ಜಿಲ್ಲೆಗಳು

ಹರಕೆ ಹೊತ್ತು ಬಂದ ಅನ್ನದಾನಿಗೆ ಹನೂರಿನಲ್ಲಿ ಸ್ವಾಗತ

ಹನೂರು : ದೇಶ ವ್ಯಾಪ್ತಿಯಲ್ಲಿ ಹರಡಿದ್ದ ಕೊರೊನಾ ತಡೆಗಾಗಿ ಮಹದೇಶ್ವರಬೆಟ್ಟದ ಮಲೆ ಮಹದೇಶ್ವರರಲ್ಲಿ ಹರಕೆ ಮಾಡಿಕೊಂಡಿದ್ದೆ. ಇದೀಗ ಕೊರೊನಾ ಸೋಂಕು ಕಡಿಮೆ ಆಗಿರುವುದರಿಂದ ಹರಕೆ ತೀರಿಸಲು ಪಾದಯಾತ್ರೆ ಹೊರಟಿದ್ದೇವೆ ಎಂದು ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು.

ಮಳವಳ್ಳಿ ಪಟ್ಟಣದಿಂದ ಹೊರಾಟ ಪಾದಯಾತ್ರೆ ಹನೂರಿಗೆ ಬಂದಂತಹ ಸಂದರ್ಭದಲ್ಲಿ ಶಾಸಕ ಕೆ.ಅನ್ನದಾನಿ ಮಾಧ್ಯಮದವರೊಂದಿಗೆ ಮಾತನಾಡಿ, 2019 ರಲ್ಲಿ ಕೊರೊನಾ ಬಂದ ಸಂದರ್ಭದಲ್ಲಿ ಮಳವಳ್ಳಿ ತಾಲ್ಲೂಕಿನಲ್ಲಿ ಹಲವರು ಜನರು ಸೋಂಕಿನಿಂದ ಮೃತಪಟ್ಟರು. ಔಷಧಿ ಇಲ್ಲದ ಸಂದರ್ಭದಲ್ಲಿ ಜನರನ್ನು ನೀನೇ ಕಾಪಾಡಬೇಕು ಮಾದಪ್ಪ ಎಂದು ನಾನು ಮನೆ ಮಾದೇಶ್ವರರಲ್ಲಿ ಹರಕೆ ಮಾಡಿಕೊಂಡಿದ್ದೆ. ಅದರಂತೆ ಪಾದಯಾತ್ರೆ ಹೊರಟಿದ್ದೇವೆ ಎಂದರು.

ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಜಾ.ದಳ ಅಭ್ಯರ್ಥಿಯಾಗಿರುವ ಎಂ.ಆರ್. ಮಂಜುನಾಥ್ ನನ್ನ ಆತ್ಮೀಯ ಸ್ನೇಹಿತರು. ಇವರು ಶಾಸಕರಾಗಿ ಆಯ್ಕೆಯಾಗಲಿ ಎಂದು ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿ ಎಂದು ಹರಕೆ ಕಟ್ಟಿಕೊಳ್ಳುತ್ತೇನೆ ಎಂದು ತಿಳಿಸಿದರು. ಪಾದಯಾತ್ರೆಗೆ ಬಂದ ಅನ್ನದಾನಿ ಅವರಿಗೆ ಹನೂರು ಜಾ.ದಳ ಅಭ್ಯರ್ಥಿ ಎಂ.ಆರ್. ಮಂಜುನಾಥ್ ಅವರು ಸನ್ಮಾನಿಸಿದರು.  ಸುಮಾರು 1ಕಿ.ಮೀ. ದೂರ ಅವರೊಂದಿಗೆ ಪಾದಯಾತ್ರೆ ನಡೆಸಿ ಬೀಳ್ಕೊಟ್ಟರು.

ಮಳವಳ್ಳಿ ತಾಲ್ಲೂಕು ಜಾ.ದಳ ಅಧ್ಯಕ್ಷ ವಿಶ್ವನಾಥ್, ಜಿಪಂ ಮಾಜಿ ಸದಸ್ಯ ಹನುಮಂತು, ಜಿಲ್ಲಾ ಯುವ ಜಾ.ದಳದ ಅಧ್ಯಕ್ಷ ರವಿ, ಜಾ.ದಳ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲೇಗೌಡ, ಪಪಂ ಸದಸ್ಯ ಮಹೇಶ್, ಕಾರ್ಯಕರ್ತರು ಹಾಜರಿದ್ದರು.

andolanait

Recent Posts

ಅವಕಾಶ ವಂಚಿತ ಚೆನ್ನೈ ಮಕ್ಕಳಿಗೆ ಪ್ರವಾಸ ಭಾಗ್ಯ

ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ಪ್ರತಿಯೊಂದು ಮಗುವಿಗೂ ಎಲ್ಲಾ ರೀತಿಯ ಅನುಭವ ಬೇಕು. ಆದರೆ ಎಲ್ಲ ಮಕ್ಕಳಿಗೂ ಅಂತಹ ಅವಕಾಶ ಒದಗಿ…

19 seconds ago

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

10 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

10 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

11 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

11 hours ago