ಜಿಲ್ಲೆಗಳು

ಸೌದೆ ತರಲು ಕಾಡಿಗೆ ಹೋದ ಯುವಕ ಹುಲಿ ದಾಳಿಗೆ ಬಲಿ

ಅಂತರಸಂತೆ: ಸೌದೆ ತರಲು ಕಾಡಿಗೆ ಹೊದಂತಹ ಸಂದರ್ಭದಲ್ಲಿ ಹುಲಿಯೊಂದು ದಾಳಿ ನಡೆಸಿ ಯುವಕನೊಬ್ಬನನ್ನು ಬಲಿ ಪಡೆದಿರುವ ಘಟನೆ ನಾಹರಹೊಳೆ ಅರಣ್ಯ ವ್ಯಾಪ್ತಿಯ ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಸಮೀಪ ನಡೆದಿದೆ.
ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಬಳ್ಳೆ ಹಾಡಿಯ ಮಂಜು(೧೭) ಎಂಬುವವರು ಹುಲಿ ದಾಳಿಗೆ ಬಲಿಯಾದ ದುರ್ಧೈವಿ. ಪುಷ್ಪ ಮತ್ತು ಲೇ. ಬಿ.ಕಾಳ ಎಂಬುವವರ ಮಗನಾದ ಮಂಜು ಪ್ರತಿದಿನದಂತೆಯೇ ಬಳ್ಳೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸೌದೆ ತರಲು ಕಾಡಿಗೆ ತೆಳಿದ್ದಾನೆ. ಈ ವೇಳೆ ಬಳ್ಳೆ ಹಾಡಿಯ ಸಮೀಪವೇ ಹುಲಿಯೊಂದು ಏಕಾಏಕಿ ಆತನ ಮೇಲೆ ದಾಳಿ ನಡೆಸಿದ್ದು, ದಾಳಿಯ ತೀವ್ರತೆಯಿಂದ ಯುವಕನ ತಲೆಗೆ ಗಂಭೀರವಾದ ಗಾಯವಾದ ಪರಿಣಾಮ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ: ಇನ್ನೂ ಘಟನೆಯಾದ ಬಳಿಕ ಅರಣ್ಯ ಇಲಾಖೆಯವರು ಕುಟುಂಬಸ್ಥರಿಗೆ ತಿಳಿಸದೆ ಹಾಗೂ ಹಾಡಿ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರ ತಿಳಿಸಿದಂತೆ ಮೃತದೇಹವನ್ನು ಅರಣ್ಯ ಇಲಾಖೆಯವರು ಸ್ಥಳಾಂತರ ಮಾಡಿದ್ದಾರೆ ಎಂದು ಆರೋಪಿಸಿ ಡಿ.ಬಿ.ಕುಪ್ಪೆ ಅರಣ್ಯ ಇಲಾಖೆಯ ಎದುರು ರಸ್ತೆ ನಡೆಸಿ ಡಿ.ಬಿ.ಕುಪ್ಪೆ ಮತ್ತು ಎನ್.ಬೆಳತ್ತೂರು ಗ್ರಾಮ ಪಂಚಾಯಿತಿಯ ಸದಸ್ಯರಾದ ಶಿವಕುಮಾರ್, ರಮೇಶ್, ಪುಟ್ಟಣ್ಣ, ಸುಬ್ರಮಣ್ಯ ಹಾಗೂ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ಮಾಸ್ತಯ್ಯ ರವರ ನೇತೃತ್ವದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ ಕುಟುಂಬಸ್ಥರು ಸಹ ಆಸ್ಪತ್ರೆಗೆ ತೆರಳದೆ ಪ್ರತಿಭಟಿಸಿದರು. ಬಳಿಕ ಮೇಟಿಕುಪ್ಪೆ ವಲಯದ ಎಸಿಎಫ್ ರಂಗಸ್ವಾಮಿಯವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಮನವೋಲಿಸಿದ ಬಳಿಕ ಪ್ರತಿಭಟನೆಯನ್ನು ಕೈಬಿಟ್ಟು ಮೃತದೇಹದ ಮರಣೋತ್ತರ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟರು.
ಇದೇ ವೇಳೆ ಮಾತನಾಡಿದ ಎಸಿಎಫ್ ರಂಗಸ್ವಾಮಿರವರು, ಬಳ್ಳೆಯ ಹಾಡಿಯ ಸಮೀಪವೇ ಯುವಕ ಸೌದೆಯನ್ನು ಸಂಗ್ರಹಿಸುವಾಗ ಈ ಅವಘಡ ಸಂಭವಿಸಿದ್ದು, ಕುಟುಂಬಕ್ಕೆ ಸರ್ಕಾರದಿಂದ ಬರುವ ೧೫ ಲಕ್ಷರೂ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಈಗ ಪರಿಹಾರದಲ್ಲಿನ ೨ ಲಕ್ಷದ ೫೦ ಸಾವಿರದ ಪರಿಹಾರದ ಚೆಕ್ ನೀಡಲಾಗಿದೆ ಎಂದರು.
ಹಿಂದೆಯೂ ಇಂತಹದ್ದೇ ಘಟನೆ: ೨೦೧೯ರ ಜನವರಿಯಲ್ಲಿ ಡಿ.ಬಿ.ಕುಪ್ಪೆ ಸಮೀಪವೇ ತಿಂಗಳ ಅಂತರದಲ್ಲಿ ಇಬ್ಬರನ್ನು ಹುಲಿ ಬಲಿಪಡೆದಿತ್ತು. ಬಹಿರ್ದೆಸೆಗೆ ಹೋಗಿದ್ದ ಹುಲುಮಟ್ಟಲು ಗ್ರಾಮದ ಚಿನ್ನಪ್ಪ ಎಂಬುವವರ ಮೇಲೆ ಹುಲಿ ದಾಳಿ ನಡೆಸಿ ಬಲಿಪಡೆದಿತ್ತು. ಇದಾದ ಕೆಲ ದಿನಗಳ ಬಳಿಕ ಮತ್ತೇ ಮಧು ಎಂಬುವವರು ಹುಲಿದಾಳಿಗೆ ಬಲಿಯಾಗಿದ್ದರು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

8 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

8 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

8 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

8 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

8 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

8 hours ago