ಜಿಲ್ಲೆಗಳು

ತಿ.ನರಸೀಪುರದಲ್ಲಿ ಚಿರತೆ ದಾಳಿಗೆ ಮತ್ತೊಬ್ಬ ವಿದ್ಯಾರ್ಥಿನಿ ಬಲಿ

ಮೈಸೂರು: ಜಿಲ್ಲೆಯಲ್ಲಿ ಚಿರತೆಗಳ ಉಪಟಳ ಮುಂದುವರಿದಿದ್ದು ತಿ.ನರಸೀಪುರ ತಾಲ್ಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ಚಿರತೆ ದಾಳಿಗೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ.  

20 ವರ್ಷದ ಮೇಘನ ಚಿರತೆ ದಾಳಿಗೊಳಗಾದ ಯುವತಿ. ತಿ. ನರಸೀಪುರ ಸರಕಾರಿ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಮೇಘನಾ ಇಳಿಸಂಜೆಯ ವೇಳೆಗೆ ಮನೆ ಹಿಂಬದಿ ಇದ್ದ ಶೌಚಾಲಯಕ್ಕೆ ಹೋದಾಗ ಚಿರತೆ ದಾಳಿ ಮಾಡಿದೆ.

 

ಮೇಘನಾಳ ಮೇಲೆ ಹಠಾತ್‌ ದಾಳಿ ನಡೆಸಿದ ಚಿರತೆ ಮುಖ ಮತ್ತು ಕುತ್ತಿಗೆ ಭಾಗಕ್ಕೆ ಕಚ್ಚಿದೆ. ಆಕೆ ಚೀರಿಕೊಂಡಾಗ ಮನೆಯವರು ರಕ್ಷಣೆಗೆ ಧಾವಿಸಿದ್ದು. ಕೂಗಾಟ ಕೇಳಿ ಚಿರತೆ ಪರಾರಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಮೇಘನಾಳನ್ನು ಪಟ್ಟಣದ ಸರಕಾರಿ ಆಸ್ಪತ್ರೆಗೆ ತರುವಷ್ಟರಲ್ಲಿ ತೀವ್ರ ರಕ್ತಸ್ರಾವದಿಂದ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಗ್ರಾಮಸ್ಥರ ಧರಣಿ

ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿ ಮೀರಿದ್ದು ಈ ಬಗ್ಗೆ ಜನರು ಪ್ರತಿಭಟನೆಗಿಳಿದಿರುವಾಗಲೇ ಈ ಘಟನೆ ಸಂಭವಿಸಿದೆ. ಮೇಘನಾಳ ಶವವನ್ನು ಪಟ್ಟಣದ ಸರಕಾರಿ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದ್ದು ಉಸ್ತುವಾರಿ ಸಚಿವರು ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಭೇಟಿಗೆ ಆಗ್ರಹಿಸಿ ಗ್ರಾಮಸ್ಥರು ಧರಣಿ ಕುಳಿತಿದ್ದಾರೆ. ಸಂತ್ರಸ್ತರ ಜತೆ ಶಾಸಕ ಟಿ. ಅಶ್ವಿನ್‌ ಕುಮಾರ್‌ ಕೂಡ ಧರಣಿ ಕುಳಿತಿದ್ದಾರೆ.

ಎರಡನೇ ಬಲಿ

ಅಕ್ಟೋಬರ್‌ 31ರಂದು ತಾಲ್ಲೂಕಿನ ಮದ್ಗಾರ್ ಲಿಂಗಯ್ಯನ ಹುಂಡಿ ಗ್ರಾಮದಲ್ಲಿ ಮೈಸೂರಿನ ಮಹಾರಾಜ ಕಾಲೇಜಿನ ಬಿಕಾಂ ವಿದ್ಯಾರ್ಥಿ ಚಿರತೆ ದಾಳಿಗೆ ಬಲಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಸ್ನೇಹಿತರ ಜತೆ ಕಾರ್ತಿಕ ಜಾತ್ರೆಗೆಂದು ಹೊರಟ ಮಂಜುನಾಥ್‌ (19) ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿತ್ತು. ಈ ಘಟನೆಯ ಬಳಿಕ ಅರಣ್ಯ ಇಲಾಖೆ ಚಿರತೆ ಹಾವಳಿ ಹೆಚ್ಚಿರುವ ಗ್ರಾಮಗಳಲ್ಲಿ ಬೋನು ಇರಿಸಿ ಚಿರತೆಗಳನ್ನು ಸೆರೆ ಹಿಡಿಯುವ ಪ್ರಯತ್ನ ನಡೆಸಿತ್ತು. ಆದರೆ ಚಿರತೆಗಳು ಮತ್ತೆ ಮತ್ತೆ ಕಾಣಿಸಿಕೊಂಡರೂ ಬಲೆಗೆ ಬಿದ್ದಿರಲಿಲ್ಲ.

20ಕ್ಕೂ ಹೆಚ್ಚು ಚಿರತೆ ಸೆರೆ

ಮೈಸೂರು ಭಾಗದಲ್ಲಿ ಕಳೆದ ಆರು ತಿಂಗಳಲ್ಲಿ 20 ಕ್ಕೂ ಹೆಚ್ಚು ಚಿರತೆಗಳು ಸೆರೆಯಾಗಿರುವುದು ಚಿರತೆಗಳ ಹಾವಳಿ ಹೆಚ್ಚಳಕ್ಕೆ ಸಾಕ್ಷಿಯಾಗಿದೆ.

andolana

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago