ಜಿಲ್ಲೆಗಳು

ಕುಕ್ಕರಹಳ್ಳಿ ಕೆರೆ ಪರಿಶೀಲನೆಗೆ ಮತ್ತೊಂದು ಇಂಜಿನಿಯರ್ ತಂಡ

ಮೈಸೂರು: ಕುಕ್ಕರಹಳ್ಳಿ ಕೆರೆ ಏರಿಯಲ್ಲಿನ ನೀರು ಸೋರಿಕೆಯಿಂದ ಯಾವುದೇ ಅಪಾಯವಿಲ್ಲ. ಆದರೆ, ಕೆರೆಯ ಸಂರಕ್ಷಣೆ ಮತ್ತು ನಿರ್ವಹಣೆಗಾಗಿ ವ್ಯವಸ್ಥಿತವಾಗಿ ರಾಕ್‌ಟೋಗಳನ್ನು ಮತ್ತು ಹೆಡ್ ರೆಗ್ಯುಲೇಟರ್ ಅಳವಡಿಸಬೇಕು ಎಂಬ ಎರಡು ಪ್ರಮುಖ ಅಂಶಗಳನ್ನು ಕಾವೇರಿ ನೀರಾವರಿ ನಿಗಮದ ಡಿಸೈನ್ ವಿಂಗ್ ತಂಡ ಇಂಜಿನಿಯರ್‌ಗಳು ತಿಳಿಸಿದ್ದಾರೆ.

ನಿಗಮದ ಡಿಸೈನ್ ವಿಂಗ್‌ನ ತಾಂತ್ರಿಕ ಸಲಹೆಗಾರ ಎಚ್.ಕೆ.ಸಂಪತ್ ಕುಮಾರ್ ನೇತೃತ್ವದ ತಂಡ ಸೋಮವಾರ ಕುಕ್ಕರಹಳ್ಳಿ ಕೆರೆಯನ್ನು ಸುತ್ತು ಹಾಕಿ ಪರಿಶೀಲನೆ ನಡೆಸಿದೆ. ಶನಿವಾರವಷ್ಟೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರದ ಇಂಜಿನಿಯರ್‌ಗಳ ತಂಡ ಪರಿಶೀಲನೆ ನಡೆಸಿ, ಮಣ್ಣಿನ ಪರೀಕ್ಷೆ ಮಾಡಿ ವರದಿ ನೀಡುವುದಾಗಿ ಹೇಳಿದ್ದು, ಕಾವೇರಿ ನೀರಾವರಿ ನಿಗಮದ ಇಂಜಿನಿಯರ್‌ಗಳ ತಂಡ ನೀರು ಜಿನುಗುವ ಜಾಗದಲ್ಲಿ ಮತ್ತು ಬಂಡ್‌ಗಳಲ್ಲಿ ರಾಕ್‌ಟೋಗಳನ್ನು ಮಾಡುವಂತೆ ತಿಳಿಸಿದೆ.

ರಾಕ್‌ಟೋ ಎಂದರೇನು?: ಕೆರೆಯ ಏರಿಯಲ್ಲಿ ಎಲ್ಲಿ ನೀರು ಜಿನುಗುತ್ತದೆ. ಎಲ್ಲ ಬಂಡ್‌ಗಳಲ್ಲಿ ರಾಕ್‌ಟೋಗಳನ್ನು ನಿರ್ಮಿಸಲು ತಂಡ ಸಲಹೆ ನೀಡಿದೆ. ಜಿನುಗುವ ನೀರು ಬಸಿದು ಹೋಗಲು ಅನುಕೂಲವಾಗುವಂತೆ ಮಾಡುವ ಕಲ್ಲಿನ ಕಟ್ಟಡವೇ ರಾಕ್‌ಟೋ. ಇದನ್ನು ಕಲ್ಲಿನಲ್ಲಿಯೇ ಮಾಡಬೇಕು. ಕಾಂಕ್ರೀಟ್ ಬಳಸುವಂತಿಲ್ಲ.

ಹೆಡ್ ರೆಗ್ಯುಲೇಟರ್ ಅಳವಡಿಕೆ : ಮಳೆಯು ಬಂದಾಗ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಗೆ ಹೋಗುವಂತೆ ಮಾಡಲು ಈಗಿರುವ ಕೊಂಟ(ಸ್ಲೂಸೈ ಗೇಟ್) ನ ಬದಲಾಗಿ ಹೆಡ್ ರೆಗ್ಯುಲೇಟರ್ ಅನ್ನು ಅಳವಡಿಸಿದರೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರ ಹೋಗಲು ಅನುಕೂಲವಾಗುತ್ತದೆ. ಆದರೆ, ಹೀಗೆ ನೀರನ್ನು ಹೊರ ಬಿಟ್ಟಾಗ, ನೀರಿನಿಂದ ದೋಬಿ ಘಾಟ್‌ಗೆ ಯಾವುದೇ ತೊಂದರೆಯಾಗದಂತೆ ನಗರ ಪಾಲಿಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ರಾಕ್‌ಟೋ ಮತ್ತು ಹೆಡ್ ರೆಗ್ಯುಲೇಟರ್ ಅನ್ನು ಹೇಗೆ ಮಾಡಬೇಕು ಎಂಬ ಕುರಿತು ವಾರದೊಳಗೆ ವರದಿ ನೀಡುವುದಾಗಿ ತಿಳಿಸಿದೆ.

ಕಾವೇರಿ ನೀರಾವರಿ ನಿಗಮದ ಡಿಸೈನ್ ವಿಂಗ್‌ನ ಎಇಇಗಳಾದ ಎಂ.ಎನ್.ಚಂದ್ರೆಶೇಖರ್, ಗೋವರ್ಧನ್, ಸೋಮಶೇಖರ್, ಮೈಸೂರು ವಿವಿಯ ಇಂಜಿನಿಯರ್‌ಗಳಾದ ಇಇ ಪ್ರತಾಪ್, ಎಇಇ ಶಿವಲಿಂಗಪ್ರಸಾದ್ ಇದ್ದರು.

 

 

 

 

 

 

 

 

 

 

 

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago