ಜಿಲ್ಲೆಗಳು

ಆಂದೋಲನ ರಸಘಳಿಗೆ

ರಸಘಳಿಗೆ

ಆತ್ಮೀಯತೆಯಿಂದಲೇ ಕುಳಿತಿದ್ದ ಪ್ರಸಾದ್-ಎಚ್‌ಸಿಎಂ
ರಾಜಕೀಯದ ನಡೆ ಬೇರೆಯಾದರೂ ಸೈದ್ಧಾಂತಿಕ ನಿಲುವಿನಲ್ಲಿ ಒಂದಾಗಿರುವ ದಲಿತ ನಾಯಕರಾದ ವಿ.ಶ್ರೀನಿವಾಸಪ್ರಸಾದ್ ಹಾಗೂ ಡಾ.ಎಚ್.ಸಿ.ಮಹದೇವಪ್ಪ ಆತ್ಮೀಯತೆಯಿಂದಲೇ ಕುಳಿತು ಪರಸ್ಪರ ಚರ್ಚಿಸಿದರು. ನಂಜನಗೂಡು ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿ.ಶ್ರೀನಿವಾಸಪ್ರಸಾದ್ ಭಾಷಣಮಾಡುತ್ತಿದ್ದಾಗ ಡಾ.ಎಚ್.ಸಿ.ಮಹದೇವಪ್ಪ ಅವರು ಆಗಮಿಸಿದರು. ಈ ವೇಳೆ ತಮ್ಮ ಮಾತನ್ನು ನಿಲ್ಲಿಸಿ ಕೂರುವಂತೆ ನೋಡಿಕೊಂಡರು. ಭಾಷಣ ಮುಗಿಸಿದ ಬಳಿಕ ಮಹದೇವಪ್ಪ ಅವರೊಂದಿಗೆ ಮಾತನಾಡಿ ಕೈ ಕುಲುಕಿದರು. ಪ್ರಸಾದ್ ಅವರ ಯೋಗಕ್ಷೇಮವನ್ನು ವಿಚಾರಿಸುತ್ತಲೇ ಆರೋಗ್ಯ ನೋಡಿಕೊಳ್ಳುವಂತೆ ಹೇಳಿದರು. ಹಲವು ವರ್ಷಗಳ ಒಟ್ಟಿಗೆ ಈ ನಾಯಕರಿಬ್ಬರನ್ನೂ ನೋಡಿದ ಮುಖಂಡರು ಕೆಲಕಾಲ ಸಂತೋಷಗೊಂಡರು.

ಕೋಟಿ ಮತ್ತೆ ಮತ್ತೆ ನೆನಪು
ರಾಜಶೇಖರಕೋಟಿ ಅವರು ನಮ್ಮ ನಡುವೆ ಇಲ್ಲದಿದ್ದರೂ ಸದಾ ನೆನಪಾಗುತ್ತಾರೆ. ಪತ್ರಿಕೆಯನ್ನು ಓದಲು ಕೈಯಲ್ಲಿ ಹಿಡಿದಾಗ ಕೋಟಿ ನೆನಪಾಗುತ್ತಾರೆ.ಅವರೊಂದಿಗೆ ಇದ್ದ ಒಡನಾಟ,ಆತ್ಮೀಯತೆ ಮರೆಯಲು ಸಾಧ್ಯವಿಲ್ಲ.ಹಾಗೆಯೇ ಅವರ ಮಕ್ಕಳಾದ ರವಿಕೋಟಿ,ರಶ್ಮಿಕೋಟಿ ಪತ್ರಿಕೆಯನ್ನು ಮುನ್ನೆಡೆಸಿಕೊಂಡು ಹೋಗುವಂತೆ ಸಂಸದ ವಿ.ಶ್ರೀನಿವಾಸಪ್ರಸಾದ್ ಕಿವಿಮಾತು ಹೇಳಿದರು.

ಅಭಿಮಾನಕ್ಕೆ ಶರಣಾಗಿ ಹಾಜರಾದ ನಾಯಕರು
ಚುನಾವಣೆ ಒತ್ತಡ,ಗ್ರಾಮಗಳ ಭೇಟಿ ಸೇರಿ ಹಲವಾರು ಕಾರಣಗಳಿಂದ ವೇದಿಕೆ ಕಾರ್ಯಕ್ರಮದಿಂದ ದೂರ ಉಳಿಯುತ್ತಿರುವ ಗಣ್ಯರು ಆಂದೋಲನ ಪತ್ರಿಕೆಯ ಅಭಿಮಾನಕ್ಕೆ ಶರಣಾಗಿ ಹಾಜರಾದರು. ರಾಜ್ಯ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಹೊಂದಿರುವ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪು.ಸಿದ್ದಲಿಂಗಸ್ವಾಮಿ, ಕಾಂಪೋಸ್ಟ್ ನಿಗಮದ ಅಧ್ಯಕ್ಷ ಎಸ್,ಮಹದೇವಯ್ಯ ಅವರು ಮಂಗಳವಾರ ರಾತ್ರಿಯೇ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಿ ಬುಧವಾರ ಸಮಯಕ್ಕೆ ಸರಿಯಾಗಿ ಹಾಜರಾದರು. ಕಾರ್ಯಕ್ರಮಕ್ಕೆ ಬಂದೊಡನೆ ರವಿ ಕೋಟಿ ಅವರಿಗೆ ಹೂಗುಚ್ಛ ಕೊಟ್ಟು ಶುಭಾಶಯ ಹೇಳಿದರು.

andolanait

Recent Posts

ಪೌತಿ ಖಾತಾ ಅರ್ಜಿ ಶೀಘ್ರ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…

5 hours ago

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…

5 hours ago

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

7 hours ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

7 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

8 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

9 hours ago