ಜಿಲ್ಲೆಗಳು

ಆಂದೋಲನ ಸಂದರ್ಶನ : ಸಾಮಾಜಿಕ ಜಾಲತಾಣದ ಡಿಜಿಟಲ್ ಜಾಹೀರಾತುಗಳಿಗೆ ಮರುಳಾಗದಿ

ಆಂದೋಲನ’ ಸಂದರ್ಶನದಲ್ಲಿ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ

ಬಿ.ಎನ್.ಧನಂಜಯಗೌಡ

ಮೈಸೂರು: ನಿವೃತ್ತರ ಸ್ವರ್ಗ ಎಂದೇ ಖ್ಯಾತಿವೆತ್ತ, ಶಾಂತಿ ಪ್ರಿಯ, ಕಲೆ ಮತ್ತು ಸಂಸ್ಕೃತಿ ಪ್ರಿಯ ನಗರದಲ್ಲಿ ಆಗಾಗ ಬೆಚ್ಚಿ ಬೀಳಿಸುವಂತಹ ಅಪರಾಧ ಪ್ರಕರಣಗಳು ನಡೆಯುತ್ತಿರುತ್ತವೆ. ಇಂತಹ ಅಪರಾಧ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ನಗರ ಪೊಲೀಸ್ ನೂತನ ಆಯುಕ್ತರಾದ ರಮೇಶ್ ಬಾನೋತ್ ಅವರು ಹಲವು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಾನೂನು-ಸುವ್ಯವಸ್ಥೆ, ಭದ್ರತೆ, ಸುಗಮ ಸಂಚಾರ, ಅಪರಾಧಗಳ ನಿಯಂತ್ರಣ ಸಂಬಂಧ ಮಾತನಾಡಿದ್ದಾರೆ.


ಆಂದೋಲನ: ಸೈಬರ್ ಅಪರಾಧಗಳು ಹೆಚ್ಚಾಗುತ್ತಿವೆ. ಇದರ ನಿಯಂತ್ರಣ ಹೇಗೆ?
ಆಯುಕ್ತ: ಸೈಬರ್ ಅಪರಾಧ ಪ್ರಕರಣಗಳು ಪತ್ತೆ ಮಾಡುವುದು ಸ್ವಲ್ಪ ಕಷ್ಟವೇ. ಆದರೆ, ಮೈಸೂರು ಸೆನ್ ಠಾಣೆ ಶೇ.೩೦ರಿಂದ ೪೦ ಪ್ರಕರಣಗಳಲ್ಲಿ ರಿಕವರಿ ಮಾಡಿದೆ. ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಬರುವ ಡಿಜಿಟಲ್ ಜಾಹೀರಾತುಗಳನ್ನು ಕಂಡು ಮೋಸ ಹೋಗಬಾರದು. ಅಪರಿಚಿತ ಸಂಖ್ಯೆಗಳಿಂದ ಬರುವ ಮೆಸೇಜ್ ಮತ್ತು ವಾಟ್ಸ್ ಆ್ಯಪ್ ಕಾಲ್‌ಗಳನ್ನು ಸ್ವೀಕರಿಸುವ ಮುನ್ನ ಎಚ್ಚರಿಕೆ ಇರಬೇಕು. ಈ ರೀತಿಯ ಅಪರಾಧಗಳು ಆದ ತಕ್ಷಣ ಬಂದು ದೂರು ನೀಡಿದರೆ, ಟೋಲ್ ಫ್ರೀ ಸಂಖ್ಯೆ೧೧೨ಕ್ಕೆ ಕರೆ ಮಾಡಿ ತಿಳಿಸಿದರೆ ವರ್ಗಾವಣೆಯಾಗುವ ಹಣವನ್ನು ಬ್ಯಾಂಕ್ ನವರಿಗೆ ಹೇಳಿ ಹೋಲ್ಡ್ ಮಾಡಿಸುವ ಪ್ರಯತ್ನ ಮಾಡಬಹುದು.


ಆಂದೋಲನ: ನಗರದಲ್ಲಿನ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಏನಾದರೂ ಹೊಸ ಕ್ರಮಗಳನ್ನು ಕೈಗೊಂಡಿದ್ದೀರಾ?

ಆಯುಕ್ತ: ತ್ರಿಬಲ್ ರೈಡಿಂಗ್ ತಡೆಗೆ ಈಗಾಗಲೇ ಕಾರ್ಯಾಚರಣೆ ಆರಂಭಿಸಿದ್ದೇವೆ. ಇದು ನಿರಂತರವಾಗಿ ನಡೆಯಲಿದೆ. ಸಂಜೆ ೬ರಿಂದ ರಾತ್ರಿ ೯ ಗಂಟೆಯವರೆಗೂ ರ್ಯಾಂಡಮ್ ಆಗಿ ಎಲ್ಲ ವಾಹನಗಳನ್ನು ಪರಿಶೀಲನೆ ಮಾಡಲಾಗುವುದು. ವಾಹನ ದಟ್ಟಣೆ ಮತ್ತು ಮಾರುಕಟ್ಟೆಗಳು ಇರುವ ಕಡೆ ಸುವ್ಯವಸ್ಥಿತ ಪಾರ್ಕಿಂಗ್‌ಗೆ ಅವಕಾಶ ಮಾಡಿಕೊಡಲು ಸಂಚಾರ ವಿಭಾಗದ ಎಸಿಪಿ ಅವರಿಗೆ ಹೇಗೆ ಮಾಡಬಹುದು ಎಂದು ಪ್ರಸ್ತಾವನೆ ನೀಡಲು ಹೇಳಿದ್ದೇನೆ. ಇದನ್ನು ನೋಡಿ ಆ ನಂತರ ವ್ಯವಸ್ಥಿತ ಪಾರ್ಕಿಂಗ್ ಕಲ್ಪಿಸಲು ಯೋಜನೆ ಕೈಗೊಳ್ಳಲಾಗುವುದು.


ಆಂದೋಲನ: ನಗರದಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಏನೆಲ್ಲ ನೂತನ ಕ್ರಮ ಕೈಗೊಂಡಿದ್ದೀರಿ?

ಆಯುಕ್ತ: ನಗರಕ್ಕೆ ಪ್ರವೇಶಿಸುವ ಎಲ್ಲ ಭಾಗದ ಗಡಿಯಲ್ಲಿ ಇನ್ ಅಂಡ್ ಔಟ್ ಆಗುವವರ ಬಗ್ಗೆ ನಮ್ಮ ಸಿಬ್ಬಂದಿ ಪರಿಶೀಲಿಸಿ, ವಿಳಾಸ ನಮೂದಿಸಿಕೊಳ್ಳುತ್ತಾರೆ. ನಗರದ ಒಳಗೆ ೨೩ ಪಾಯಿಂಟ್‌ಗಳನ್ನು ಮಾಡಿದ್ದು, ನಮ್ಮ ಸಿಬ್ಬಂದಿ ಅನುಮಾನಸ್ಪದವಾಗಿ ಕಂಡು ಬಂದವರನ್ನು ಪರಿಶೀಲಿಸುವರು. ಇನ್ನು ರೌಡಿಶೀಟರ್‌ಗಳ ಪೆರೇಡ್ ಅನ್ನು ಹಿಂದಿಗಿಂತಲೂ ಹೆಚ್ಚು ಬಾರಿ ಮಾಡಲು ಮತ್ತು ಶಾಂತಿಭಂಗ ಮಾಡುವವರನ್ನು ಗುರುತಿಸಲು ಸೂಚಿಸಿದ್ದೇನೆ. ನಗರ ಪಾಲಿಕೆಯಿಂದ ರಾತ್ರಿ ೧೧ ಗಂಟೆಯ ನಂತರವೂ ತೆರೆದಿರಬಹುದಾದ ಅಂಗಡಿಗಳನ್ನು ಬಿಟ್ಟು, ಉಳಿದ ಎಲ್ಲ ಅಂಗಡಿಗಳನ್ನೂ ರಾತ್ರಿ ೧೧ಗಂಟೆಯ ಹೊತ್ತಿಗೆ ಮುಚ್ಚಬೇಕು. ಇಲ್ಲವಾದರೆ, ಕ್ರಮ ಕೈಗೊಳ್ಳಲು ಎಲ್ಲ ಠಾಣೆಗಳ ಪೊಲೀಸರಿಗೆ ತಿಳಿಸಿದ್ದೇನೆ.


ಆಂದೋಲನ: ಭಯೋತ್ಪಾದನೆ ಚಟುವಟಿಕೆಗಳಿಗೆ ಮೈಸೂರು ಸೂಕ್ತ ಎಂಬ ಭಾವನೆ ಕಿಡಿಗೇಡಿಗಳಲ್ಲಿ ಇದೆ. ಈ ಆತಂಕ ದೂರು ಮಾಡುವುದು ಹೇಗೆ?

ಆಯುಕ್ತ: ಬಾಡಿಗೆ ನೀಡುವ ಮುನ್ನ ಮನೆ ಮಾಲೀಕರು ಎಚ್ಚರಿಕೆ ವಹಿಸಬೇಕು. ನಗರದಲ್ಲಿ ಬಾಡಿಗೆ ಇರುವ ಕುಟುಂಬಗಳು, ಬ್ಯಾಚುಲರ್‌ಗಳು ಮತ್ತು ಪಿಜಿಯಲ್ಲಿ ಇರುವವರ ಪೂರ್ವಾಪರ ಮಾಹಿತಿಯನ್ನು ಒಂದು ತಿಂಗಳ ಒಳಗೆ ಆಯಾ ಪೊಲೀಸ್ ಠಾಣೆಗೆ ನೀಡಬೇಕು. ಇದಕ್ಕಾಗಿ ಮೂರು ರೀತಿಯ ನಮೂನೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಆಯಾ ಠಾಣೆಗಳಲ್ಲಿ ನಮೂನೆ ಪಡೆದು ನಾವು ಕೇಳಿರುವ ಮಾಹಿತಿಯನ್ನು ಭರ್ತಿ ಮಾಡಿ ಠಾಣೆಗಳಿಗೆ ನೀಡಬೇಕು. ಈ ಬಗ್ಗೆ ಈಗಾಗಲೇ ಎಸಿಪಿಗಳಿಗೆ, ಇನ್ಸ್‌ಪೆಕ್ಟರ್‌ಗಳಿಗೂ ಸೂಚನೆ ನೀಡಲಾಗಿದೆ.


ಆಂದೋಲನ: ನಗರದಲ್ಲಿ ಹೆಚ್ಚುತ್ತಿರುವ ಸರಗಳವು ಪ್ರಕರಣಗಳು ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ತಡೆಗೆ ಏನು ಕ್ರಮ ಕೈಗೊಂಡಿದ್ದೀರಿ?

ಆಯುಕ್ತ: ಈ ವರ್ಷ ಇಲ್ಲಿಯವರೆಗೂ ದಾಖಲಾಗಿರುವ ೬೪ ಪ್ರಕರಣಗಳ ಪೈಕಿ ೫೯ ಪ್ರಕರಣಗಳು ಪತ್ತೆಯಾಗಿವೆ. ಸೂಕ್ಷ್ಮ ಮತ್ತು ಈ ರೀತಿಯ ಘಟನೆಗಳು ನಡೆಯುವ ಕೆಲವು ಸ್ಥಳಗಳಲ್ಲಿ ಸಿಬ್ಬಂದಿ ನಿಯೋಜಿಸಲು ಮತ್ತು ಗಸ್ತು ಹೆಚ್ಚಿಸಲು ಸೂಚಿಸಲಾಗಿದೆ. ವಿಜಯನಗರ ಮತ್ತು ಕುವೆಂಪುನಗರ ಠಾಣಾ ವ್ಯಾಪ್ತಿಯಲ್ಲಿ ಸರಗಳವು ಪ್ರಕರಣಗಳು ಹೆಚ್ಚು ಇರುವುದು ಕಂಡು ಬಂದಿದ್ದು, ಬೀಟ್ ಹೆಚ್ಚು ಮಾಡಲು ವಾಹನವನ್ನು ನೀಡಲಾಗಿದೆ. ಸರಗಳವು ಆದಾಗ ತಡವಾಗಿ ಬಂದು ದೂರು ದಾಖಲಿಸುವುದನ್ನು ಬಿಟ್ಟು, ತಕ್ಷಣ ಟೋಲ್ ಫ್ರೀ ಸಂಖ್ಯೆ ೧೧೨ಕ್ಕೆ ಕಾಲ್ ಮಾಡಿ ಹೇಳಿದರೆ, ಆದಷ್ಟು ಬೇಗೆ ಖದೀಮರನ್ನು ಹಿಡಿಯಲು ಸಾಧ್ಯವಾಗುತ್ತದೆ.

andolanait

Recent Posts

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

59 mins ago

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

2 hours ago

ಬಲಮುರಿ ಕಾವೇರಿ ನದಿಯಲ್ಲಿ ಇಬ್ಬರು ಯುವಕರು ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ…

2 hours ago

ಓದುಗರ ಪತ್ರ: ಮಾನಸ ಗಂಗೋತ್ರಿ ಕ್ಯಾಂಟೀನ್‌ಗಳಲ್ಲಿ ದರ ಏರಿಕೆಗೆ ಕಡಿವಾಣ ಹಾಕಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಖಾಸಗಿ ಹೋಟೆಲ್‌ಗಳಲ್ಲಿ ಕಾಫಿ,ತಿಂಡಿ, ಹಣ್ಣಿನ ಪಾನೀಯ ದರ ದುಬಾರಿಯಾಗಿದ್ದು, ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುವ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಕರ ಮಾದರಿ ನಡೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದು, ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗಿದೆ. ಗದಗ…

4 hours ago

ಓದುಗರ ಪತ್ರ: ರೇಷ್ಮೆ ನೂಲು ಘಟಕಕ್ಕೆ ಹೊಸ ಯಂತ್ರ ಅಳವಡಿಕೆ ಶ್ಲಾಘನೀಯ

ತಿ. ನರಸೀಪುರ ಪಟ್ಟಣದ ರೇಷ್ಮೆ ನೂಲು ತಯಾರಿಕಾ ಘಟಕಕ್ಕೆ ಹೊಸದಾಗಿ ಎರಡು ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಂಡಿರುವುದು ಘಟಕದ ಅಭಿವೃದ್ಧಿಯ…

4 hours ago