ಜಿಲ್ಲೆಗಳು

ಆಂದೋಲನ ಸಂದರ್ಶನ : ವರ್ಷದಲ್ಲೇ ಚಂದ್ರಯಾನ 3 ಉಡಾವಣೆಗೆ ಸಿದ್ಧತೆ

ಭಾರತವೂ ಸಣ್ಣ ಸಣ್ಣ ಉಪಗ್ರಹ ಉಡಾವಣೆಗಳ ಸಾಮರ್ಥ್ಯ ಹೊಂದಬೇಕಿದೆ:ಅಣ್ಣಾದೊರೈ ಸಲಹೆ

ರವಿಕೋಟಿ/ ಕೆ.ಬಿ.ರಮೇಶ ನಾಯಕ

ಮೈಸೂರು: ಈಗಾಗಲೇ ಚಂದ್ರಯಾನ ೧,೨ ಪೂರ್ಣಗೊಳಿಸಿದ್ದೇವೆ. ಚಂದ್ರಯಾನ ೩ಕ್ಕೂ ಸಿದ್ದತೆಗಳು ನಡೆಯುತ್ತಿದ್ದು, ಈ ವರ್ಷದ ಜೂನ್ ಹೊತ್ತಿಗೆ ಉಡಾವಣೆಯಾಗಲಿದೆ. ಭಾರತವೂ ಬಾಹ್ಯಾಕಾಶ ವಲಯದಲ್ಲಿ ಗಣನೀಯ ಸಾಧನೆ ಮಾಡಿದ್ದು, ಭವಿಷ್ಯದಲ್ಲಿ ಇನ್ನಷ್ಟು ಪ್ರಗತಿಯಾಗುವ ವಿಶ್ವಾಸವಿದೆ.

ಮೂರೂವರೆ ದಶಕಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಸ್ಥೆ( ಇಸ್ರೋ)ದಲ್ಲಿ ಕೆಲಸ ಮಾಡಿರುವ ಇಸ್ರೋ ಮಾಜಿ ವಿಜ್ಞಾನಿ, ಚಂದ್ರಯಾನ ೧ ಮತ್ತು ೨ ರ ಯೋಜನಾ ನಿರ್ದೇಶಕ ಡಾ.ಮೈಲಸ್ವಾಮಿ ಅಣ್ಣಾದೊರೈ ಹೇಳಿದ ನುಡಿಗಳಿವು.

ಮೈಸೂರಿನ ಎನ್‌ಐಇ ಸಂಸ್ಥೆ ಆಯೋಜಿಸಿದ್ದ ಕಾರ‌್ಯಕ್ರಮದಲ್ಲಿ ಭಾಗವಹಿಸಲೆಂದು ಆಗಮಿಸಿದ್ದ ಸಂದರ್ಭದಲ್ಲಿ ಆಂದೋಲನಕ್ಕೆ ವಿಶೇಷ ಸಂದರ್ಶನ ನೀಡಿ ಬಾಹ್ಯಾಕಾಶ ಕ್ಷೇತ್ರದೊಂದಿಗಿನ ನಂಟು, ಅದರ ಬದಲಾವಣೆಗಳು, ಜಾಗತಿಕ ಸ್ಪರ್ಧೆ, ಚಂದ್ರಯಾನ ಸಹಿತ ಹಲವು ವಿಷಯಗಳ ಕುರಿತು ಮಾತನಾಡಿದರು.

ಮುಂದುವರಿದ ರಾಷ್ಟ್ರಗಳಂತೆ ಭಾರತದಲ್ಲೂ ಸಣ್ಣ ಸಣ್ಣ ಉಪಗ್ರಹಗಳನ್ನು ಉಡಾವಣೆ ಮಾಡುವ ಸಾಮರ್ಥ್ಯ ಹೊಂದಬೇಕು. ಕಡಿಮೆ ಖರ್ಚಿನಲ್ಲಿ ಮತ್ತು ವೇಗವಾಗಿ ತಲುಪುವಂತಹ ಉಪಗ್ರಹಗಳನ್ನು ಉಡಾವಣೆ ಮಾಡಿದಷ್ಟು ದೇಶ ಮತ್ತಷ್ಟು ಮುಂದುವರಿಯಲು ಕಾರಣವಾಗುತ್ತದೆ. ಭವಿಷ್ಯದಲ್ಲಿ ನಾಸಾದಷ್ಟು ಸಾಮರ್ಥ್ಯವನ್ನು ಇಸ್ರೋ ಹೊಂದುವ ವಿಶ್ವಾಸವಿದೆ ಎನ್ನುವುದು ಅವರ ಖಚಿತ ಅಭಿಪ್ರಾಯ.

ಆಂದೋಲನ: ೪೦ ವರ್ಷಗಳ ಕಾಲ ಚಂದ್ರಯಾನದ ಬಗ್ಗೆ ಕೆಲಸ ಮಾಡಿದ್ದೀರಾ, ಯಾವ ರೀತಿ ಸವಾಲು ಇತ್ತು?ಈಗ ಹೋಗಿರುವುದಕ್ಕೆ ಏನನ್ನಿಸುತ್ತಿದೆ ?

ಅಣ್ಣಾದೊರೈ: ಹೌದು, ನೀವು ಹೇಳುವ ಮಾತಿನಂತೆ ೪೦ ವರ್ಷಗಳ ಕಾಲ ಕೆಲಸ ಮಾಡಿದ್ದು ಖುಷಿ ತಂದಿದೆ. ಸವಾಲಿನಲ್ಲಿ ಕೆಲಸ ಮಾಡಿದ್ದರಿದ್ದರಿಂದ ಈಗ ಅ ಹಂತಕ್ಕೆ ಬಂದಿದ್ದೇವೆ. ಈಗಾಗಲೇ ಚಂದ್ರಯಾನ ೧, ೨ ಕೈಗೊಂಡಿದ್ದೇವೆ. ಚಂದ್ರಯಾನ ೩ಕ್ಕೂ ಸಿದ್ದತೆಗಳು ಆಗಿವೆ. ಕಡಿಮೆ ಅವಧಿಯಲ್ಲಿ ಚಂದ್ರಯಾನದ ಆನ್ವೇಷಣೆ ನಡೆಸಲಾಗಿದೆ. ಅಲ್ಲಿ ಏನು ಸಿಗುತ್ತಿದೆ ಎಂಬುದನ್ನು ಮುಂದೆ ನೋಡೋಣ.

ಆಂದೋಲನ: ಬಾಹ್ಯಾಕಾಶ ಕ್ಷೇತ್ರಕ್ಕೆ ಖಾಸಗಿ ಪ್ರವೇಶ ಅವಶ್ಯಕತೆ ಇದೆಯೇ

ಅಣ್ಣಾದೊರೈ: ಬಾಹ್ಯಾಕಾಶಕ್ಕೂ ಖಾಸಗಿಯಾಗಿ ಪ್ರವೇಶ ಆಗಬೇಕು. ಅದರಿಂದ ಪೈಪೋಟಿ ಉಂಟಾಗಲಿದೆ. ಸ್ಪರ್ಧಾತ್ಮಕತೆ ಬರಲಿದೆ. ಈ ಕ್ಷೇತ್ರದಲ್ಲಿ ಕೆಲಸ ಮಾಡಿದವರು ಬಿಟ್ಟು ಹೋದವರ ಜಾಗಕ್ಕೆ ಮತ್ತೊಬ್ಬರನ್ನು ತಂದು ಕೂರಿಸಬಹುದು.ಆದರೆ, ಆವರ ಅನುಭವಗಳನ್ನು ತರಲು ಸಾಧ್ಯವಿಲ್ಲ. ಈ ಕ್ಷೇತ್ರದಲ್ಲಿ ಅನುಭವ ಮುಖ್ಯ. ಅಂತಹವರನ್ನು ಉಳಿಸಿಕೊಳ್ಳಬೇಕು. ೬೦ ವರ್ಷದ ನಂತರವೂ ಈ ಕ್ಷೇತ್ರದಲ್ಲಿ ಕೆಲಸ ಮಾಡಿದವರನ್ನು ಮುಂದುವರಿಸಬೇಕಿದೆ. ಅಭಿವೃದ್ಧಿ ಹೊಂದಿದ ರಾಷ್ಟ್ರ ಆಗಬೇಕು ಎಂದರೆ ಪರಿಣಿತರು ಕೂಡ ಬೇಕು. ಬಾಹ್ಯಾಕಾಶ ಕ್ಷೇತ್ರದಲ್ಲೂ ಬೆಳವಣಿಗೆ ಮತ್ತು ಬದಲಾವಣೆ ಆಗಬೇಕು.

ಆಂದೋಲನ: ಬಾಹ್ಯಕಾಶ ಕ್ಷೇತ್ರದಲ್ಲಿ ಏನು ಫೋಕಸ್ ಮಾಡಬೇಕಿದೆ

ಅಣ್ಣಾದೊರೈ: ದೇಶದಲ್ಲಿ ಉಪಗ್ರಹ ಉಡಾವಣೆಗಳು ನಡೆಯುತ್ತಿವೆ. ಆದರೆ, ಮತ್ತಷ್ಟು ವೇಗವಾಗಿ ಉಡಾವಣೆಗಳು ಆಗಬೇಕು. ಕಡಿಮೆ ಖರ್ಚಿನಲ್ಲಿ ಮತ್ತು ದೊಡ್ಡಪ್ರಮಾಣದಲ್ಲಿ ನಡೆಯಬೇಕು. ನಮ್ಮಲ್ಲಿರುವ ತಂತ್ರಜ್ಞಾನಗಳನ್ನು ಬಳಸಿಕೊಂಡು ಚಂದ್ರಯಾನ ಮಾಡಿದ್ದೇವೆ. ಮಾಡುತ್ತಿದ್ದೇವೆ. ನಮ್ಮ ಸಾಮರ್ಥ್ಯವನ್ನು ಓರೆಗೆ ಹಚ್ಚುವ ಕೆಲಸ ಆಗಲೇಬೇಕಿದೆ. ಆಗ ನಾವು ಈ ಕ್ಷೇತ್ರದಲ್ಲಿ ಯಾವ ರೀತಿಯಲ್ಲಿ ಮುಂದುವರಿದಿದ್ದೇವೆ ಎಂಬುದು ಗೊತ್ತಾಗುತ್ತದೆ.

ಆಂದೋಲನ: ನಮ್ಮಲ್ಲಿರುವ ಬುದ್ಧಿವಂತಿಕೆ ಬಳಸಿಕೊಳ್ಳಲಾಗುತ್ತಿದೆಯೇ

ಅಣ್ಣಾದೊರೈ: ನಮ್ಮಲ್ಲಿರುವ ಬುದ್ಧಿವಂತಿಕೆ,ಜ್ಞಾನ,ಮೆದುಳಿನ ಸಾಮರ್ಥ್ಯವನ್ನು ನಾವು ಉಪಯೋಗಿಸಿಕೊಳ್ಳಬೇಕು. ವಿಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರವನ್ನು ಆಕರ್ಷಣೀಯವಾಗಿ ಮಾಡಬೇಕು. ವಾಣಿಜ್ಯ ಚಟುವಟಿಕೆಗಳಿಗೆ ಬಳಸಿಕೊಂಡರೆ ಅದರಿಂದ ಸಂಪನ್ಮೂಲ ಬರಲಿದೆ. ಜೊತೆಗೆ ಉದ್ಯೋಗ ಸೃಷ್ಟಿಗೂ ಅವಕಾಶ ದೊರೆಯಲಿದೆ. ಅಮೆರಿಕಾದ ನಾಸಾ ಜಗತ್ತಿನಲ್ಲೇ ಗಮನ ಸೆಳೆದಂತೆ ಮುಂದೆ ಇಸ್ರೋ ಕೂಡ ಅಷ್ಟೇ ಸಾಮರ್ಥ್ಯವನ್ನು ಹೊಂದಬಹುದು. ಅದೇ ರೀತಿ ಆಗಬಹುದು ಎನ್ನುವ ನಿರೀಕ್ಷೆ ನಮ್ಮಲ್ಲಿದೆ.

ಆಂದೋಲನ: ಸಂಶೋಧನೆಗಳು ಅಷ್ಟಾಗಿ ಆಗುತ್ತಿಲ್ಲ ಎನ್ನಿಸುತ್ತಿಲ್ಲವೇ ?

ಅಣ್ಣಾದೊರೈ: ಸಂಶೋಧನೆಗಳು ಆಗುತ್ತಿವೆ. ನಾವು ಮಾಡುವ ಸಂಶೋಧನೆಗಳು ಜಗತ್ತಿಗೆ ತೋರಿಸುವ ಮಟ್ಟಿಗೆ ಆಗಬೇಕು ಎಂದರೆ ಅದಕ್ಕೆ ಸಮಯಬೇಕು. ಒಂದು ಉಪಗ್ರಹಕ್ಕೆ ಸಂಬಂಧಿಸಿದಂತೆ ಏಳು ವರ್ಷಗಳು ಬೇಕಾಯಿತು. ಪ್ರಯತ್ನ ಪಡಬೇಕು.ಶ್ರಮ ಹಾಕುತ್ತಲೇ ಇರಬೇಕು. ನೀತಿ ನಿರೂಪಕರು ಹೇಳುವಂತೆ ಕಾಲಮಿತಿಯೊಳಗೆ ಮಾಡುವುದಲ್ಲ. ಆಡಳಿತಗಾರರು ಒಂದು ವರ್ಷದ್ದನ್ನು ಆರು ತಿಂಗಳಲ್ಲಿ ಮಾಡುತ್ತೇವೆ ಎನ್ನುತ್ತಾರೆ. ಆದರೆ, ಅದಕ್ಕೆ ನಿಗದಿತ ಸಮಯ ಬೇಕಾಗುತ್ತದೆ.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

36 mins ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

1 hour ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

2 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

2 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

3 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

3 hours ago