ಆಂದೋಲನ ಟಿವಿ ವರದಿ ಪರಿಣಾಮ
ಹನೂರು: ಕಳೆದ ಐದು ತಿಂಗಳಿನಿಂದ ಸಮರ್ಪಕ ವಿದ್ಯುತ್ ಸಂಪರ್ಕ ಇಲ್ಲದೆ ಪರದಾಡುತ್ತಿದ್ದ ಜಡೇಗೌಡನ ದೊಡ್ಡಿ ಗ್ರಾಮಕ್ಕೆ ಆಂದೋಲನ ಪತ್ರಿಕೆ/ಟಿವಿಯಲ್ಲಿ ವರದಿ ಪ್ರಕಟಗೊಂಡ ಒಂದು ದಿನದಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಡೆೇಗೌಡನ ದೊಡ್ಡಿ ಗ್ರಾಮದಲ್ಲಿ ಟಿಸಿಗೆ ಅಳವಡಿಸಿರುವ ಕೇಬಲ್ ದುರಸ್ತಿಗೊಂಡು ಐದು ತಿಂಗಳಲ್ಲೇ ಕಳೆದಿತ್ತು. ಕಳೆದ ಐದು ತಿಂಗಳಿನಿಂದ ಕಗ್ಗತ್ತಲಿನಲ್ಲಿ ಜೀವನ ನಡೆಸುತ್ತಿದ್ದರು. ಕೇಬಲ್ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರು ಸಹ ಪ್ರಯೋಜನವಾಗಿರಲಿಲ್ಲ.
ಅ.2 ರಂದು ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು ಈ ಬಗ್ಗೆ ಆಂದೋಲನ ಪತ್ರಿಕೆಯಲ್ಲಿ ‘ವಿದ್ಯುತ್ ಪೂರೈಸಲು ಒತ್ತಾಯಿಸಿ ಪ್ರತಿಭಟನೆ’ ಎಂಬ ಶೀರ್ಷಿಕೆಯಡಿ ಆಗಸ್ಟ್ 10 ರಂದು ವರದಿ ಪ್ರಕಟಿಸಲಾಗಿತ್ತು. ವರದಿಗೆ ಎಚ್ಚೆತ್ತ ಸೆಸ್ಕಾಂ ಅಧಿಕಾರಿಗಳು 5 ತಿಂಗಳಿನಿಂದ ಬಗೆಹರಿಯದಿದ್ದ ಸಮಸ್ಯೆಯನ್ನು ಕೇವಲ ಒಂದು ದಿನದಲ್ಲಿ ದುರಸ್ತಿ ಪಡಿಸಿ ಗ್ರಾಮಕ್ಕೆ ಸಮರ್ಪಕ ವಿದ್ಯುತ್ ಕಲ್ಪಿಸಿದ್ದಾರೆ.
ಗ್ರಾಮದ ಮಲ್ಲಮ್ಮ ಮಾತನಾಡಿ ಗ್ರಾಮದಲ್ಲಿ ಕಳೆದ ಐದು ತಿಂಗಳಿನಿಂದ ವಿದ್ಯುತ್ ಸಮಸ್ಯೆ ಕಾಡುತ್ತಿತ್ತು ಆಂದೋಲನ ಪತ್ರಿಕೆ/ಟಿವಿಯಲ್ಲಿ ವರದಿ ಪ್ರಕಟ ನಂತರ ವಿದ್ಯುತ್ ಸಮಸ್ಯೆ ಬಗೆಹರಿದಿದೆ. ನಮ್ಮ ಸಮಸ್ಯೆ ಬಗೆಹರಿಸಿದ ಆಂದೋಲನ ಪತ್ರಿಕೆ/ಟಿವಿಗೆ ಧನ್ಯವಾದ ತಿಳಿಸಿದ್ದಾರೆ.
ಸಮಸ್ಯೆ ಬಗೆಹರಿಸಿದ್ದಕ್ಕಾಗಿ ಜಡೇಗೌಡನದೊಡ್ಡಿ ಗ್ರಾಮದ ರುದ್ರೇಗೌಡ ಹಾಗೂ ಕರಳೇ ಮಾದೇಗೌಡ ಧನ್ಯವಾದ ತಿಳಿಸಿದ್ದಾರೆ.
ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ…
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…
ಮೈಸೂರಿನ ಶಾರದಾದೇವಿ ನಗರದ ಸರ್ಕಲ್ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…
ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…
ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…