ಮೈಸೂರು: ಕುಕ್ಕರಹಳ್ಳಿ ಕೆರೆ ಏರಿಯಲ್ಲಿನ ನೀರು ಸೋರಿಕೆಯಿಂದ ಯಾವುದೇ ಅಪಾಯವಿಲ್ಲ. ಆದರೆ, ಕೆರೆಯ ಸಂರಕ್ಷಣೆ ಮತ್ತು ನಿರ್ವಹಣೆಗಾಗಿ ವ್ಯವಸ್ಥಿತವಾಗಿ ರಾಕ್ಟೋಗಳನ್ನು ಮತ್ತು ಹೆಡ್ ರೆಗ್ಯುಲೇಟರ್ ಅಳವಡಿಸಬೇಕು ಎಂಬ ಎರಡು ಪ್ರಮುಖ ಅಂಶಗಳನ್ನು ಕಾವೇರಿ ನೀರಾವರಿ ನಿಗಮದ ಡಿಸೈನ್ ವಿಂಗ್ ತಂಡ ಇಂಜಿನಿಯರ್ಗಳು ತಿಳಿಸಿದ್ದಾರೆ.
ನಿಗಮದ ಡಿಸೈನ್ ವಿಂಗ್ನ ತಾಂತ್ರಿಕ ಸಲಹೆಗಾರ ಎಚ್.ಕೆ.ಸಂಪತ್ ಕುಮಾರ್ ನೇತೃತ್ವದ ತಂಡ ಸೋಮವಾರ ಕುಕ್ಕರಹಳ್ಳಿ ಕೆರೆಯನ್ನು ಸುತ್ತು ಹಾಕಿ ಪರಿಶೀಲನೆ ನಡೆಸಿದೆ. ಶನಿವಾರವಷ್ಟೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರದ ಇಂಜಿನಿಯರ್ಗಳ ತಂಡ ಪರಿಶೀಲನೆ ನಡೆಸಿ, ಮಣ್ಣಿನ ಪರೀಕ್ಷೆ ಮಾಡಿ ವರದಿ ನೀಡುವುದಾಗಿ ಹೇಳಿದ್ದು, ಕಾವೇರಿ ನೀರಾವರಿ ನಿಗಮದ ಇಂಜಿನಿಯರ್ಗಳ ತಂಡ ನೀರು ಜಿನುಗುವ ಜಾಗದಲ್ಲಿ ಮತ್ತು ಬಂಡ್ಗಳಲ್ಲಿ ರಾಕ್ಟೋಗಳನ್ನು ಮಾಡುವಂತೆ ತಿಳಿಸಿದೆ.
ರಾಕ್ಟೋ ಎಂದರೇನು?: ಕೆರೆಯ ಏರಿಯಲ್ಲಿ ಎಲ್ಲಿ ನೀರು ಜಿನುಗುತ್ತದೆ. ಎಲ್ಲ ಬಂಡ್ಗಳಲ್ಲಿ ರಾಕ್ಟೋಗಳನ್ನು ನಿರ್ಮಿಸಲು ತಂಡ ಸಲಹೆ ನೀಡಿದೆ. ಜಿನುಗುವ ನೀರು ಬಸಿದು ಹೋಗಲು ಅನುಕೂಲವಾಗುವಂತೆ ಮಾಡುವ ಕಲ್ಲಿನ ಕಟ್ಟಡವೇ ರಾಕ್ಟೋ. ಇದನ್ನು ಕಲ್ಲಿನಲ್ಲಿಯೇ ಮಾಡಬೇಕು. ಕಾಂಕ್ರೀಟ್ ಬಳಸುವಂತಿಲ್ಲ.
ಹೆಡ್ ರೆಗ್ಯುಲೇಟರ್ ಅಳವಡಿಕೆ : ಮಳೆಯು ಬಂದಾಗ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಗೆ ಹೋಗುವಂತೆ ಮಾಡಲು ಈಗಿರುವ ಕೊಂಟ(ಸ್ಲೂಸೈ ಗೇಟ್) ನ ಬದಲಾಗಿ ಹೆಡ್ ರೆಗ್ಯುಲೇಟರ್ ಅನ್ನು ಅಳವಡಿಸಿದರೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರ ಹೋಗಲು ಅನುಕೂಲವಾಗುತ್ತದೆ. ಆದರೆ, ಹೀಗೆ ನೀರನ್ನು ಹೊರ ಬಿಟ್ಟಾಗ, ನೀರಿನಿಂದ ದೋಬಿ ಘಾಟ್ಗೆ ಯಾವುದೇ ತೊಂದರೆಯಾಗದಂತೆ ನಗರ ಪಾಲಿಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ರಾಕ್ಟೋ ಮತ್ತು ಹೆಡ್ ರೆಗ್ಯುಲೇಟರ್ ಅನ್ನು ಹೇಗೆ ಮಾಡಬೇಕು ಎಂಬ ಕುರಿತು ವಾರದೊಳಗೆ ವರದಿ ನೀಡುವುದಾಗಿ ತಿಳಿಸಿದೆ.
ಕಾವೇರಿ ನೀರಾವರಿ ನಿಗಮದ ಡಿಸೈನ್ ವಿಂಗ್ನ ಎಇಇಗಳಾದ ಎಂ.ಎನ್.ಚಂದ್ರೆಶೇಖರ್, ಗೋವರ್ಧನ್, ಸೋಮಶೇಖರ್, ಮೈಸೂರು ವಿವಿಯ ಇಂಜಿನಿಯರ್ಗಳಾದ ಇಇ ಪ್ರತಾಪ್, ಎಇಇ ಶಿವಲಿಂಗಪ್ರಸಾದ್ ಇದ್ದರು.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…