ಜಿಲ್ಲೆಗಳು

ತಿ.ನರಸೀಪುರದಲ್ಲಿ ಚಿರತೆ ದಾಳಿಗೆ ಮತ್ತೊಬ್ಬ ವಿದ್ಯಾರ್ಥಿನಿ ಬಲಿ

ಮೈಸೂರು: ಜಿಲ್ಲೆಯಲ್ಲಿ ಚಿರತೆಗಳ ಉಪಟಳ ಮುಂದುವರಿದಿದ್ದು ತಿ.ನರಸೀಪುರ ತಾಲ್ಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ಚಿರತೆ ದಾಳಿಗೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ.  

20 ವರ್ಷದ ಮೇಘನ ಚಿರತೆ ದಾಳಿಗೊಳಗಾದ ಯುವತಿ. ತಿ. ನರಸೀಪುರ ಸರಕಾರಿ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಮೇಘನಾ ಇಳಿಸಂಜೆಯ ವೇಳೆಗೆ ಮನೆ ಹಿಂಬದಿ ಇದ್ದ ಶೌಚಾಲಯಕ್ಕೆ ಹೋದಾಗ ಚಿರತೆ ದಾಳಿ ಮಾಡಿದೆ.

 

ಮೇಘನಾಳ ಮೇಲೆ ಹಠಾತ್‌ ದಾಳಿ ನಡೆಸಿದ ಚಿರತೆ ಮುಖ ಮತ್ತು ಕುತ್ತಿಗೆ ಭಾಗಕ್ಕೆ ಕಚ್ಚಿದೆ. ಆಕೆ ಚೀರಿಕೊಂಡಾಗ ಮನೆಯವರು ರಕ್ಷಣೆಗೆ ಧಾವಿಸಿದ್ದು. ಕೂಗಾಟ ಕೇಳಿ ಚಿರತೆ ಪರಾರಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಮೇಘನಾಳನ್ನು ಪಟ್ಟಣದ ಸರಕಾರಿ ಆಸ್ಪತ್ರೆಗೆ ತರುವಷ್ಟರಲ್ಲಿ ತೀವ್ರ ರಕ್ತಸ್ರಾವದಿಂದ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಗ್ರಾಮಸ್ಥರ ಧರಣಿ

ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿ ಮೀರಿದ್ದು ಈ ಬಗ್ಗೆ ಜನರು ಪ್ರತಿಭಟನೆಗಿಳಿದಿರುವಾಗಲೇ ಈ ಘಟನೆ ಸಂಭವಿಸಿದೆ. ಮೇಘನಾಳ ಶವವನ್ನು ಪಟ್ಟಣದ ಸರಕಾರಿ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದ್ದು ಉಸ್ತುವಾರಿ ಸಚಿವರು ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಭೇಟಿಗೆ ಆಗ್ರಹಿಸಿ ಗ್ರಾಮಸ್ಥರು ಧರಣಿ ಕುಳಿತಿದ್ದಾರೆ. ಸಂತ್ರಸ್ತರ ಜತೆ ಶಾಸಕ ಟಿ. ಅಶ್ವಿನ್‌ ಕುಮಾರ್‌ ಕೂಡ ಧರಣಿ ಕುಳಿತಿದ್ದಾರೆ.

ಎರಡನೇ ಬಲಿ

ಅಕ್ಟೋಬರ್‌ 31ರಂದು ತಾಲ್ಲೂಕಿನ ಮದ್ಗಾರ್ ಲಿಂಗಯ್ಯನ ಹುಂಡಿ ಗ್ರಾಮದಲ್ಲಿ ಮೈಸೂರಿನ ಮಹಾರಾಜ ಕಾಲೇಜಿನ ಬಿಕಾಂ ವಿದ್ಯಾರ್ಥಿ ಚಿರತೆ ದಾಳಿಗೆ ಬಲಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಸ್ನೇಹಿತರ ಜತೆ ಕಾರ್ತಿಕ ಜಾತ್ರೆಗೆಂದು ಹೊರಟ ಮಂಜುನಾಥ್‌ (19) ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿತ್ತು. ಈ ಘಟನೆಯ ಬಳಿಕ ಅರಣ್ಯ ಇಲಾಖೆ ಚಿರತೆ ಹಾವಳಿ ಹೆಚ್ಚಿರುವ ಗ್ರಾಮಗಳಲ್ಲಿ ಬೋನು ಇರಿಸಿ ಚಿರತೆಗಳನ್ನು ಸೆರೆ ಹಿಡಿಯುವ ಪ್ರಯತ್ನ ನಡೆಸಿತ್ತು. ಆದರೆ ಚಿರತೆಗಳು ಮತ್ತೆ ಮತ್ತೆ ಕಾಣಿಸಿಕೊಂಡರೂ ಬಲೆಗೆ ಬಿದ್ದಿರಲಿಲ್ಲ.

20ಕ್ಕೂ ಹೆಚ್ಚು ಚಿರತೆ ಸೆರೆ

ಮೈಸೂರು ಭಾಗದಲ್ಲಿ ಕಳೆದ ಆರು ತಿಂಗಳಲ್ಲಿ 20 ಕ್ಕೂ ಹೆಚ್ಚು ಚಿರತೆಗಳು ಸೆರೆಯಾಗಿರುವುದು ಚಿರತೆಗಳ ಹಾವಳಿ ಹೆಚ್ಚಳಕ್ಕೆ ಸಾಕ್ಷಿಯಾಗಿದೆ.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

6 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

8 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

22 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago