ಜಿಲ್ಲೆಗಳು

ಅನಿಲ್ ಚಿಕ್ಕಮಾದು ಸಹೋದರಿ‌ JDS ಗೆ ಸೇರ್ಪಡೆ

ಮೈಸೂರು: ಎಚ್.ಡಿ.ಕೋಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಅವರ ಸಹೋದರಿ ರಂಜಿತಾ ಎಸ್. ಚಿಕ್ಕಮಾದು ಅವರು ಜಾ.ದಳ ಸೇರ್ಪಡೆಯಾಗಲಿದ್ದಾರೆ. ಗುರುವಾರ ಬಿಡದಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜಾ.ದಳ ಸೇರುವ ಮೂಲಕ ಹುಣಸೂರು ಕ್ಷೇತ್ರದಲ್ಲಿ ಜಾ.ದಳ ಅಭ್ಯರ್ಥಿ ಜಿ.ಡಿ.ಹರೀಶ್ ಗೌಡ ಅವರ ಗೆಲುವಿಗೆ ಶ್ರಮಿಸುವುದಾಗಿ ಹೇಳಿರುವುದು ಅಚ್ಚರಿ ಮೂಡಿಸಿದೆ. ಬಂಗಾರಪ್ಪ ಮುಖ್ಯ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಹುಣಸೂರು ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಶಾಸಕರಾಗಿ ಚುನಾಯಿತರಾಗಿದ್ದ ಚಿಕ್ಕಮಾದು ಅವರು ನಂತರದ ದಿನಗಳಲ್ಲಿ ಜಾ.ದಳದಲ್ಲಿ ರಾಜಕೀಯ ಭವಿಷ್ಯ ಕಂಡುಕೊಂಡು ಒಂದು ಅವಧಿಗೆ ವಿಧಾನಪರಿಷತ್ ಸದಸ್ಯರಾಗಿದ್ದರು ‌ ನಂತರ ತಮ್ಮ ಕಾರ್ಯಕ್ಷೇತ್ರವನ್ನು ಹುಣಸೂರು ನಿಂದ ಎಸ್.ಟಿ.ಮೀಸಲು ಕ್ಷೇತ್ರ ಎಚ್.ಡಿ.ಕೋಟೆಗೆ ಬದಲಾಯಿಸಿಕೊಂಡು ಶಾಸಕರಾಗಿ ಆಯ್ಕೆಯಾಗಿದ್ದರು. ಎರಡನೇ ಅವಧಿಯಲ್ಲಿ ಅನಾರೋಗ್ಯ ದಿಂದ ನಿಧನರಾದ ನಂತರ ಅವರ ಪುತ್ರ ಅನಿಲ್ ಚಿಕ್ಕಮಾದು ಕಾಂಗ್ರೆಸ್ ಸೇರಿ ಎಚ್.ಡಿ‌‌ಕೋಟೆ ಕ್ಷೇತ್ರದ ಶಾಸಕರಾಗಿದ್ದಾರೆ.

andolanait

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

4 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

4 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

5 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

5 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

5 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

6 hours ago