ಜಿಲ್ಲೆಗಳು

ಆಂದೋಲನ ಪತ್ರಿಕೆ ವರದಿ ಪರಿಣಾಮ – ಗ್ರಾಮಕ್ಕೆ ವಿದ್ಯುತ್

ಆಂದೋಲನ ಟಿವಿ ವರದಿ ಪರಿಣಾಮ

ಹನೂರು: ಕಳೆದ ಐದು ತಿಂಗಳಿನಿಂದ ಸಮರ್ಪಕ ವಿದ್ಯುತ್ ಸಂಪರ್ಕ ಇಲ್ಲದೆ ಪರದಾಡುತ್ತಿದ್ದ ಜಡೇಗೌಡನ ದೊಡ್ಡಿ ಗ್ರಾಮಕ್ಕೆ ಆಂದೋಲನ ಪತ್ರಿಕೆ/ಟಿವಿಯಲ್ಲಿ ವರದಿ ಪ್ರಕಟಗೊಂಡ ಒಂದು ದಿನದಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಡೆೇಗೌಡನ ದೊಡ್ಡಿ ಗ್ರಾಮದಲ್ಲಿ ಟಿಸಿಗೆ ಅಳವಡಿಸಿರುವ ಕೇಬಲ್ ದುರಸ್ತಿಗೊಂಡು ಐದು ತಿಂಗಳಲ್ಲೇ ಕಳೆದಿತ್ತು. ಕಳೆದ ಐದು ತಿಂಗಳಿನಿಂದ ಕಗ್ಗತ್ತಲಿನಲ್ಲಿ ಜೀವನ ನಡೆಸುತ್ತಿದ್ದರು. ಕೇಬಲ್ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರು ಸಹ ಪ್ರಯೋಜನವಾಗಿರಲಿಲ್ಲ.

ಅ.2 ರಂದು ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು ಈ ಬಗ್ಗೆ ಆಂದೋಲನ ಪತ್ರಿಕೆಯಲ್ಲಿ ‘ವಿದ್ಯುತ್ ಪೂರೈಸಲು ಒತ್ತಾಯಿಸಿ ಪ್ರತಿಭಟನೆ’ ಎಂಬ ಶೀರ್ಷಿಕೆಯಡಿ ಆಗಸ್ಟ್ 10 ರಂದು ವರದಿ ಪ್ರಕಟಿಸಲಾಗಿತ್ತು. ವರದಿಗೆ ಎಚ್ಚೆತ್ತ ಸೆಸ್ಕಾಂ ಅಧಿಕಾರಿಗಳು 5 ತಿಂಗಳಿನಿಂದ ಬಗೆಹರಿಯದಿದ್ದ ಸಮಸ್ಯೆಯನ್ನು ಕೇವಲ ಒಂದು ದಿನದಲ್ಲಿ ದುರಸ್ತಿ ಪಡಿಸಿ ಗ್ರಾಮಕ್ಕೆ ಸಮರ್ಪಕ ವಿದ್ಯುತ್ ಕಲ್ಪಿಸಿದ್ದಾರೆ.

ಗ್ರಾಮದ ಮಲ್ಲಮ್ಮ ಮಾತನಾಡಿ ಗ್ರಾಮದಲ್ಲಿ ಕಳೆದ ಐದು ತಿಂಗಳಿನಿಂದ ವಿದ್ಯುತ್ ಸಮಸ್ಯೆ ಕಾಡುತ್ತಿತ್ತು ಆಂದೋಲನ ಪತ್ರಿಕೆ/ಟಿವಿಯಲ್ಲಿ ವರದಿ ಪ್ರಕಟ ನಂತರ ವಿದ್ಯುತ್ ಸಮಸ್ಯೆ ಬಗೆಹರಿದಿದೆ. ನಮ್ಮ ಸಮಸ್ಯೆ ಬಗೆಹರಿಸಿದ ಆಂದೋಲನ ಪತ್ರಿಕೆ/ಟಿವಿಗೆ ಧನ್ಯವಾದ ತಿಳಿಸಿದ್ದಾರೆ.
ಸಮಸ್ಯೆ ಬಗೆಹರಿಸಿದ್ದಕ್ಕಾಗಿ ಜಡೇಗೌಡನದೊಡ್ಡಿ ಗ್ರಾಮದ ರುದ್ರೇಗೌಡ ಹಾಗೂ ಕರಳೇ ಮಾದೇಗೌಡ ಧನ್ಯವಾದ ತಿಳಿಸಿದ್ದಾರೆ.

andolanait

Recent Posts

ಆಂದೋಲನ ವರದಿ ಫಲಶ್ರುತಿ : ಪಚ್ಚೆದೊಡ್ಡಿ ಗ್ರಾಮದ ಶಾಲೆ ಮಕ್ಕಳಿಗೆ ವಾಹನ ಸೌಲಭ್ಯ

ಡಿಸಿ ಶಿಲ್ಪಾನಾಗ್‌ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…

27 mins ago

ನಾನೇ ವಿಪಕ್ಷ ನಾಯಕ ಎಂದ ಯತ್ನಾಳ್

ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…

34 mins ago

ಬಿಳಿಗಿರಿ ರಂಗನಬೆಟ್ಟ ಅಭಿವೃದ್ಧಿ ಕಾರ್ಯ ಪರಿಶೀಲನೆಯಲ್ಲಿದೆ : ಸಚಿವ .ಎಚ್.ಕೆ.ಪಾಟೀಲ್‌

ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…

48 mins ago

ರೈತರಿಗೆ ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…

2 hours ago

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

2 hours ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

3 hours ago