ಜಿಲ್ಲೆಗಳು

ಅಂಗನವಾಡಿ ನೌಕರರ ವೇತನ, ಗ್ರಾಚ್ಯುಯಿಟಿ ಆದೇಶ ಜಾರಿಗೆ ಆಗ್ರಹ

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ

ಮೈಸೂರು: ವೇತನ ಮತ್ತು ಗ್ರಾಚುಯಿಟಿ ಆದೇಶ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ,ಯುಕೆಜಿ ಪ್ರಾರಂಭಿಸಬೇಕು ಎಂಬುದೂ ಸೇರಿದಂತೆ ಮುಂತಾದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಗುರುವಾರ ನಗರದ ರಾಮಸ್ವಾಮಿ ವೃತ್ತದ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಅಲ್ಲಿ ಜಮಾವಣೆಗೊಂಡರಲ್ಲದೆ, ನೌಕರರ ಗ್ರಾಚುಯಿಟಿ ಪಾವತಿಸಲು ಕೂಡಲೇ ಸರ್ಕಾರ ನಿರ್ದೇಶನ ನೀಡಬೇಕು. ಅನ್ನದೊಟ್ಟಿಗೆ ಅಕ್ಷರ ಕೇಂದ್ರವಾಗಿ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಬೇಕು. ಅಂಗನವಾಡಿ ಕೇಂದ್ರದ ವೇಳಾಪಟ್ಟಿ ಬದಲಾಗಬೇಕು. ಉಚಿತ ಕೆಲಸ ನಿಲ್ಲಿಸಿ ಸಮಯಕ್ಕೆ ಸರಿಯಾಗಿ ವೇತನ ಪಾವತಿಸಬೇಕು. ನ್ಯಾಯಯುತ ಮುಂಬಡ್ತಿಗಳನ್ನು ನೀಡಲು ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಹೊಸದಾಗಿ ಪ್ರಾರಂಭವಾಗುತ್ತಿರುವ ೪,೫೦೦ ಅಂಗನವಾಡಿ ಕೇಂದ್ರಗಳನ್ನು ಈಗಾಗಲೇ ಇರುವ ಅಂಗನವಾಡಿ ಕೇಂದ್ರಗಳ ಅನ್ವಯ ಪೂರ್ಣ ಕೇಂದ್ರಗಳಾಗಿ ಪರಿವರ್ತಿಸಬೇಕು. ೧೨ ಲಕ್ಷ ರೂ. ಬದಲಿಗೆ ೨೦ ಲಕ್ಷ ರೂ. ಅನುದಾನ ನೀಡಬೇಕು. ಮಕ್ಕಳಿಗೆ ಸಮವಸ್ತ್ರ, ಶೂ, ಪುಸ್ತಕ, ಬ್ಯಾಗ್‌ಗಳನ್ನು ಉಚಿತವಾಗಿ ನೀಡಬೇಕು. ಅಂಗನವಾಡಿ ಕೇಂದ್ರಗಳಿಗೆ ಎಲ್ಲ ರೀತಿಯ ಗುಣಾತ್ಮಕ ಮೂಲ ಸೌಲಭ್ಯಗಳನ್ನು ನೀಡಬೇಕೆಂದು ಒತ್ತಾಯಿಸಿದರು.
ಸಂಘದ ಅಧ್ಯಕ್ಷೆ ಎಚ್.ಎಸ್.ಸುನಂದ, ಪ್ರಧಾನ ಕಾರ್ಯದರ್ಶಿ ಪುಷ್ಪಲತಾ, ಎ.ಲತಾ, ಜಯಂತಿ, ವಸಂತಮ್ಮ, ನೀಲಮ್ಮ, ಮಂಗಳ ಗೌರಮ್ಮ, ಹೇಮಾವತಿ ಕಮಲಾಕ್ಷಿ, ಚಂದ್ರಿಕಾ ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago