ಜಿಲ್ಲೆಗಳು

ಆಂದೋಲನ ವರದಿಯಿಂದ ಗ್ರಾಮಕ್ಕೆ ಬೆಳಕು!

ಆಂದೋಲನ ಫಲಶ್ರುತಿ
ಹನೂರು
: ತಾಲ್ಲೂಕಿನ ತೊಳಸೀಕೆರೆ ಗ್ರಾಮದಲ್ಲಿ ಕೆಟ್ಟು ನಿಂತಿದ್ದ ಸೋಲಾರ್ ಪ್ಲಾಂಟ್ ನ್ನು ಸೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಭಾನುವಾರ ದುರಸ್ತಿಪಡಿಸಿದ್ದಾರೆ.

ಮಲೆ ಮಹಾದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಈ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ಇದ್ದರಿಂದ ದೀನ್ ದಯಾಳ್ ಉಪಾಧ್ಯಾಯ ಗ್ರಾಮಜ್ಯೋತಿ ಯೋಜನೆಯಡಿ ಡಿಡಿಜಿ ಕಾರ್ಯಕ್ರಮದಡಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಮುಂಬೈನ ನವ್ಯ ಟೆಕ್ನಾಲಜೀಸ್ ಸಂಸ್ಥೆಯ ಮೂಲಕ ರಲ್ಲಿ ಗ್ರಾಮದ ನೂರ ಎಂಬತ್ತು ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 2 ಕೋಟಿ 28ಲಕ್ಷದ 48ಸಾವಿರ ರೂ ವೆಚ್ಚದಲ್ಲಿ ಸೋಲಾರ್ ವಿದ್ಯುತ್ ಸೌಕರ್ಯ ಕಲ್ಪಿಸಲಾಗಿತ್ತು. ಆದರೆ ಕಳೆದ ಹತ್ತು ದಿನಗಳಿಂದ ಸೋಲಾರ್ ಪ್ಲಾಂಟ್ ದುರಸ್ತಿಗೊಂಡಿದ್ದ ರಿಂದ ತೊಳಸೀಕೆರೆ ಗ್ರಾಮಸ್ಥರು ಕಗ್ಗತ್ತಲಿನಲ್ಲಿ ಕಾಲ ಕಳೆಯುವಂತಾಗಿತ್ತು.
ಈ ಹಿನ್ನೆಲೆ “ಕೆಟ್ಟ ಸೋಲಾರ್ ಪ್ಲಾಂಟ್ ಕಗ್ಗತ್ತಲಿನಲ್ಲಿ ತೊಳಸೀಕೆರೆ” ಎಂಬ ಶೀರ್ಷಿಕೆಯಡಿ ಆಂದೋಲನ ದಿನಪತ್ರಿಕೆಯಲ್ಲಿ ಅಕ್ಟೋಬರ್ 12ರಂದು ವರದಿ ಪ್ರಕಟಿಸಲಾಗಿತ್ತು.
ಎಚ್ಚೆತ್ತ ಸೆಸ್ಕಾಂ ಹಾಗೂ ಟೆಂಡರ್ ಪಡೆದಿದ್ದ ಏಜೆನ್ಸಿಯವರು ಭಾನುವಾರ ದುರಸ್ತಿಗೊಂಡಿದ್ದ ಐಸಿಯನ್ನು ಬದಲಾಯಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಟ್ಟಿದ್ದಾರೆ.

ಪತ್ರಿಕೆಯ ವರದಿ ಬಗ್ಗೆ ಮೆಚ್ಚುಗೆ : ಆಂದೋಲನ ದಿನಪತ್ರಿಕೆಯಲ್ಲಿ ತೊಳಸೀಕೆರೆ ಗ್ರಾಮದ ಬಗ್ಗೆ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿ,ವಿದ್ಯುತ್ ಕೊಡಿಸಿರುವುದಕ್ಕೆ ಗ್ರಾಪಂ ಅಧ್ಯಕ್ಷ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

andolanait

Recent Posts

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

19 mins ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

25 mins ago

ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ…

58 mins ago

ಶೌರ್ಯ ಪ್ರಶಸ್ತಿ ಪಡೆದವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ: ಏನದು ಗೊತ್ತಾ.?

ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…

1 hour ago

ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ ದಾಳಿ

ಅಂಕಾರ: ಇಸ್ತಾನ್‌ಬುಲ್‌ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್‌ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು…

2 hours ago

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌

ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್‌…

2 hours ago