ಜಿಲ್ಲೆಗಳು

ಕುಕ್ಕರಹಳ್ಳಿ ಕೆರೆ ಪರಿಶೀಲನೆಗೆ ಮತ್ತೊಂದು ಇಂಜಿನಿಯರ್ ತಂಡ

ಮೈಸೂರು: ಕುಕ್ಕರಹಳ್ಳಿ ಕೆರೆ ಏರಿಯಲ್ಲಿನ ನೀರು ಸೋರಿಕೆಯಿಂದ ಯಾವುದೇ ಅಪಾಯವಿಲ್ಲ. ಆದರೆ, ಕೆರೆಯ ಸಂರಕ್ಷಣೆ ಮತ್ತು ನಿರ್ವಹಣೆಗಾಗಿ ವ್ಯವಸ್ಥಿತವಾಗಿ ರಾಕ್‌ಟೋಗಳನ್ನು ಮತ್ತು ಹೆಡ್ ರೆಗ್ಯುಲೇಟರ್ ಅಳವಡಿಸಬೇಕು ಎಂಬ ಎರಡು ಪ್ರಮುಖ ಅಂಶಗಳನ್ನು ಕಾವೇರಿ ನೀರಾವರಿ ನಿಗಮದ ಡಿಸೈನ್ ವಿಂಗ್ ತಂಡ ಇಂಜಿನಿಯರ್‌ಗಳು ತಿಳಿಸಿದ್ದಾರೆ.

ನಿಗಮದ ಡಿಸೈನ್ ವಿಂಗ್‌ನ ತಾಂತ್ರಿಕ ಸಲಹೆಗಾರ ಎಚ್.ಕೆ.ಸಂಪತ್ ಕುಮಾರ್ ನೇತೃತ್ವದ ತಂಡ ಸೋಮವಾರ ಕುಕ್ಕರಹಳ್ಳಿ ಕೆರೆಯನ್ನು ಸುತ್ತು ಹಾಕಿ ಪರಿಶೀಲನೆ ನಡೆಸಿದೆ. ಶನಿವಾರವಷ್ಟೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರದ ಇಂಜಿನಿಯರ್‌ಗಳ ತಂಡ ಪರಿಶೀಲನೆ ನಡೆಸಿ, ಮಣ್ಣಿನ ಪರೀಕ್ಷೆ ಮಾಡಿ ವರದಿ ನೀಡುವುದಾಗಿ ಹೇಳಿದ್ದು, ಕಾವೇರಿ ನೀರಾವರಿ ನಿಗಮದ ಇಂಜಿನಿಯರ್‌ಗಳ ತಂಡ ನೀರು ಜಿನುಗುವ ಜಾಗದಲ್ಲಿ ಮತ್ತು ಬಂಡ್‌ಗಳಲ್ಲಿ ರಾಕ್‌ಟೋಗಳನ್ನು ಮಾಡುವಂತೆ ತಿಳಿಸಿದೆ.

ರಾಕ್‌ಟೋ ಎಂದರೇನು?: ಕೆರೆಯ ಏರಿಯಲ್ಲಿ ಎಲ್ಲಿ ನೀರು ಜಿನುಗುತ್ತದೆ. ಎಲ್ಲ ಬಂಡ್‌ಗಳಲ್ಲಿ ರಾಕ್‌ಟೋಗಳನ್ನು ನಿರ್ಮಿಸಲು ತಂಡ ಸಲಹೆ ನೀಡಿದೆ. ಜಿನುಗುವ ನೀರು ಬಸಿದು ಹೋಗಲು ಅನುಕೂಲವಾಗುವಂತೆ ಮಾಡುವ ಕಲ್ಲಿನ ಕಟ್ಟಡವೇ ರಾಕ್‌ಟೋ. ಇದನ್ನು ಕಲ್ಲಿನಲ್ಲಿಯೇ ಮಾಡಬೇಕು. ಕಾಂಕ್ರೀಟ್ ಬಳಸುವಂತಿಲ್ಲ.

ಹೆಡ್ ರೆಗ್ಯುಲೇಟರ್ ಅಳವಡಿಕೆ : ಮಳೆಯು ಬಂದಾಗ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಗೆ ಹೋಗುವಂತೆ ಮಾಡಲು ಈಗಿರುವ ಕೊಂಟ(ಸ್ಲೂಸೈ ಗೇಟ್) ನ ಬದಲಾಗಿ ಹೆಡ್ ರೆಗ್ಯುಲೇಟರ್ ಅನ್ನು ಅಳವಡಿಸಿದರೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರ ಹೋಗಲು ಅನುಕೂಲವಾಗುತ್ತದೆ. ಆದರೆ, ಹೀಗೆ ನೀರನ್ನು ಹೊರ ಬಿಟ್ಟಾಗ, ನೀರಿನಿಂದ ದೋಬಿ ಘಾಟ್‌ಗೆ ಯಾವುದೇ ತೊಂದರೆಯಾಗದಂತೆ ನಗರ ಪಾಲಿಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ರಾಕ್‌ಟೋ ಮತ್ತು ಹೆಡ್ ರೆಗ್ಯುಲೇಟರ್ ಅನ್ನು ಹೇಗೆ ಮಾಡಬೇಕು ಎಂಬ ಕುರಿತು ವಾರದೊಳಗೆ ವರದಿ ನೀಡುವುದಾಗಿ ತಿಳಿಸಿದೆ.

ಕಾವೇರಿ ನೀರಾವರಿ ನಿಗಮದ ಡಿಸೈನ್ ವಿಂಗ್‌ನ ಎಇಇಗಳಾದ ಎಂ.ಎನ್.ಚಂದ್ರೆಶೇಖರ್, ಗೋವರ್ಧನ್, ಸೋಮಶೇಖರ್, ಮೈಸೂರು ವಿವಿಯ ಇಂಜಿನಿಯರ್‌ಗಳಾದ ಇಇ ಪ್ರತಾಪ್, ಎಇಇ ಶಿವಲಿಂಗಪ್ರಸಾದ್ ಇದ್ದರು.

 

 

 

 

 

 

 

 

 

 

 

andolana

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

1 hour ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

3 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

3 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

3 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

3 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

3 hours ago