ಮೈಸೂರು: ಎಚ್.ಡಿ.ಕೋಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಅವರ ಸಹೋದರಿ ರಂಜಿತಾ ಎಸ್. ಚಿಕ್ಕಮಾದು ಅವರು ಜಾ.ದಳ ಸೇರ್ಪಡೆಯಾಗಲಿದ್ದಾರೆ. ಗುರುವಾರ ಬಿಡದಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜಾ.ದಳ ಸೇರುವ ಮೂಲಕ ಹುಣಸೂರು ಕ್ಷೇತ್ರದಲ್ಲಿ ಜಾ.ದಳ ಅಭ್ಯರ್ಥಿ ಜಿ.ಡಿ.ಹರೀಶ್ ಗೌಡ ಅವರ ಗೆಲುವಿಗೆ ಶ್ರಮಿಸುವುದಾಗಿ ಹೇಳಿರುವುದು ಅಚ್ಚರಿ ಮೂಡಿಸಿದೆ. ಬಂಗಾರಪ್ಪ ಮುಖ್ಯ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಹುಣಸೂರು ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಶಾಸಕರಾಗಿ ಚುನಾಯಿತರಾಗಿದ್ದ ಚಿಕ್ಕಮಾದು ಅವರು ನಂತರದ ದಿನಗಳಲ್ಲಿ ಜಾ.ದಳದಲ್ಲಿ ರಾಜಕೀಯ ಭವಿಷ್ಯ ಕಂಡುಕೊಂಡು ಒಂದು ಅವಧಿಗೆ ವಿಧಾನಪರಿಷತ್ ಸದಸ್ಯರಾಗಿದ್ದರು ನಂತರ ತಮ್ಮ ಕಾರ್ಯಕ್ಷೇತ್ರವನ್ನು ಹುಣಸೂರು ನಿಂದ ಎಸ್.ಟಿ.ಮೀಸಲು ಕ್ಷೇತ್ರ ಎಚ್.ಡಿ.ಕೋಟೆಗೆ ಬದಲಾಯಿಸಿಕೊಂಡು ಶಾಸಕರಾಗಿ ಆಯ್ಕೆಯಾಗಿದ್ದರು. ಎರಡನೇ ಅವಧಿಯಲ್ಲಿ ಅನಾರೋಗ್ಯ ದಿಂದ ನಿಧನರಾದ ನಂತರ ಅವರ ಪುತ್ರ ಅನಿಲ್ ಚಿಕ್ಕಮಾದು ಕಾಂಗ್ರೆಸ್ ಸೇರಿ ಎಚ್.ಡಿಕೋಟೆ ಕ್ಷೇತ್ರದ ಶಾಸಕರಾಗಿದ್ದಾರೆ.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…