ಹನೂರು: ಪಟ್ಟಣದ ಬಂಡಳ್ಳಿ ರಸ್ತೆಯ ಬೃಹತ್ ಗಾತ್ರದ ಮರವನ್ನು ಬೆಳ್ಳಂಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ .
ಪಟ್ಟಣದ ಅಮ್ಮನ್ ಮೆಡಿಕಲ್ ಮುಂಭಾಗದಲ್ಲಿನ ಬೃಹತ್ ಗಾತ್ರದ ಮರವೊಂದು ಸತತ ಬೀಳುತ್ತಿರುವ ಮಳೆಗೆ ರಸ್ತೆಗೆ ವಾಲಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿತು.
ಈ ಬಗ್ಗೆ “ಆಂದೋಲನ ಪತ್ರಿಕೆಯಲ್ಲಿ ಮರ ತೆರವುಗೊಳಿಸುವಂತೆ ಆಗ್ರಹ” ಎಂಬ ಶೀರ್ಷಿಕೆಯಡಿ ಅಕ್ಟೋಬರ್ 18 ರಂದು ವರದಿ ಪ್ರಕಟವಾಗಿತ್ತು ವರದಿಗೆ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿ ಮರ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿದ್ದಾರೆ.
ಆಂದೋಲನ ಟಿವಿ ಗೆ ಮೆಚ್ಚುಗೆ : ಬಂಡಳ್ಳಿ ರಸ್ತೆಯಲ್ಲಿ ಸತತ ಬೀಳುತ್ತಿರುವ ಮಳೆಗೆ ವಾಲಿಕೊಂಡಿರುವ ಮರ ತೆರವುಗೊಳಿಸುವಂತೆ ಅ 17ರಂದು ಆಂದೋಲನ ಟಿವಿ ಯಲ್ಲಿ ವರದಿ ಪ್ರಸಾರವಾಗಿತ್ತು.ವರದಿ ಪ್ರಕಟವಾದ ಮರುದಿನವೇ ಮರ ತೆರವುಗೊಳಿಸುತ್ತಿರುವುದರಿಂದ ಸಾರ್ವಜನಿಕರು ಆಂದೋಲನ ಟಿವಿ ವರದಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…