ಹನೂರು : ದೇಶ ವ್ಯಾಪ್ತಿಯಲ್ಲಿ ಹರಡಿದ್ದ ಕೊರೊನಾ ತಡೆಗಾಗಿ ಮಹದೇಶ್ವರಬೆಟ್ಟದ ಮಲೆ ಮಹದೇಶ್ವರರಲ್ಲಿ ಹರಕೆ ಮಾಡಿಕೊಂಡಿದ್ದೆ. ಇದೀಗ ಕೊರೊನಾ ಸೋಂಕು ಕಡಿಮೆ ಆಗಿರುವುದರಿಂದ ಹರಕೆ ತೀರಿಸಲು ಪಾದಯಾತ್ರೆ ಹೊರಟಿದ್ದೇವೆ ಎಂದು ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು.
ಮಳವಳ್ಳಿ ಪಟ್ಟಣದಿಂದ ಹೊರಾಟ ಪಾದಯಾತ್ರೆ ಹನೂರಿಗೆ ಬಂದಂತಹ ಸಂದರ್ಭದಲ್ಲಿ ಶಾಸಕ ಕೆ.ಅನ್ನದಾನಿ ಮಾಧ್ಯಮದವರೊಂದಿಗೆ ಮಾತನಾಡಿ, 2019 ರಲ್ಲಿ ಕೊರೊನಾ ಬಂದ ಸಂದರ್ಭದಲ್ಲಿ ಮಳವಳ್ಳಿ ತಾಲ್ಲೂಕಿನಲ್ಲಿ ಹಲವರು ಜನರು ಸೋಂಕಿನಿಂದ ಮೃತಪಟ್ಟರು. ಔಷಧಿ ಇಲ್ಲದ ಸಂದರ್ಭದಲ್ಲಿ ಜನರನ್ನು ನೀನೇ ಕಾಪಾಡಬೇಕು ಮಾದಪ್ಪ ಎಂದು ನಾನು ಮನೆ ಮಾದೇಶ್ವರರಲ್ಲಿ ಹರಕೆ ಮಾಡಿಕೊಂಡಿದ್ದೆ. ಅದರಂತೆ ಪಾದಯಾತ್ರೆ ಹೊರಟಿದ್ದೇವೆ ಎಂದರು.
ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಜಾ.ದಳ ಅಭ್ಯರ್ಥಿಯಾಗಿರುವ ಎಂ.ಆರ್. ಮಂಜುನಾಥ್ ನನ್ನ ಆತ್ಮೀಯ ಸ್ನೇಹಿತರು. ಇವರು ಶಾಸಕರಾಗಿ ಆಯ್ಕೆಯಾಗಲಿ ಎಂದು ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿ ಎಂದು ಹರಕೆ ಕಟ್ಟಿಕೊಳ್ಳುತ್ತೇನೆ ಎಂದು ತಿಳಿಸಿದರು. ಪಾದಯಾತ್ರೆಗೆ ಬಂದ ಅನ್ನದಾನಿ ಅವರಿಗೆ ಹನೂರು ಜಾ.ದಳ ಅಭ್ಯರ್ಥಿ ಎಂ.ಆರ್. ಮಂಜುನಾಥ್ ಅವರು ಸನ್ಮಾನಿಸಿದರು. ಸುಮಾರು 1ಕಿ.ಮೀ. ದೂರ ಅವರೊಂದಿಗೆ ಪಾದಯಾತ್ರೆ ನಡೆಸಿ ಬೀಳ್ಕೊಟ್ಟರು.
ಮಳವಳ್ಳಿ ತಾಲ್ಲೂಕು ಜಾ.ದಳ ಅಧ್ಯಕ್ಷ ವಿಶ್ವನಾಥ್, ಜಿಪಂ ಮಾಜಿ ಸದಸ್ಯ ಹನುಮಂತು, ಜಿಲ್ಲಾ ಯುವ ಜಾ.ದಳದ ಅಧ್ಯಕ್ಷ ರವಿ, ಜಾ.ದಳ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲೇಗೌಡ, ಪಪಂ ಸದಸ್ಯ ಮಹೇಶ್, ಕಾರ್ಯಕರ್ತರು ಹಾಜರಿದ್ದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…