ಜಿಲ್ಲೆಗಳು

ಸೌದೆ ತರಲು ಕಾಡಿಗೆ ಹೋದ ಯುವಕ ಹುಲಿ ದಾಳಿಗೆ ಬಲಿ

ಅಂತರಸಂತೆ: ಸೌದೆ ತರಲು ಕಾಡಿಗೆ ಹೊದಂತಹ ಸಂದರ್ಭದಲ್ಲಿ ಹುಲಿಯೊಂದು ದಾಳಿ ನಡೆಸಿ ಯುವಕನೊಬ್ಬನನ್ನು ಬಲಿ ಪಡೆದಿರುವ ಘಟನೆ ನಾಹರಹೊಳೆ ಅರಣ್ಯ ವ್ಯಾಪ್ತಿಯ ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಸಮೀಪ ನಡೆದಿದೆ.
ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಬಳ್ಳೆ ಹಾಡಿಯ ಮಂಜು(೧೭) ಎಂಬುವವರು ಹುಲಿ ದಾಳಿಗೆ ಬಲಿಯಾದ ದುರ್ಧೈವಿ. ಪುಷ್ಪ ಮತ್ತು ಲೇ. ಬಿ.ಕಾಳ ಎಂಬುವವರ ಮಗನಾದ ಮಂಜು ಪ್ರತಿದಿನದಂತೆಯೇ ಬಳ್ಳೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸೌದೆ ತರಲು ಕಾಡಿಗೆ ತೆಳಿದ್ದಾನೆ. ಈ ವೇಳೆ ಬಳ್ಳೆ ಹಾಡಿಯ ಸಮೀಪವೇ ಹುಲಿಯೊಂದು ಏಕಾಏಕಿ ಆತನ ಮೇಲೆ ದಾಳಿ ನಡೆಸಿದ್ದು, ದಾಳಿಯ ತೀವ್ರತೆಯಿಂದ ಯುವಕನ ತಲೆಗೆ ಗಂಭೀರವಾದ ಗಾಯವಾದ ಪರಿಣಾಮ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ: ಇನ್ನೂ ಘಟನೆಯಾದ ಬಳಿಕ ಅರಣ್ಯ ಇಲಾಖೆಯವರು ಕುಟುಂಬಸ್ಥರಿಗೆ ತಿಳಿಸದೆ ಹಾಗೂ ಹಾಡಿ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರ ತಿಳಿಸಿದಂತೆ ಮೃತದೇಹವನ್ನು ಅರಣ್ಯ ಇಲಾಖೆಯವರು ಸ್ಥಳಾಂತರ ಮಾಡಿದ್ದಾರೆ ಎಂದು ಆರೋಪಿಸಿ ಡಿ.ಬಿ.ಕುಪ್ಪೆ ಅರಣ್ಯ ಇಲಾಖೆಯ ಎದುರು ರಸ್ತೆ ನಡೆಸಿ ಡಿ.ಬಿ.ಕುಪ್ಪೆ ಮತ್ತು ಎನ್.ಬೆಳತ್ತೂರು ಗ್ರಾಮ ಪಂಚಾಯಿತಿಯ ಸದಸ್ಯರಾದ ಶಿವಕುಮಾರ್, ರಮೇಶ್, ಪುಟ್ಟಣ್ಣ, ಸುಬ್ರಮಣ್ಯ ಹಾಗೂ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ಮಾಸ್ತಯ್ಯ ರವರ ನೇತೃತ್ವದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ ಕುಟುಂಬಸ್ಥರು ಸಹ ಆಸ್ಪತ್ರೆಗೆ ತೆರಳದೆ ಪ್ರತಿಭಟಿಸಿದರು. ಬಳಿಕ ಮೇಟಿಕುಪ್ಪೆ ವಲಯದ ಎಸಿಎಫ್ ರಂಗಸ್ವಾಮಿಯವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಮನವೋಲಿಸಿದ ಬಳಿಕ ಪ್ರತಿಭಟನೆಯನ್ನು ಕೈಬಿಟ್ಟು ಮೃತದೇಹದ ಮರಣೋತ್ತರ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟರು.
ಇದೇ ವೇಳೆ ಮಾತನಾಡಿದ ಎಸಿಎಫ್ ರಂಗಸ್ವಾಮಿರವರು, ಬಳ್ಳೆಯ ಹಾಡಿಯ ಸಮೀಪವೇ ಯುವಕ ಸೌದೆಯನ್ನು ಸಂಗ್ರಹಿಸುವಾಗ ಈ ಅವಘಡ ಸಂಭವಿಸಿದ್ದು, ಕುಟುಂಬಕ್ಕೆ ಸರ್ಕಾರದಿಂದ ಬರುವ ೧೫ ಲಕ್ಷರೂ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಈಗ ಪರಿಹಾರದಲ್ಲಿನ ೨ ಲಕ್ಷದ ೫೦ ಸಾವಿರದ ಪರಿಹಾರದ ಚೆಕ್ ನೀಡಲಾಗಿದೆ ಎಂದರು.
ಹಿಂದೆಯೂ ಇಂತಹದ್ದೇ ಘಟನೆ: ೨೦೧೯ರ ಜನವರಿಯಲ್ಲಿ ಡಿ.ಬಿ.ಕುಪ್ಪೆ ಸಮೀಪವೇ ತಿಂಗಳ ಅಂತರದಲ್ಲಿ ಇಬ್ಬರನ್ನು ಹುಲಿ ಬಲಿಪಡೆದಿತ್ತು. ಬಹಿರ್ದೆಸೆಗೆ ಹೋಗಿದ್ದ ಹುಲುಮಟ್ಟಲು ಗ್ರಾಮದ ಚಿನ್ನಪ್ಪ ಎಂಬುವವರ ಮೇಲೆ ಹುಲಿ ದಾಳಿ ನಡೆಸಿ ಬಲಿಪಡೆದಿತ್ತು. ಇದಾದ ಕೆಲ ದಿನಗಳ ಬಳಿಕ ಮತ್ತೇ ಮಧು ಎಂಬುವವರು ಹುಲಿದಾಳಿಗೆ ಬಲಿಯಾಗಿದ್ದರು.

andolanait

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

8 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

10 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

10 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

10 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

10 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

10 hours ago