ಹನೂರು : ದೇಶ ವ್ಯಾಪ್ತಿಯಲ್ಲಿ ಹರಡಿದ್ದ ಕೊರೊನಾ ತಡೆಗಾಗಿ ಮಹದೇಶ್ವರಬೆಟ್ಟದ ಮಲೆ ಮಹದೇಶ್ವರರಲ್ಲಿ ಹರಕೆ ಮಾಡಿಕೊಂಡಿದ್ದೆ. ಇದೀಗ ಕೊರೊನಾ ಸೋಂಕು ಕಡಿಮೆ ಆಗಿರುವುದರಿಂದ ಹರಕೆ ತೀರಿಸಲು ಪಾದಯಾತ್ರೆ ಹೊರಟಿದ್ದೇವೆ ಎಂದು ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು.
ಮಳವಳ್ಳಿ ಪಟ್ಟಣದಿಂದ ಹೊರಾಟ ಪಾದಯಾತ್ರೆ ಹನೂರಿಗೆ ಬಂದಂತಹ ಸಂದರ್ಭದಲ್ಲಿ ಶಾಸಕ ಕೆ.ಅನ್ನದಾನಿ ಮಾಧ್ಯಮದವರೊಂದಿಗೆ ಮಾತನಾಡಿ, 2019 ರಲ್ಲಿ ಕೊರೊನಾ ಬಂದ ಸಂದರ್ಭದಲ್ಲಿ ಮಳವಳ್ಳಿ ತಾಲ್ಲೂಕಿನಲ್ಲಿ ಹಲವರು ಜನರು ಸೋಂಕಿನಿಂದ ಮೃತಪಟ್ಟರು. ಔಷಧಿ ಇಲ್ಲದ ಸಂದರ್ಭದಲ್ಲಿ ಜನರನ್ನು ನೀನೇ ಕಾಪಾಡಬೇಕು ಮಾದಪ್ಪ ಎಂದು ನಾನು ಮನೆ ಮಾದೇಶ್ವರರಲ್ಲಿ ಹರಕೆ ಮಾಡಿಕೊಂಡಿದ್ದೆ. ಅದರಂತೆ ಪಾದಯಾತ್ರೆ ಹೊರಟಿದ್ದೇವೆ ಎಂದರು.
ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಜಾ.ದಳ ಅಭ್ಯರ್ಥಿಯಾಗಿರುವ ಎಂ.ಆರ್. ಮಂಜುನಾಥ್ ನನ್ನ ಆತ್ಮೀಯ ಸ್ನೇಹಿತರು. ಇವರು ಶಾಸಕರಾಗಿ ಆಯ್ಕೆಯಾಗಲಿ ಎಂದು ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿ ಎಂದು ಹರಕೆ ಕಟ್ಟಿಕೊಳ್ಳುತ್ತೇನೆ ಎಂದು ತಿಳಿಸಿದರು. ಪಾದಯಾತ್ರೆಗೆ ಬಂದ ಅನ್ನದಾನಿ ಅವರಿಗೆ ಹನೂರು ಜಾ.ದಳ ಅಭ್ಯರ್ಥಿ ಎಂ.ಆರ್. ಮಂಜುನಾಥ್ ಅವರು ಸನ್ಮಾನಿಸಿದರು. ಸುಮಾರು 1ಕಿ.ಮೀ. ದೂರ ಅವರೊಂದಿಗೆ ಪಾದಯಾತ್ರೆ ನಡೆಸಿ ಬೀಳ್ಕೊಟ್ಟರು.
ಮಳವಳ್ಳಿ ತಾಲ್ಲೂಕು ಜಾ.ದಳ ಅಧ್ಯಕ್ಷ ವಿಶ್ವನಾಥ್, ಜಿಪಂ ಮಾಜಿ ಸದಸ್ಯ ಹನುಮಂತು, ಜಿಲ್ಲಾ ಯುವ ಜಾ.ದಳದ ಅಧ್ಯಕ್ಷ ರವಿ, ಜಾ.ದಳ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲೇಗೌಡ, ಪಪಂ ಸದಸ್ಯ ಮಹೇಶ್, ಕಾರ್ಯಕರ್ತರು ಹಾಜರಿದ್ದರು.
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…
ಪಂಜುಗಂಗೊಳ್ಳಿ ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…