ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ
ಮೈಸೂರು: ವೇತನ ಮತ್ತು ಗ್ರಾಚುಯಿಟಿ ಆದೇಶ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ಕೆಜಿ,ಯುಕೆಜಿ ಪ್ರಾರಂಭಿಸಬೇಕು ಎಂಬುದೂ ಸೇರಿದಂತೆ ಮುಂತಾದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಗುರುವಾರ ನಗರದ ರಾಮಸ್ವಾಮಿ ವೃತ್ತದ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಅಲ್ಲಿ ಜಮಾವಣೆಗೊಂಡರಲ್ಲದೆ, ನೌಕರರ ಗ್ರಾಚುಯಿಟಿ ಪಾವತಿಸಲು ಕೂಡಲೇ ಸರ್ಕಾರ ನಿರ್ದೇಶನ ನೀಡಬೇಕು. ಅನ್ನದೊಟ್ಟಿಗೆ ಅಕ್ಷರ ಕೇಂದ್ರವಾಗಿ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಬೇಕು. ಅಂಗನವಾಡಿ ಕೇಂದ್ರದ ವೇಳಾಪಟ್ಟಿ ಬದಲಾಗಬೇಕು. ಉಚಿತ ಕೆಲಸ ನಿಲ್ಲಿಸಿ ಸಮಯಕ್ಕೆ ಸರಿಯಾಗಿ ವೇತನ ಪಾವತಿಸಬೇಕು. ನ್ಯಾಯಯುತ ಮುಂಬಡ್ತಿಗಳನ್ನು ನೀಡಲು ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಹೊಸದಾಗಿ ಪ್ರಾರಂಭವಾಗುತ್ತಿರುವ ೪,೫೦೦ ಅಂಗನವಾಡಿ ಕೇಂದ್ರಗಳನ್ನು ಈಗಾಗಲೇ ಇರುವ ಅಂಗನವಾಡಿ ಕೇಂದ್ರಗಳ ಅನ್ವಯ ಪೂರ್ಣ ಕೇಂದ್ರಗಳಾಗಿ ಪರಿವರ್ತಿಸಬೇಕು. ೧೨ ಲಕ್ಷ ರೂ. ಬದಲಿಗೆ ೨೦ ಲಕ್ಷ ರೂ. ಅನುದಾನ ನೀಡಬೇಕು. ಮಕ್ಕಳಿಗೆ ಸಮವಸ್ತ್ರ, ಶೂ, ಪುಸ್ತಕ, ಬ್ಯಾಗ್ಗಳನ್ನು ಉಚಿತವಾಗಿ ನೀಡಬೇಕು. ಅಂಗನವಾಡಿ ಕೇಂದ್ರಗಳಿಗೆ ಎಲ್ಲ ರೀತಿಯ ಗುಣಾತ್ಮಕ ಮೂಲ ಸೌಲಭ್ಯಗಳನ್ನು ನೀಡಬೇಕೆಂದು ಒತ್ತಾಯಿಸಿದರು.
ಸಂಘದ ಅಧ್ಯಕ್ಷೆ ಎಚ್.ಎಸ್.ಸುನಂದ, ಪ್ರಧಾನ ಕಾರ್ಯದರ್ಶಿ ಪುಷ್ಪಲತಾ, ಎ.ಲತಾ, ಜಯಂತಿ, ವಸಂತಮ್ಮ, ನೀಲಮ್ಮ, ಮಂಗಳ ಗೌರಮ್ಮ, ಹೇಮಾವತಿ ಕಮಲಾಕ್ಷಿ, ಚಂದ್ರಿಕಾ ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…