ಜಿಲ್ಲೆಗಳು

ಆಂದೋಲನ ಸಂದರ್ಶನ : ʼರಸಗೊಬ್ಬರ ಕೊರತೆಯಿಲ್ಲ; ಆತಂಕ ಬೇಡʼ

ಚಿರಂಜೀವಿ ಹುಲ್ಲಹಳ್ಳಿ

ಆಂದೋಲನ ಸಂದರ್ಶನ : ಕೃಷಿ ಜಂಟಿ ನಿರ್ದೇಶಕ ಚಂದ್ರಶೇಖರ್

ಮೈಸೂರು: ‘ಆಂದೋಲನ’ ದಿನ ಪತ್ರಿಕೆ ನಡೆಸಿದ ಕಿರು ಸಂದರ್ಶನದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಬಿ.ಎಂ.ಚಂದ್ರಶೇಖರ್ ರೈತರ ಸಮಸ್ಯೆಗಳ ಪರಿಹಾರ ಮತ್ತು ಇಲಾಖೆಯಲ್ಲಿನ ಸವಲತ್ತುಗಳು ಮತ್ತು ಸೌಲಭ್ಯಗಳನ್ನು ದೊರೆಕಿಸುವ ಕಾರ್ಯಕ್ರಮಗಳನ್ನು ತಿಳಿಸಿದರು.
ಕೆಲವು ತಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ ಇಲಾಖೆಯ ಅಧಿಕಾರಗಳ ಮೇಲೆ ದಬ್ಬಾಳಿಕೆ ನಡೆಸಲು ರಸಗೊಬ್ಬರದ ಕೊರತೆ ಎಂದು ಆರೋಪಿಸುತ್ತಿದ್ದಾರೆ. ಆದರೆ, ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇಲ್ಲ. ಈಗಾಗಲೇ ಜಿಲ್ಲೆಯಲ್ಲಿ ೩ ಭಾಗಗಳಲ್ಲಿ ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಮಳಿಗೆ ಮತ್ತು ಉಗ್ರಾಣವನ್ನು ಪತ್ತೆ ಹಚ್ಚಲಾಗಿದೆ. ಕಾಳಸಂತೆಯ ರಸಗೊಬ್ಬರದ ಕಡಿವಾಣಕ್ಕಾಗಿ ಸಹಾಯವಾಣಿಯನ್ನು ಕೂಡ ತೆರೆಯಲಾಗಿದ್ದು, ನಿತ್ಯ ೫ರಿಂದ ೧೦ ಕರೆಗಳು ಬರುತ್ತಿವೆ. ಇದರಲ್ಲಿ ಒಂದೆರಡು ಕರೆಗಳು ಮಾತ್ರ ನಿಜವಾಗಿರುತ್ತವೆ. ಕಾಳಸಂತೆಯಲ್ಲಿ ರಸಗೊಬ್ಬರದ ಮಾರಾಟದ ಕಡಿವಾಣಕ್ಕೆ ರೈತರ ಬೆಂಬಲ ಮತ್ತು ಮಾಹಿತಿ ನೀಡಿ ಎನ್ನುವುದು ಅವರ ಮನವಿ.

ಅತಿವೃಷ್ಟಿಯಿಂದಾದ ಬೆಳೆ ಪರಿಹಾರ ರೈತರಿಗೆ ತಲುಪುತ್ತಿದೆಯೇ?
ಜಿಲ್ಲೆಯಲ್ಲಿ ಮುಂಗಾರು ನಿಧಾನವಾಗಿ ಆರಂಭವಾದರೂ ವಾಡಿಕೆ ಮಳೆ ಪ್ರಯಾಣದಲ್ಲಿ ಕೊರತೆ ಕಾಣಲಿಲ್ಲ. ಜೊತೆಗೆ ಕೇರಳ ಭಾಗದಲ್ಲಿ ಹೆಚ್ಚಿನ ಮಳೆಯಾದ ಪರಿಣಾಮ ಜಲಾಶಯಗಳು ಸಂಪೂರ್ಣ ಭರ್ತಿಯಾದವು. ಕೆರೆ-ಕಟ್ಟೆಗಳ ಕೊಡಿ ಬಿದ್ದ ಹಿನ್ನೆಲೆಯಲ್ಲಿ ಅತಿವೃಷ್ಠಿ ಸಂಭವಿಸಿ ಜಿಲ್ಲೆಯ ೪೧೮ ಹೆಕ್ಟೇರ್ ಬೆಳೆ ಹಾನಿಗೆ ತುತ್ತಾಯಿತು. ತಕ್ಷಣ ಕಾರ್ಯ ಪ್ರವೃತ್ತರಾದ ಇಲಾಖೆಯು ಹಾನಿಗೊಳಗಾದ ಬೆಳೆ ಮತ್ತು ಜಮೀನಿನ ಸಮೀಕ್ಷೆ ನಡೆಸಿ ಪರಿಹಾರ ದೊರೆಕುವಂತೆ ಮಾಡಿದೆ.
ಇದರಿಂದ ಬೆಳೆಯಾಗಿ ಸಂಕಷ್ಟಕ್ಕೆ ಸಿಲುಕಿದ ೭೫೦ ಕ್ಕೂ ಹೆಚ್ಚು ಮಂದಿಗೆ ಪರಿಹಾರ ಹಣ ತಲುಪುವಂತಾಗಿದೆ. ಹಣ ಬಿಡುಗಡೆಯಾದ ತಕ್ಷಣವೇ ಇನ್ನುಳಿದ ರೈತರಿಗೆ ಪರಿಹಾರ ಸಿಗಲಿದ್ದು, ಆತಂಕ ಪಡುವ ಅಗತ್ಯವಿಲ್ಲ. ಸದ್ಯಕ್ಕೆ ಯಾವುದೇ ಹಾನಿ ಅಥವಾ ರೋಗ ಬಾಧಿಸುವ ಭೀತಿ ಇಲ್ಲ.

ಕೃಷಿ ಸಂಜೀಜಿನಿ ಯೋಜನೆಯ ಪ್ರಗತಿ ಹೇಗಿದೆ?
ಬೆಳೆಗಳಲ್ಲಿ ಕಾಣಿಸಿಕೊಳ್ಳುವ ಕೀಟ ಮತ್ತು ರೋಗಗಳ ಬಾಧೆಗಳು, ಮಣ್ಣಿನಲ್ಲಿ ಲಭ್ಯವಿರುವ ಪೋಷಕಾಂಶಗಳ ನಿಖರವಾಗಿ ಹಾಗೂ ಸಮಯೋಚಿತವಾಗಿ ಗುರುತಿಸುವ ಸಲುವಾಗಿ ರಾಜ್ಯ ಸರ್ಕಾರವು ಕೃಷಿ ಸಂಜೀವಿನಿ ಯೋಜನೆಯನ್ನು ಜಾರಿಗೆ ತಂದಿದೆ. ಜಿಲ್ಲೆಯಲ್ಲಿ ಈಗಾಗಲೇ ಕೃಷಿ ಸಂಜೀವಿನಿ ಕಾರ್ಯನಿರ್ವಹಿಸುತ್ತಿದ್ದು, ಕೃಷಿಯಲ್ಲಿ ಆಸಕ್ತರು, ವಿಷಯಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳು ಹಾಗೂ ನಿವೃತ್ತ ಬ್ಯಾಂಕ್ ಅಧಿಕಾರಿಗಳು ತಮ್ಮ ಬಿಡುವಿನ ಸಮಯದಲ್ಲಿ ಸ್ವ-ಆಸಕ್ತಿಯಿಂದ ಈ ಕೆಲಸದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಮೊದಲು ಜಿಲ್ಲೆಗೆ ಒಂದು ವಾಹನ ಇತ್ತು. ಈಗ ಪ್ರತಿ ತಾಲ್ಲೂಕಿಗೂ ತಲಾ ೧ ವಾಹನ ಸೇವೆ ಒದಗಿಸಿದೆ. ರೈತರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇಲಾಖೆಯಿಂದಿರುವ ವಿಶೇಷ ಕಾರ್ಯಕ್ರಮಗಳೇನು?

ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆಗೆ ಪ್ರೋತ್ಸಾಹಿಸುವ ಸಲುವಾಗಿ ಡೀಸೆಲ್ ಖರೀದಿಗೆ ಸಹಾಯಧನ ನೀಡುವ ರೈತ ಶಕ್ತಿ ಎಂಬ ವಿನೂತನ ಯೋಜನೆಯನ್ನು ರಾಜ್ಯ ಸರಕಾರ ಜಾರಿಗೆ ತಂದಿದೆ. ಯೋಜನೆಯಡಿ ಪ್ರತಿೊಂಬ್ಬ ರೈತರಿಗೂ, ಎಕರೆಗೆ ತಲಾ ೨೫೦ ರೂ.ನಂತೆ ಗರಿಷ್ಠ ೫ ಎಕರೆಯವರೆಗೆ ಸಹಾಯಧನ ನೀಡಲಾಗುತ್ತದೆ.

ಪ್ರಸ್ತುತದ ಬೆಳೆಗಳಿಗೆ ರೋಗ ಬಾಧಿಸುವ ಸೂಚನೆ ಇದೆಯೇ?
ಜಿಲ್ಲೆಯಲ್ಲಿ ಮುಂಗಾರು ತಡವಾಗಿ ಆಗಮಿಸಿದ್ದು, ಪ್ರಸ್ತುತ ಭತ್ತ, ರಾಗಿ, ಮುಸುಕ್ಕಿನ ಜೋಳ, ಕಬ್ಬು, ಉರುಳಿ ಮುಂತಾದ ಬೆಳೆಗಳು ಹೆಚ್ಚು ಹೆಕ್ಟೇರ್‌ನಲ್ಲಿವೆ. ಯಾವುದೇ ರೋಗ ಬಾಧಿಸುವ ಭೀತಿಯಿಲ್ಲ. ರೋಗಕ್ಕೆ ತುತ್ತಾಗುವ ಮುಂಚೆಯೇ ಕೀಟ ನಾಶಕಗಳನ್ನು ಸಿಂಪಡಿಸಿಕೊಳ್ಳಬೇಕು. ಕೃಷಿ ಇಲಾಖೆಯನ್ನು ಸಂಪರ್ಕಿಸಿ ಸೂಕ್ತ ಸಲಹೆಗಳನ್ನು ಪಡೆದು ಬೆಳೆಯನ್ನು ರಕ್ಷಿಸಿ ಹೆಚ್ಚಿನ ಇಳುವರಿ ಪಡೆದುಕೊಳ್ಳಬಹುದು. ಇದಕ್ಕಾಗಿ ಕೃಷಿ ಸಂಜೀವಿನಿ ವಾಹನಗಳನ್ನು ರೈತರ ಜಮೀನಿಗೆ ಕಳುಹಿಸಲಾಗುತ್ತಿದೆ ಎನ್ನುವುದು ಅವರ ವಿವರಣೆ.

andolanait

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

46 mins ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

2 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

3 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

5 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

5 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

6 hours ago