ಜಿಲ್ಲೆಗಳು

ಸಾಕು ಪ್ರಾಣಿಗಳಿಗೆ ಕಂಟಕವಾದ ಹುಲಿ, ಚಿರತೆ!

ಬಿಸಲವಾಡಿ, ಮುಕ್ಕಡಹಳ್ಳಿಯಲ್ಲಿ ಗೋವುಗಳು-ಕರು ಬಲಿ

ರಾಜೇಶ್ ಬೆಂಡರವಾಡಿ
ಚಾಮರಾಜನಗರ: ಕಾಡು ಪ್ರಾಣಿಗಳಾದ ಹುಲಿ, ಚಿರತೆ ದೃಶ್ಯ ನೋಡಿದರೆ ಭಯ. ಅವು ಗ್ರಾಮದ ಹತ್ತಿರ ಬಂದು ಗೋವು, ಕರುಗಳನ್ನು ಕೊಂದು ತಿಂದುಹೋದರೆ! ಹೌದು, ತಾಲ್ಲೂಕಿನ ಬಿಸಲವಾಡಿ ಬಳಿ ಹುಲಿ ಉಪಟಳ ಹಾಗೂ ಮುಕ್ಕಡಹಳ್ಳಿ ಗ್ರಾಮದ ಹತ್ತಿರ ಚಿರತೆ ಹಾವಳಿ ಎಲ್ಲರನ್ನು ಭಯಭೀತರನ್ನಾಗಿಸಿದೆ. ಈ ಗ್ರಾಮಗಳು ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಒಳಪಟ್ಟಿವೆ. ಬಿಸಲವಾಡಿ ಶಿವಣ್ಣಶೆಟ್ಟಿ ಅವರ ೨ ಹಸುಗಳು ಗುರುವಾರ(ನ.೩) ಹುಲಿಬಾಯಿಗೆ ತುತ್ತಾಗಿವೆ.
ಮೂರು ಹಸುಗಳನ್ನು ಜಮೀನಿನಲ್ಲಿ ಮೇಯಲು ಬಿಡಲಾಗಿತ್ತು. ಸಂಜೆ ಎಂದಿನಂತೆ ಮೂರೂ ಹಸುಗಳು ಮನೆಗೆ ಹಿಂದಿರುಗಲಿಲ್ಲ, ಒಂದು ಮಾತ್ರ ಬಂದಿತು. ಮಾರನೇ ದಿನ ಜಮೀನಿನಲ್ಲಿ ಹುಡುಕಿದಾಗ ಎರಡು ಹಸುಗಳು ಸತ್ತುಬಿದ್ದಿದ್ದವು. ಹುಲಿ ಅರೆಬರೆ ತಿಂದು ಬಿಟ್ಟುಹೋಗಿತ್ತು. ಹೆಜ್ಜೆ ಗುರುತು, ಬೇಟೆಯಾಡಿರುವ ರೀತಿಯಿಂದ ಹುಲಿ ಎಂಬುದು ಅರಣ್ಯ ಇಲಾಖೆಗೆ ದೃಢಪಟ್ಟಿದೆ.

ಇದು ಹುಲಿರಾಯನ ಕತೆಯಾದರೆ ಇನ್ನು ಚಿರತೆ ಮುಕ್ಕಡಹಳ್ಳಿ-ಹರವೆ ನಡುವಿನ ಜಮೀನೊಂದರಲ್ಲಿ ಸುಮಾರು ಒಂದೂವರೆ ವರ್ಷದ ಕರುವನ್ನು ಕೊಂದು ತಿಂದು ಅದರ ಕಳೇಬರವನ್ನು ಬಿಟ್ಟುಹೋಗಿದೆ. ಗ್ರಾಮದ ಶಿವಣ್ಣ ಅವರು ಜಮೀನಿಂದ ಮನೆಗೆ ಹಸುಗಳೊಂದಿಗೆ ಮುಂದೆ ಬಂದಿದ್ದು ಹಿಂದೆ ಕರು ಬರುತ್ತಿತ್ತು. ಈ ವೇಳೆ ಚಿರತೆ ದಾಳಿ ಮಾಡಿದೆ. ಕರು ಕಾಣದಿದ್ದಾಗ ವಾಪಸ್ ಜಮೀನಿಗೆ ಬಂದು ನೋಡಿದಾಗ ಅದು ಇರಲಿಲ್ಲ. ಮಾರನೇ ದಿನ ಅದರ ಕಳೇಬರ ಬಿಡಿಬಿಡಿಯಾಗಿ ಬಿದ್ದಿರುವುದು ಗೋಚರಿಸಿದೆ.

ಈ ಘಟನೆ ನಡೆದು ೫ ದಿನಗಳಾಗಿವೆ. ಕಾಕತಾಳೀಯವೋ ಅಥವಾ ಅಲ್ಲಿಯೇ ಚಿರತಗಳು ಬೀಡುಬಿಟ್ಟಿವೆಯೋ ಗೊತ್ತಿಲ್ಲ. ಶಿವಣ್ಣ ಅವರಿಗೆ ಸೇರಿದ ಕರು ಹಾಗೂ ಕುರಿಯನ್ನು ಕಳೆದ ವರ್ಷವೂ ಇದೇ ರೀತಿ ಚಿರತೆ ಬೇಟೆಯಾಡಿತ್ತು.
ಹರವೆ ಮತ್ತು ಮುಕ್ಕಡಹಳ್ಳಿ ಗ್ರಾಮಕ್ಕೆ ನೇರ ಸಂಪರ್ಕ ಕಲ್ಪಿಸುವ ಕಾಲು ದಾರಿಯಲ್ಲಿರುವ ಜಮೀನೊಂದರಲ್ಲಿ ಚಿರತೆ ದಾಳಿ ಮಾಡಿ ಕರುವನ್ನು ಕೊಂದಿರುವ ವಿಚಾರವನ್ನು ಪ್ರಗತಿಪರ ಕೃಷಿಕ ಮಧುಸೂದನ್ ಅವರು ಅರಣ್ಯ ಇಲಾಖೆಯ ಆರ್‌ಎಫ್‌ಒ ಗಮನಕ್ಕೆ ತರಲಾಗಿ ಆ ಕೂಡಲೇ ಬೋನನ್ನು ತಂದಿರಿಸಲಾಗಿದೆ. ಆದರೆ ಬೋನಿಗೆ ಚಿರತೆ ಬಿದ್ದಿಲ್ಲ. ಹೀಗಾಗಿ ಕೃಷಿಕರು, ದನಗಾಹಿಗಳು ಮತ್ತು ಕಾರ್ಮಿಕರು ಜೀವಭಯದಿಂದ ತಿರುಗಾಡುವಂತಾಗಿದೆ. ಹುಲಿ ಹಸುಗಳನ್ನು ಕೊಂದಿರುವ ಬಿಸಲವಾಡಿ ಗ್ರಾಮ ತಮಿಳುನಾಡಿನ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿದೆ. ಹತ್ತಿರದಲ್ಲೇ ಹೊನ್ನಹಳ್ಳಿ ಗುಡ್ಡವೂ ಇದೆ. ಇಲ್ಲಿ ಚಿರತೆಗಳ ಕಾಟವೂ ಜಾಸ್ತಿಯಾಗಿದೆ.. ಹೀಗಾಗಿ ಈ ಭಾಗದಲ್ಲಿ ಹಸು, ಮೇಕೆ, ಕುರಿ, ನಾಯಿಗಳು ಬಲಿಯಾಗುತ್ತಲೇ ಇವೆ. ಕಳೆದ 4 ತಿಂಗಳಲ್ಲಿ 8 ಸಾಕು ಪ್ರಾಣಿಗಳು ಬಲಿಯಾಗಿವೆ ಎಂದು ಚಾಮರಾಜನಗರ ಪ್ರಾದೇಶಿಕ ಅರಣ್ಯವಲಯದ(ಕೇಂದ್ರಸ್ಥಾನ) ಮೂಲಗಳು ತಿಳಿಸಿವೆ.


ಬೋನಿಗೆ ಚಿರತೆ ಬೀಳುವ ಸಾಧ್ಯತೆ ತುಂಬಾ ಕಡಿಮೆ. ಆದ್ದರಿಂದ ಅದನ್ನು ಹಿಡಿದು ಹೊರಗೆ ಸ್ಥಳಾಂತರಿಸಬೇಕು. ಚಿರತೆ ದಾಳಿಯಿಂದ ತಿ.ನರಸೀಪುರ ತಾಲ್ಲೂಕಿನಲ್ಲಿ ವ್ಯಕ್ತಿಯೊಬ್ಬರು ಇತ್ತೀಚೆಗಷ್ಟೇ ಮೃತಪಟ್ಟಿದ್ದು ಇದು ಎಲ್ಲರಿಗೂ ಎಚ್ಚರಿಕೆಯಾಗಿದೆ.

ಮುಕ್ಕಡಹಳ್ಳಿ ಮಧುಸೂದನ್, ಪ್ರಗತಿಪರ ರೈತ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

4 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago