ಜಿಲ್ಲೆಗಳು

ಆಂದೋಲನ ವರದಿಗೆ ಎಚ್ಚೆತ್ತು ಬೃಹತ್ ಗಾತ್ರದ ಮರ ತೆರೆವುಗೊಳಿಸಿದ ಅರಣ್ಯ ಅಧಿಕಾರಿಗಳು

ಹನೂರು: ಪಟ್ಟಣದ ಬಂಡಳ್ಳಿ ರಸ್ತೆಯ ಬೃಹತ್ ಗಾತ್ರದ ಮರವನ್ನು ಬೆಳ್ಳಂಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ .

ಪಟ್ಟಣದ ಅಮ್ಮನ್ ಮೆಡಿಕಲ್ ಮುಂಭಾಗದಲ್ಲಿನ ಬೃಹತ್ ಗಾತ್ರದ ಮರವೊಂದು ಸತತ ಬೀಳುತ್ತಿರುವ ಮಳೆಗೆ ರಸ್ತೆಗೆ ವಾಲಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿತು.

ಈ ರಸ್ತೆಯಲ್ಲಿ ಪ್ರತಿಷ್ಠಿತ ಕ್ರಿಸ್ತರಾಜ ವಿದ್ಯಾಸಂಸ್ಥೆ ಮತ್ತು ಸ್ಟೇಟ್ ಬ್ಯಾಂಕ್‌ ,ಮಣಪ್ಪುರಂ ಫೈನಾನ್ಸ್ ಕೋಟಕ್ ಮಹೀಂದ್ರ ಬ್ಯಾಂಕ್ ಸೇರಿದಂತೆ ಹತ್ತಾರು ಕಚೇರಿಗಳು ಹಾಗೂ ಖಾಸಗಿ ಆಸ್ಪತ್ರೆ ಇದ್ದ ಹಿನ್ನೆಲೆ ಸಾವಿರಾರು ಶಾಲಾ ವಿದ್ಯಾರ್ಥಿಗಳು ಹಾಗೂ ಗ್ರಾಹಕರು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದರು.

ಈ ಬಗ್ಗೆ “ಆಂದೋಲನ ಪತ್ರಿಕೆಯಲ್ಲಿ ಮರ ತೆರವುಗೊಳಿಸುವಂತೆ ಆಗ್ರಹ” ಎಂಬ ಶೀರ್ಷಿಕೆಯಡಿ ಅಕ್ಟೋಬರ್ 18 ರಂದು ವರದಿ ಪ್ರಕಟವಾಗಿತ್ತು ವರದಿಗೆ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿ ಮರ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿದ್ದಾರೆ.

ಆಂದೋಲನ ಟಿವಿ ಗೆ ಮೆಚ್ಚುಗೆ : ಬಂಡಳ್ಳಿ ರಸ್ತೆಯಲ್ಲಿ ಸತತ ಬೀಳುತ್ತಿರುವ ಮಳೆಗೆ ವಾಲಿಕೊಂಡಿರುವ ಮರ ತೆರವುಗೊಳಿಸುವಂತೆ ಅ 17ರಂದು ಆಂದೋಲನ ಟಿವಿ ಯಲ್ಲಿ ವರದಿ ಪ್ರಸಾರವಾಗಿತ್ತು.ವರದಿ ಪ್ರಕಟವಾದ ಮರುದಿನವೇ ಮರ ತೆರವುಗೊಳಿಸುತ್ತಿರುವುದರಿಂದ ಸಾರ್ವಜನಿಕರು ಆಂದೋಲನ ಟಿವಿ ವರದಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

andolanait

Recent Posts

ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಬೆಂಕಿ: ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲು

ಮೈಸೂರು: ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ…

10 mins ago

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ | ನಾಳೆ ವಿಶೇಷ ಸಂಪುಟ ಸಭೆ

ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

24 mins ago

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಕುಟ್ಟ ಖಾಸಗಿ ಹೋಂಸ್ಟೇ ಪರವಾನಗಿ ರದ್ದು

ಪೊನ್ನಂಪೇಟೆ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟ್ಟ ಖಾಸಗಿ…

36 mins ago

ಮಗು ಸಾವಿಗೆ ಇರುವೆ ಕಚ್ಚಿರುವುದು ಕಾರಣವಲ್ಲ: ಚಲುವಾಂಬ ಆಸ್ಪತ್ರೆ ವೈದ್ಯರಿಂದ ಸ್ಪಷ್ಟನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಇರುವೆ ಕಚ್ಚಿ ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಲಕ್ಷ್ಮಿಕಾಂತ್…

46 mins ago

ಮೆದಗನಾಣೆ ಗ್ರಾಮಸ್ಥರ ಬವಣೆಗೆ ಕೊನೆ ಎಂದು?

ಸಮರ್ಪಕ ರಸ್ತೆ ಇಲ್ಲ, ವಾಹನ ಸೌಲಭ್ಯವಿಲ್ಲ, ಶುದ್ಧ ನೀರಿಗೂ ತತ್ವಾರ; ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ ಮಹಾದೇಶ್ ಎಂ.ಗೌಡ ಹನೂರು:…

47 mins ago

ಚಲುವಾಂಬ ಆಸ್ಪತ್ರೆ ಐಸಿಯುನಲ್ಲಿದ್ದ ಮಗು ಇರುವೆ ಕಚ್ಚಿ ಸಾವು ಆರೋಪ: ಪೋಷಕರ ಆಕ್ರಂದನ

ಮೈಸೂರು: ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಮಗು ಇರುವೆ ಕಚ್ಚಿ ಸಾವನ್ನಪ್ಪಿದೆ ಎಂಬ ಆರೋಪ ಕೇಳಿಬಂದಿದೆ. ಏಪ್ರಿಲ್.‌15ರಂದು ಅವಧಿ ಪೂರ್ವ…

55 mins ago