ಜಿಲ್ಲೆಗಳು

ಸಾಕು ಪ್ರಾಣಿಗಳಿಗೆ ಕಂಟಕವಾದ ಹುಲಿ, ಚಿರತೆ!

ಬಿಸಲವಾಡಿ, ಮುಕ್ಕಡಹಳ್ಳಿಯಲ್ಲಿ ಗೋವುಗಳು-ಕರು ಬಲಿ

ರಾಜೇಶ್ ಬೆಂಡರವಾಡಿ
ಚಾಮರಾಜನಗರ: ಕಾಡು ಪ್ರಾಣಿಗಳಾದ ಹುಲಿ, ಚಿರತೆ ದೃಶ್ಯ ನೋಡಿದರೆ ಭಯ. ಅವು ಗ್ರಾಮದ ಹತ್ತಿರ ಬಂದು ಗೋವು, ಕರುಗಳನ್ನು ಕೊಂದು ತಿಂದುಹೋದರೆ! ಹೌದು, ತಾಲ್ಲೂಕಿನ ಬಿಸಲವಾಡಿ ಬಳಿ ಹುಲಿ ಉಪಟಳ ಹಾಗೂ ಮುಕ್ಕಡಹಳ್ಳಿ ಗ್ರಾಮದ ಹತ್ತಿರ ಚಿರತೆ ಹಾವಳಿ ಎಲ್ಲರನ್ನು ಭಯಭೀತರನ್ನಾಗಿಸಿದೆ. ಈ ಗ್ರಾಮಗಳು ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಒಳಪಟ್ಟಿವೆ. ಬಿಸಲವಾಡಿ ಶಿವಣ್ಣಶೆಟ್ಟಿ ಅವರ ೨ ಹಸುಗಳು ಗುರುವಾರ(ನ.೩) ಹುಲಿಬಾಯಿಗೆ ತುತ್ತಾಗಿವೆ.
ಮೂರು ಹಸುಗಳನ್ನು ಜಮೀನಿನಲ್ಲಿ ಮೇಯಲು ಬಿಡಲಾಗಿತ್ತು. ಸಂಜೆ ಎಂದಿನಂತೆ ಮೂರೂ ಹಸುಗಳು ಮನೆಗೆ ಹಿಂದಿರುಗಲಿಲ್ಲ, ಒಂದು ಮಾತ್ರ ಬಂದಿತು. ಮಾರನೇ ದಿನ ಜಮೀನಿನಲ್ಲಿ ಹುಡುಕಿದಾಗ ಎರಡು ಹಸುಗಳು ಸತ್ತುಬಿದ್ದಿದ್ದವು. ಹುಲಿ ಅರೆಬರೆ ತಿಂದು ಬಿಟ್ಟುಹೋಗಿತ್ತು. ಹೆಜ್ಜೆ ಗುರುತು, ಬೇಟೆಯಾಡಿರುವ ರೀತಿಯಿಂದ ಹುಲಿ ಎಂಬುದು ಅರಣ್ಯ ಇಲಾಖೆಗೆ ದೃಢಪಟ್ಟಿದೆ.

ಇದು ಹುಲಿರಾಯನ ಕತೆಯಾದರೆ ಇನ್ನು ಚಿರತೆ ಮುಕ್ಕಡಹಳ್ಳಿ-ಹರವೆ ನಡುವಿನ ಜಮೀನೊಂದರಲ್ಲಿ ಸುಮಾರು ಒಂದೂವರೆ ವರ್ಷದ ಕರುವನ್ನು ಕೊಂದು ತಿಂದು ಅದರ ಕಳೇಬರವನ್ನು ಬಿಟ್ಟುಹೋಗಿದೆ. ಗ್ರಾಮದ ಶಿವಣ್ಣ ಅವರು ಜಮೀನಿಂದ ಮನೆಗೆ ಹಸುಗಳೊಂದಿಗೆ ಮುಂದೆ ಬಂದಿದ್ದು ಹಿಂದೆ ಕರು ಬರುತ್ತಿತ್ತು. ಈ ವೇಳೆ ಚಿರತೆ ದಾಳಿ ಮಾಡಿದೆ. ಕರು ಕಾಣದಿದ್ದಾಗ ವಾಪಸ್ ಜಮೀನಿಗೆ ಬಂದು ನೋಡಿದಾಗ ಅದು ಇರಲಿಲ್ಲ. ಮಾರನೇ ದಿನ ಅದರ ಕಳೇಬರ ಬಿಡಿಬಿಡಿಯಾಗಿ ಬಿದ್ದಿರುವುದು ಗೋಚರಿಸಿದೆ.

ಈ ಘಟನೆ ನಡೆದು ೫ ದಿನಗಳಾಗಿವೆ. ಕಾಕತಾಳೀಯವೋ ಅಥವಾ ಅಲ್ಲಿಯೇ ಚಿರತಗಳು ಬೀಡುಬಿಟ್ಟಿವೆಯೋ ಗೊತ್ತಿಲ್ಲ. ಶಿವಣ್ಣ ಅವರಿಗೆ ಸೇರಿದ ಕರು ಹಾಗೂ ಕುರಿಯನ್ನು ಕಳೆದ ವರ್ಷವೂ ಇದೇ ರೀತಿ ಚಿರತೆ ಬೇಟೆಯಾಡಿತ್ತು.
ಹರವೆ ಮತ್ತು ಮುಕ್ಕಡಹಳ್ಳಿ ಗ್ರಾಮಕ್ಕೆ ನೇರ ಸಂಪರ್ಕ ಕಲ್ಪಿಸುವ ಕಾಲು ದಾರಿಯಲ್ಲಿರುವ ಜಮೀನೊಂದರಲ್ಲಿ ಚಿರತೆ ದಾಳಿ ಮಾಡಿ ಕರುವನ್ನು ಕೊಂದಿರುವ ವಿಚಾರವನ್ನು ಪ್ರಗತಿಪರ ಕೃಷಿಕ ಮಧುಸೂದನ್ ಅವರು ಅರಣ್ಯ ಇಲಾಖೆಯ ಆರ್‌ಎಫ್‌ಒ ಗಮನಕ್ಕೆ ತರಲಾಗಿ ಆ ಕೂಡಲೇ ಬೋನನ್ನು ತಂದಿರಿಸಲಾಗಿದೆ. ಆದರೆ ಬೋನಿಗೆ ಚಿರತೆ ಬಿದ್ದಿಲ್ಲ. ಹೀಗಾಗಿ ಕೃಷಿಕರು, ದನಗಾಹಿಗಳು ಮತ್ತು ಕಾರ್ಮಿಕರು ಜೀವಭಯದಿಂದ ತಿರುಗಾಡುವಂತಾಗಿದೆ. ಹುಲಿ ಹಸುಗಳನ್ನು ಕೊಂದಿರುವ ಬಿಸಲವಾಡಿ ಗ್ರಾಮ ತಮಿಳುನಾಡಿನ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿದೆ. ಹತ್ತಿರದಲ್ಲೇ ಹೊನ್ನಹಳ್ಳಿ ಗುಡ್ಡವೂ ಇದೆ. ಇಲ್ಲಿ ಚಿರತೆಗಳ ಕಾಟವೂ ಜಾಸ್ತಿಯಾಗಿದೆ.. ಹೀಗಾಗಿ ಈ ಭಾಗದಲ್ಲಿ ಹಸು, ಮೇಕೆ, ಕುರಿ, ನಾಯಿಗಳು ಬಲಿಯಾಗುತ್ತಲೇ ಇವೆ. ಕಳೆದ 4 ತಿಂಗಳಲ್ಲಿ 8 ಸಾಕು ಪ್ರಾಣಿಗಳು ಬಲಿಯಾಗಿವೆ ಎಂದು ಚಾಮರಾಜನಗರ ಪ್ರಾದೇಶಿಕ ಅರಣ್ಯವಲಯದ(ಕೇಂದ್ರಸ್ಥಾನ) ಮೂಲಗಳು ತಿಳಿಸಿವೆ.


ಬೋನಿಗೆ ಚಿರತೆ ಬೀಳುವ ಸಾಧ್ಯತೆ ತುಂಬಾ ಕಡಿಮೆ. ಆದ್ದರಿಂದ ಅದನ್ನು ಹಿಡಿದು ಹೊರಗೆ ಸ್ಥಳಾಂತರಿಸಬೇಕು. ಚಿರತೆ ದಾಳಿಯಿಂದ ತಿ.ನರಸೀಪುರ ತಾಲ್ಲೂಕಿನಲ್ಲಿ ವ್ಯಕ್ತಿಯೊಬ್ಬರು ಇತ್ತೀಚೆಗಷ್ಟೇ ಮೃತಪಟ್ಟಿದ್ದು ಇದು ಎಲ್ಲರಿಗೂ ಎಚ್ಚರಿಕೆಯಾಗಿದೆ.

ಮುಕ್ಕಡಹಳ್ಳಿ ಮಧುಸೂದನ್, ಪ್ರಗತಿಪರ ರೈತ.

andolanait

Recent Posts

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

2 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

2 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

2 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

2 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

4 hours ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

5 hours ago