ಜಿಲ್ಲೆಗಳು

ಆಂದೋಲನ ಸಂದರ್ಶನ : ‘ಯಶಸ್ವಿನಿ’ಗೆ ಅರ್ಹರ ನೋಂದಣಿಗೆ ಸೂಚನೆ

ಜಿಲ್ಲೆಯಲ್ಲಿ ಒಟ್ಟು ೮೨೫ ಸಹಕಾರ ಸಂಘಗಳು; ನವೆಂಬರ್ ೧ರಿಂದ ನೋಂದಣಿ ಶುರು
ಪ್ರಸಾದ್ ಲಕ್ಕೂರು
ಚಾಮರಾಜನಗರ : ಗ್ರಾಮೀಣ ಜನರ ಪಾಲಿಗೆ ವರದಾನವಾಗಿದ್ದ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು ನವೆಂಬರ್ 1 ರಂದು ಜಾರಿಗೊಳಿಸುತ್ತಿದೆ. ೨೦೧೮ರ ಮೇ 31 ರಂದು ಸ್ಥಗಿತಗೊಂಡಿದ್ದ ಈ ಯೋಜನೆಯನ್ನು ರೈತರು, ಸಹಕಾರ ಸಂಘಗಳ ಭಾರಿ ಬೇಡಿಕೆಯಂತೆ ಪುನಾರಂಭ ಮಾಡುತ್ತಿದೆ.
೨೦೨೨-೨೩ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಶಸ್ವಿನಿ ಯೋಜನೆಯನ್ನು ಮರು ಜಾರಿ ಮಾಡುವುದಾಗಿ ಘೋಷಿಸಿ ೩೦೦ ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದಾರೆ. ನವೆಂಬರ್ ೧ ರಿಂದ ನೋಂದಣಿ ಆರಂಭವಾಗಲಿದೆ. ಜಿಲ್ಲೆಯಲ್ಲಿ ಈ ಬಗ್ಗೆ ತಯಾರಿ ಹೇಗೆ ಸೇರಿದಂತೆ ಇತರೆ ವಿಚಾರಗಳ ಕುರಿತು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಜಿ.ಸಿ.ಜ್ಯೋತಿ ಅರಸ್ ಅವರು ‘ಆಂದೋಲನ’ ನಡೆಸಿದ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಶ್ನೆ : ಜಿಲ್ಲೆಯಲ್ಲಿ ಎಷ್ಟು ಸಹಕಾರ ಸಂಘಗಳಿವೆ. ಇವುಗಳಲ್ಲದೆ ಇನ್ನೂ ಯಾರು ಯೋಜನೆ ವ್ಯಾಪ್ತಿಗೆ ಬರಲಿದ್ದಾರೆ ?
ಉತ್ತರ: ಜಿಲ್ಲೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ, ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ, ಪಿಎಲ್‌ಡಿ, ಪತ್ತಿನ ಸಹಕಾರ, ಲ್ಯಾಂಪ್ಸ್, ಮಹಿಳಾ ಮತ್ತು ಪುರುಷ ಸಹಕಾರ ಸಂಘಟನೆಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು ಸೇರಿದಂತೆ ಸೇರಿದಂತೆ ಸುಮಾರು ೮೨೫ ಸಹಕಾರ ಸಂಘಗಳಿವೆ. ಇವುಗಳಲ್ಲದೆ ಬೀಡಿ, ಬೀಡಿ ಕಾರ್ಮಿಕರು, ಮೀನುಗಾರರು, ನೇಕಾರರ ಸಹಕಾರ ಸಂಘಟನೆಗಳು ಇವೆ.

ಪ್ರಶ್ನೆ : ಯಶಸ್ವಿನಿ ಯೋಜನೆಗೆ ನೋಂದಣಿ ಹೇಗೆ ?
ಉತ್ತರ : ಸಹಕಾರ ಸಂಘಗಳ ಸದಸ್ಯರಾಗಿ ೩ ತಿಂಗಳಾಗಿರಬೇಕು. ಗ್ರಾಮೀಣ ಭಾಗದಲ್ಲಿ ೪ ಜನರಿರುವ ರೈತ ಕುಟುಂಬಕ್ಕೆ ೫೦೦ ರೂ.ವಂತಿಕೆ ಹಾಗೂ ೪ ಕ್ಕಿಂತ ಹೆಚ್ಚು ಜನರಿದ್ದರೆ ಹೆಚ್ಚುವರಿಯಾಗಿ ೧೦೦ ರೂ. ಪಡೆಯಲಾಗುವುದು. ನಗರದ ಪ್ರದೇಶದಲ್ಲಿ ೪ ಜನರಿರುವ ರೈತ ಕುಟುಂಬದದಿಂದ ೧ ಸಾವಿರ ರೂ. ವಂತಿಕೆ ಮತ್ತು ಹೆಚ್ಚುವರಿಯಾಗಿದ್ದರೆ ೨೦೦ ರೂ. ವಂತಿಕೆ ಪಡೆದು ನೋಂದಣಿ ಮಾಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಉಚಿತ ನೋಂದಣಿ ಇರುತ್ತದೆ. ಸರ್ಕಾರವೇ ಇವರಿಗೆ ವಂತಿಕೆ ಭರಿಸಲಿದೆ.

ಪ್ರಶ್ನೆ: ಯಾವ ಬಗೆಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು?
ಉತ್ತರ: ೨೦೧೮ಕ್ಕೂ ಮೊದಲು ಇದ್ದ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಯೋಜನೆಯಡಿ ಶಸ್ತ್ರ ಚಿಕಿತ್ಸೆಗೆ ಮಾತ್ರ ಅವಕಾಶವಿದೆ. ಹೊರ ರೋಗಿಗಳಾಗಿ ಚಿಕಿತ್ಸೆ ಪಡೆಯಲು ಇಚ್ಛಿಸಿದರೆ ಎಪಿಎಲ್ ಚೀಟಿದಾರರಿಗೆ ಶೇ.೨೦ ರಷ್ಟು, ಬಿಪಿಎಲ್‌ನವರಿಗೆ ಶೇ.೩೦ ರಷ್ಟು, ಅಂತ್ಯೋದಯದವರಿಗೆ ಶೇ.೪೦ ರಷ್ಟು ಚಿಕಿತ್ಸೆಯಲ್ಲಿ ರಿಯಾಯಿತಿ ದೊರಕಲಿದೆ. ಯಶಸ್ವಿನಿ ಕಾರ್ಡ್ ಮಾಡಿಸಿದ ೧೫ ದಿನಗಳ ನಂತರ ಸಾಮಾನ್ಯ ವಾರ್ಡ್‌ಗಳಲ್ಲಿ ಮಾತ್ರ ಆರೋಗ್ಯ ಸೇವೆ ದೊಕಲಿದೆ.

ಪ್ರಶ್ನೆ : ಜಿಲ್ಲೆಯಲ್ಲಿ ಯೋಜನೆಯ ನೋಂದಣಿಗೆ ತಯಾರಿ ಹೇಗೆ ಮಾಡಿಕೊಂಡಿದ್ದೀರಿ ?
ಉತ್ತರ: ಜಿಲ್ಲೆಯ ಎಲ್ಲ ಸಹಕಾರ ಸಂಘಗಳ ಆಡಳಿತ ಮಂಡಳಿಗಳಿಗೆ ಈ ಕುರಿತು ಈಗಾಗಲೇ ಸೂಚನೆ ನೀಡಲಾಗಿದೆ. ಎಷ್ಟು ಜನರು ಯೋಜನೆಗೆ ಅರ್ಹರು ಎಂಬ ಪಟ್ಟಿ ಸಿದ್ದಪಡಿಸುವಂತೆ ಸೂಚಿಸಲಾಗಿದೆ. ಯೋಜನೆ ಬಗ್ಗೆ ಪ್ರಚಾರ ಮಾಡಿ ಅರಿವು ಮೂಡಿಸುವಂತೆ ನಿರ್ದೇಶನ ಮಾಡಲಾಗಿದೆ.

ಪ್ರಶ್ನೆ : ಯಾವ ಬಗೆಯ ಕಾಯಿಲೆಗಳಿಗೆ ಚಿಕಿತ್ಸೆ ಲಭ್ಯ?
ಉತ್ತರ : ಯಶಸ್ವಿನಿ ಟ್ರಸ್ಟ್ ಮೂಲಕ ಚಿಕಿತ್ಸಾ ವೆಚ್ಚ ಭರಿಸಲಾಗುವುದು. ಸುಮಾರು ೧೬೫೦ ಕಾಯಿಲೆಗಳಿಗೆ ನಗದು ರಹಿತ ಚಿಕಿತ್ಸೆ ಸಿಗಲಿದೆ. ಕಿಮೋ ಮತ್ತು ರೇಡಿಯೋ ಥೆರಪಿಗಳ, ಹಲ್ಲಿನ ಶಸ್ತ್ರ ಚಿಕಿತ್ಸೆಗಳು, ಜಾಯಿಂಟ್ ಬದಲಾವಣೆ, ಸುಟ್ಟ ಗಾಯಗಳು, ಸ್ಟಂಟ್ ಅಳವಡಿಕೆ, ಚರ್ಮದ ಗ್ರಾಫ್ಟಿಂಗ್‌ಗಳಿಗೆ ಯೋಜನೆಯಡಿ ಚಿಕಿತ್ಸೆ ಸಿಗುವುದಿಲ್ಲ.

andolanait

Recent Posts

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

2 hours ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

2 hours ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

2 hours ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

2 hours ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

4 hours ago