರ್ಶನ : ಜಿಲ್ಲೆಯಲ್ಲಿ ವೈದ್ಯರ ಕೊರತೆ ಇಲ್ಲದಂತೆ ಭರ್ತಿ: ಡಾ.ಪ್ರಸಾದ್

‘ಆಂದೋಲನ’ ದಿನಪತ್ರಿಕೆ ನಡೆಸಿದ ಕಿರು ಸಂದರ್ಶನದಲ್ಲಿ ಇಲಾಖೆ ಕಾರ್ಯಕ್ರಮಗಳ ಮಾಹಿತಿ

ಕೆ.ಬಿ.ರಮೇಶನಾಯಕ

ಮೈಸೂರು: ಬಡವರು-ಶ್ರೀಮಂತರು ಎನ್ನುವ ತಾರತಮ್ಯ ಇಲ್ಲದೆ, ಸರ್ವರಿಗೂ ಆರೋಗ್ಯ ಸೇವೆ ನೀಡಬೇಕೆಂಬ ಮಹಾದಾಸೆಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಹಲವಾರು ಕಾರ್ಯಕ್ರಮಗಳನ್ನು ಮೈಸೂರು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ಚಿಕಿತ್ಸಾ ಸೌಲಭ್ಯ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕೆಂಬ ಕಾರಣಕ್ಕಾಗಿ ಹಲವು ಪಿಎಚ್‌ಸಿಗಳನ್ನು ಮೇಲ್ದರ್ಜೇಗೇರಿಸುವ ಮೂಲಕ ಮೂಲಸೌಕರ್ಯವನ್ನು ಒದಗಿಸಲಾಗಿದೆ.
‘ಆಂದೋಲನ’ ದಿನಪತ್ರಿಕೆ ನಡೆಸಿದ ವಿಶೇಷ ಕಿರು ಸಂದರ್ಶನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಕೆ.ಎಚ್.ಪ್ರಸಾದ್ ಅವರು, ಆರೋಗ್ಯ ಇಲಾಖೆಯು ಸಾಧಿಸಿರುವ ಪ್ರಗತಿ, ಸರ್ಕಾರದ ಕಾರ್ಯಕ್ರಮಗಳು, ಸಾರ್ವಜನಿಕರಿಗೆ ಒದಗಿಸುತ್ತಿರುವ ಸೇವೆಗಳ ಕುರಿತು ಮಾಹಿತಿ ಹಂಚಿಕೊಂಡರು.

ಪ್ರಶ್ನೆ: ಜಿಲ್ಲೆಯಲ್ಲಿ ವೈದ್ಯರು, ಸಿಬ್ಬಂದಿ ಕೊರತೆ ಇದೆಯೇ?
ಡಾ.ಕೆ.ಎಚ್.ಪ್ರಸಾದ್: ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದಡಿ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಅನುಮತಿ ದೊರೆತ ಮೇಲೆ ಸಾಕಷ್ಟು ವೈದ್ಯರನ್ನು ನೇಮಕ ಮಾಡಿಕೊಂಡಿರುವ ಕಾರಣ ಈಗ ಯಾವುದೇ ಸಮಸ್ಯೆಗಳಿಲ್ಲ. ಸರ್ಕಾರದಿಂದ ೨೮ ವೈದ್ಯರ ನೇಮಕಾತಿಗೆ ಇತ್ತೀಚೆಗೆ ಅನುಮತಿ ದೊರೆತಿದೆ. ಫಾರ್ಮಾಸಿಸ್ಟ್‌ಗಳ ಕೊರತೆ ನೀಗಿಸಲು ೪೦ ಫಾರ್ಮಾಸಿಸ್ಟ್‌ಗಳು, ೧೦ ಲ್ಯಾಬ್ ಟೆಕ್ನಿಷಿಯನ್‌ಗಳ ನೇಮ ಕಕ್ಕೂ ಒಪ್ಪಿಗೆ ದೊರೆತಿರುವ ಕಾರಣ ಶೀಘ್ರದಲ್ಲೇ ಅರ್ಜಿ ಆಹ್ವಾನಿಸಲಾಗುವುದು. ಮೂರ್ನಾಲ್ಕು ವರ್ಷಗಳ ಹಿಂದೆ ವೈದ್ಯರ ಕೊರತೆ ಇದ್ದಿದ್ದು ನಿಜ. ಈಗ ಅಂತಹ ಸಮಸ್ಯೆ ಇಲ್ಲ.

ಪ್ರಶ್ನೆ: ಹೆಚ್ಚುವರಿ ಪಿಎಚ್‌ಸಿ, ಸಮುದಾಯ ಆರೋಗ್ಯ ಕೇಂದ್ರಗಳ ಸ್ಥಾಪನೆ ಪ್ರಸ್ತಾವನೆ ಇದೆಯೇ?
ಡಾ.ಕೆ.ಎಚ್.ಪ್ರಸಾದ್: ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯುವ ಬಗ್ಗೆ ಪ್ರಸ್ತಾಪ ಮಾಡಿಲ್ಲ. ೩೦ ಸಾವಿರ ಜನಸಂಖ್ಯೆಗೆ ಒಂದು ಪಿಎಚ್‌ಸಿ ಇರುವುದು ಮಾನದಂಡವಾಗಿದೆ. ಆದರೆ, ಜಿಲ್ಲೆಯಲ್ಲಿ ೧೪೮ ಪ್ರಾಥಮಿಕ ಅರೋಗ್ಯ ಕೇಂದ್ರಗಳು, ೧೦ ಸಮುದಾಯ ಆರೋಗ್ಯ ಕೇಂದ್ರಗಳು, ಆರು ತಾಲ್ಲೂಕು ಆಸ್ಪತ್ರೆಗಳು, ಒಂದು ಜಿಲ್ಲಾ ಆಸ್ಪತ್ರೆ ಇದೆ. ಈಗ ಸರ್ಕಾರದಿಂದ ಆರು ನಮ್ಮ ಕ್ಲಿನಿಕ್‌ಗಳು ಮಂಜೂ ರಾಗಿದ್ದು, ಈಗಾಗಲೇ ನಾಲ್ಕು ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲಾಗಿದೆ. ಶ್ರೀರಾಂಪುರ, ಆಲನಹಳ್ಳಿಯಲ್ಲಿ ಪ್ರಾರಂಭಿಸಲು ಸಿದ್ಧತೆ ಮಾಡಲಾಗಿದೆ. ಹಾಗಾಗಿ, ಹೊಸದಾಗಿ ಪಿಎಚ್‌ಸಿಗಳ ಸ್ಥಾಪನೆ ಅಗತ್ಯವಿಲ್ಲ.

ಪ್ರಶ್ನೆ: ಸಮಗ್ರ ಆರೋಗ್ಯ ತಪಾಸಣೆ ಕಾರ್ಯ ಕುಂಠಿತವಾಗಿದೆಯೇ?
ಡಾ.ಕೆ.ಎಚ್.ಪ್ರಸಾದ್: ಜಿಲ್ಲೆಯಲ್ಲಿ ಸಮಗ್ರ ಆರೋಗ್ಯ ತಪಾಸಣೆ ಕಾರ್ಯ ಚುರುಕಿನಿಂದ ನಡೆಯುತ್ತಿದೆ. ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ಮೊದಲಾದ ಸಮಸ್ಯೆಗಳು ಇರುವವರನ್ನು ನೋಂದಣಿ ಮಾಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ೧೬ ಸಾವಿರ ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆಗೆ ಸರ್ಕಾರ ನೀಡಿದ್ದ ಗುರಿಯಲ್ಲಿ ೧೨ ಸಾವಿರ ಜನರಿಗೆ ಮಾಡಲಾಗಿದೆ. ಗರ್ಭಿಣಿಯರು, ಬಾಣಂತಿಯರ ತಪಾಸಣೆ ಕಾರ್ಯ ನಡೆಯುತ್ತಿದೆ. ೧೨ ಅಂಶಗಳ ಆರೋಗ್ಯ ಕಾರ್ಯಕ್ರಮಗಳು ಸಮರ್ಪಕವಾಗಿ ನಡೆಯುತ್ತಿರುವುದರಿಂದ ಯಾವುದೇ ಸಮಸ್ಯೆ ಇಲ್ಲದಂತೆ ನೋಡಿಕೊಳ್ಳಲಾಗಿದೆ.

ಪ್ರಶ್ನೆ: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲ ಸೌಕರ್ಯ ಕೊರತೆ ಇರುವ ಬಗ್ಗೆ ದೂರು ಇದೆಯಲ್ಲಾ?
ಡಾ.ಕೆ.ಎಚ್.ಪ್ರಸಾದ್: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೆಲವು ಕಡೆಗಳಲ್ಲಿ ಕೊಠಡಿಗಳ ಕೊರತೆ ಸೇರಿದಂತೆ ಇನ್ನಿತರೆ ಮೂಲ ಸೌಕರ್ಯ ಇರುವುದರ ಬಗ್ಗೆ ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದರು. ಕೆಲವು ಪಿಎಚ್‌ಸಿಗಳನ್ನು ಮೇಲ್ದರ್ಜೇಗೇರಿಸಲು ಮತ್ತು ಮೂಲ ಸೌಕರ್ಯ ಒದಗಿಸಲು ತಲಾ ೨೦ ಲಕ್ಷ ರೂ.ನಂತೆ ಅನುದಾನ ಬಿಡುಗಡೆಯಾಗಿದೆ. ಪ್ರಯೋಗಾಲಯದ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ. ಕೆಲವು ಕಡೆ ಹೊಸ ಕೊಠಡಿಗಳ ನಿರ್ಮಾಣ ನಡೆಯುತ್ತಿರುವುದರಿಂದ ಶೀಘ್ರದಲ್ಲೇ ಈ ಕೊರತೆ ನೀಗಲಿದೆ.

ಪ್ರಶ್ನೆ: ರೋಗಿಗಳಿಂದ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಜನರಿಂದ ದೂರು ಬರುತ್ತಿರುವ ಬಗ್ಗೆ ಏನು ಹೇಳ್ತೀರಾ?
ಡಾ.ಕೆ.ಎಚ್.ಪ್ರಸಾದ್: ಸರ್ಕಾರ ವೈದ್ಯರಿಗೆ ಸಂಬಳ ಕೊಡುತ್ತದೆ. ಯಾವುದೇ ವೈದ್ಯರಾಗಲಿ ಉಚಿತ ಸೇವೆ ಮಾಡಬೇಕು. ಯಾರೇ ಆಗಿದ್ದರೂ ರೋಗಿಗಳಿಂದ ಹಣ ವಸೂಲಿ ಮಾಡುವ ಬಗ್ಗೆ ದೂರು ಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಯಾರಾದರೂ ಚಿಕಿತ್ಸೆಗೆ ವಿಳಂಬ ಮಾಡಿದರೆ ನೇರವಾಗಿ ದೂರು ಕೊಡಬಹುದು.

ಪ್ರಶ್ನೆ: ಜಿಲ್ಲೆಯಲ್ಲಿ ಆರೋಗ್ಯ ಕರ್ನಾಟಕ ಕಾರ್ಡ್‌ಗಳ ಪ್ರಗತಿ ಹೇಗಿದೆ?
ಡಾ.ಕೆ.ಎಚ್.ಪ್ರಸಾದ್: ಗ್ರಾಮ ಒನ್ ಸೆಂಟರ್‌ಗಳ ಮೂಲಕ ಪ್ರಧಾನಮಂತ್ರಿ ಜನ್ ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು ವಿತರಿಸುವ ಕೆಲಸ ನಡೆಯುತ್ತಿದ್ದು, ಈವರೆಗೆ ೬ ಲಕ್ಷ ಕಾರ್ಡ್‌ಗಳನ್ನು ವಿತರಿಸಲಾ ಗಿದೆ. ಜಿಲ್ಲೆಯಲ್ಲಿ ೨೪ ಲಕ್ಷ ಬಿಪಿಎಲ್ ಕಾರ್ಡ್‌ಗಳಿದ್ದು, ಇವರೆಲ್ಲರಿಗೂ ವಿತರಿಸಲಾಗುತ್ತದೆ. ಆಯುಷ್ಮಾನ್ ಕಾರ್ಡ್ ಪಡೆದುಕೊಂಡಿದ್ದವರಿಗೂ ಕೇಂದ್ರ ಸರ್ಕಾರದ ಆದೇಶದಂತೆ ಪಿಎಂಜೆಎವೈ ಕಾರ್ಡ್ ನೀಡುತ್ತಿದ್ದೇವೆ. ಗ್ರಾಮ ಒನ್ ಸೆಂಟರ್‌ನಲ್ಲಿ ಯಾರೇ ಅರ್ಜಿ ಸಲ್ಲಿಸಿದರೂ ವಿಳಂಬ ಮಾಡದೆ ನೋಂದಣಿ ಮಾಡಿಸಿಕೊಂಡು ಕೊಡಲಾಗುತ್ತದೆ.

andolanait

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

2 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

2 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

2 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

3 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

3 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

4 hours ago