ಮೈಸೂರು: ಜಿಲ್ಲೆಯಲ್ಲಿ ಚಿರತೆಗಳ ಉಪಟಳ ಮುಂದುವರಿದಿದ್ದು ತಿ.ನರಸೀಪುರ ತಾಲ್ಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ಚಿರತೆ ದಾಳಿಗೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ.
20 ವರ್ಷದ ಮೇಘನ ಚಿರತೆ ದಾಳಿಗೊಳಗಾದ ಯುವತಿ. ತಿ. ನರಸೀಪುರ ಸರಕಾರಿ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಮೇಘನಾ ಇಳಿಸಂಜೆಯ ವೇಳೆಗೆ ಮನೆ ಹಿಂಬದಿ ಇದ್ದ ಶೌಚಾಲಯಕ್ಕೆ ಹೋದಾಗ ಚಿರತೆ ದಾಳಿ ಮಾಡಿದೆ.
ಮೇಘನಾಳ ಮೇಲೆ ಹಠಾತ್ ದಾಳಿ ನಡೆಸಿದ ಚಿರತೆ ಮುಖ ಮತ್ತು ಕುತ್ತಿಗೆ ಭಾಗಕ್ಕೆ ಕಚ್ಚಿದೆ. ಆಕೆ ಚೀರಿಕೊಂಡಾಗ ಮನೆಯವರು ರಕ್ಷಣೆಗೆ ಧಾವಿಸಿದ್ದು. ಕೂಗಾಟ ಕೇಳಿ ಚಿರತೆ ಪರಾರಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಮೇಘನಾಳನ್ನು ಪಟ್ಟಣದ ಸರಕಾರಿ ಆಸ್ಪತ್ರೆಗೆ ತರುವಷ್ಟರಲ್ಲಿ ತೀವ್ರ ರಕ್ತಸ್ರಾವದಿಂದ ಪ್ರಾಣಪಕ್ಷಿ ಹಾರಿ ಹೋಗಿತ್ತು.
ಗ್ರಾಮಸ್ಥರ ಧರಣಿ
ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿ ಮೀರಿದ್ದು ಈ ಬಗ್ಗೆ ಜನರು ಪ್ರತಿಭಟನೆಗಿಳಿದಿರುವಾಗಲೇ ಈ ಘಟನೆ ಸಂಭವಿಸಿದೆ. ಮೇಘನಾಳ ಶವವನ್ನು ಪಟ್ಟಣದ ಸರಕಾರಿ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದ್ದು ಉಸ್ತುವಾರಿ ಸಚಿವರು ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಭೇಟಿಗೆ ಆಗ್ರಹಿಸಿ ಗ್ರಾಮಸ್ಥರು ಧರಣಿ ಕುಳಿತಿದ್ದಾರೆ. ಸಂತ್ರಸ್ತರ ಜತೆ ಶಾಸಕ ಟಿ. ಅಶ್ವಿನ್ ಕುಮಾರ್ ಕೂಡ ಧರಣಿ ಕುಳಿತಿದ್ದಾರೆ.
ಎರಡನೇ ಬಲಿ
ಅಕ್ಟೋಬರ್ 31ರಂದು ತಾಲ್ಲೂಕಿನ ಮದ್ಗಾರ್ ಲಿಂಗಯ್ಯನ ಹುಂಡಿ ಗ್ರಾಮದಲ್ಲಿ ಮೈಸೂರಿನ ಮಹಾರಾಜ ಕಾಲೇಜಿನ ಬಿಕಾಂ ವಿದ್ಯಾರ್ಥಿ ಚಿರತೆ ದಾಳಿಗೆ ಬಲಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಸ್ನೇಹಿತರ ಜತೆ ಕಾರ್ತಿಕ ಜಾತ್ರೆಗೆಂದು ಹೊರಟ ಮಂಜುನಾಥ್ (19) ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿತ್ತು. ಈ ಘಟನೆಯ ಬಳಿಕ ಅರಣ್ಯ ಇಲಾಖೆ ಚಿರತೆ ಹಾವಳಿ ಹೆಚ್ಚಿರುವ ಗ್ರಾಮಗಳಲ್ಲಿ ಬೋನು ಇರಿಸಿ ಚಿರತೆಗಳನ್ನು ಸೆರೆ ಹಿಡಿಯುವ ಪ್ರಯತ್ನ ನಡೆಸಿತ್ತು. ಆದರೆ ಚಿರತೆಗಳು ಮತ್ತೆ ಮತ್ತೆ ಕಾಣಿಸಿಕೊಂಡರೂ ಬಲೆಗೆ ಬಿದ್ದಿರಲಿಲ್ಲ.
20ಕ್ಕೂ ಹೆಚ್ಚು ಚಿರತೆ ಸೆರೆ
ಮೈಸೂರು ಭಾಗದಲ್ಲಿ ಕಳೆದ ಆರು ತಿಂಗಳಲ್ಲಿ 20 ಕ್ಕೂ ಹೆಚ್ಚು ಚಿರತೆಗಳು ಸೆರೆಯಾಗಿರುವುದು ಚಿರತೆಗಳ ಹಾವಳಿ ಹೆಚ್ಚಳಕ್ಕೆ ಸಾಕ್ಷಿಯಾಗಿದೆ.
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…