ಜಿಲ್ಲೆಗಳು

ಆಂದೋಲನ ವರದಿಗೆ ಎಚ್ಚೆತ್ತು ಬೃಹತ್ ಗಾತ್ರದ ಮರ ತೆರೆವುಗೊಳಿಸಿದ ಅರಣ್ಯ ಅಧಿಕಾರಿಗಳು

ಹನೂರು: ಪಟ್ಟಣದ ಬಂಡಳ್ಳಿ ರಸ್ತೆಯ ಬೃಹತ್ ಗಾತ್ರದ ಮರವನ್ನು ಬೆಳ್ಳಂಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ .

ಪಟ್ಟಣದ ಅಮ್ಮನ್ ಮೆಡಿಕಲ್ ಮುಂಭಾಗದಲ್ಲಿನ ಬೃಹತ್ ಗಾತ್ರದ ಮರವೊಂದು ಸತತ ಬೀಳುತ್ತಿರುವ ಮಳೆಗೆ ರಸ್ತೆಗೆ ವಾಲಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿತು.

ಈ ರಸ್ತೆಯಲ್ಲಿ ಪ್ರತಿಷ್ಠಿತ ಕ್ರಿಸ್ತರಾಜ ವಿದ್ಯಾಸಂಸ್ಥೆ ಮತ್ತು ಸ್ಟೇಟ್ ಬ್ಯಾಂಕ್‌ ,ಮಣಪ್ಪುರಂ ಫೈನಾನ್ಸ್ ಕೋಟಕ್ ಮಹೀಂದ್ರ ಬ್ಯಾಂಕ್ ಸೇರಿದಂತೆ ಹತ್ತಾರು ಕಚೇರಿಗಳು ಹಾಗೂ ಖಾಸಗಿ ಆಸ್ಪತ್ರೆ ಇದ್ದ ಹಿನ್ನೆಲೆ ಸಾವಿರಾರು ಶಾಲಾ ವಿದ್ಯಾರ್ಥಿಗಳು ಹಾಗೂ ಗ್ರಾಹಕರು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದರು.

ಈ ಬಗ್ಗೆ “ಆಂದೋಲನ ಪತ್ರಿಕೆಯಲ್ಲಿ ಮರ ತೆರವುಗೊಳಿಸುವಂತೆ ಆಗ್ರಹ” ಎಂಬ ಶೀರ್ಷಿಕೆಯಡಿ ಅಕ್ಟೋಬರ್ 18 ರಂದು ವರದಿ ಪ್ರಕಟವಾಗಿತ್ತು ವರದಿಗೆ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿ ಮರ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿದ್ದಾರೆ.

ಆಂದೋಲನ ಟಿವಿ ಗೆ ಮೆಚ್ಚುಗೆ : ಬಂಡಳ್ಳಿ ರಸ್ತೆಯಲ್ಲಿ ಸತತ ಬೀಳುತ್ತಿರುವ ಮಳೆಗೆ ವಾಲಿಕೊಂಡಿರುವ ಮರ ತೆರವುಗೊಳಿಸುವಂತೆ ಅ 17ರಂದು ಆಂದೋಲನ ಟಿವಿ ಯಲ್ಲಿ ವರದಿ ಪ್ರಸಾರವಾಗಿತ್ತು.ವರದಿ ಪ್ರಕಟವಾದ ಮರುದಿನವೇ ಮರ ತೆರವುಗೊಳಿಸುತ್ತಿರುವುದರಿಂದ ಸಾರ್ವಜನಿಕರು ಆಂದೋಲನ ಟಿವಿ ವರದಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

17 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

21 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

21 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

21 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

21 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

21 hours ago