ಯಳಂದೂರು: ತಾಲೂಕಿನ ಕಂದಹಳ್ಳಿಯಲ್ಲಿ ಭಾನುವಾರ ಬೆಳಗ್ಗೆ ಪಶು ಆಹಾರ ಸೇವಿಸಿ 4 ಜಾನುವಾರು ಮೃತಪಟ್ಟಿವೆ.
ಪಟ್ಟಣದ ಅಂಗಡಿ ಯೊಂದರಲ್ಲಿ ತಂದಿದ್ದ ವೀಟ್ ಬ್ರಾನ್ ಪ್ಲೇಕ್ಸ್ ಹೆಸರಿನ ಆಹಾರವನ್ನು ಜಾನುವಾರುಗಳಿಗೆ ನೀಡಿದ್ದೆವು. ಹಸು
ಮತ್ತು ಎತ್ತುಗಳು ಸೇವಿಸಿದ ಕೆಲವೇ ಕ್ಷಣಗಳಲ್ಲಿ ಹೊರಳಾಡಿ
ಅಸು ನೀಗಿದವು. ಪಶು ಸಾಕಣೆಯಿಂದ ಜೀವನ ಕಟ್ಟಿಕೊಂಡಿದ್ದ
ಕುಟುಂಬಕ್ಕೆ ಲಕ್ಷಾಂತರ ನಷ್ಟವಾಗಿದೆ’ ಎಂದು ಮಾಲೀಕ ಬಸವಣ್ಣ ಅವರು ಅಳಲು ತೋಡಿಕೊಂಡರು.ಈ ಬಗ್ಗೆ ಪಟ್ಟಣ ಪೊಲೀಸರು ತನಿಖೆ ಕೈಗೊಂಡಿದ್ದು, ಆಹಾರ ಪೂರೈಕೆ ಮಾಡಿದ ಅಂಗಡಿಯ ಮಾಲೀಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಅವಧಿ ಮೀರಿದ ಪಶು ಆಹಾರ ಸೇವಿಸಿ 4 ರಾಸುಗಳು ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಶಾಸಕ ಎನ್. ಮಹೇಶ್, ಚಾಮುಲ್ ಅಧ್ಯಕ್ಷ ವೈ.ಎನ್. ನಾಗೇಂದ್ರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ. ಸುಗಂಧರಾಜ್, ಡಾ. ಶಿವರಾಜು ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…