ಜಿಲ್ಲೆಗಳು

ಸೌದೆ ತರಲು ಕಾಡಿಗೆ ಹೋದ ಯುವಕ ಹುಲಿ ದಾಳಿಗೆ ಬಲಿ

ಅಂತರಸಂತೆ: ಸೌದೆ ತರಲು ಕಾಡಿಗೆ ಹೊದಂತಹ ಸಂದರ್ಭದಲ್ಲಿ ಹುಲಿಯೊಂದು ದಾಳಿ ನಡೆಸಿ ಯುವಕನೊಬ್ಬನನ್ನು ಬಲಿ ಪಡೆದಿರುವ ಘಟನೆ ನಾಹರಹೊಳೆ ಅರಣ್ಯ ವ್ಯಾಪ್ತಿಯ ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಸಮೀಪ ನಡೆದಿದೆ.
ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಬಳ್ಳೆ ಹಾಡಿಯ ಮಂಜು(೧೭) ಎಂಬುವವರು ಹುಲಿ ದಾಳಿಗೆ ಬಲಿಯಾದ ದುರ್ಧೈವಿ. ಪುಷ್ಪ ಮತ್ತು ಲೇ. ಬಿ.ಕಾಳ ಎಂಬುವವರ ಮಗನಾದ ಮಂಜು ಪ್ರತಿದಿನದಂತೆಯೇ ಬಳ್ಳೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸೌದೆ ತರಲು ಕಾಡಿಗೆ ತೆಳಿದ್ದಾನೆ. ಈ ವೇಳೆ ಬಳ್ಳೆ ಹಾಡಿಯ ಸಮೀಪವೇ ಹುಲಿಯೊಂದು ಏಕಾಏಕಿ ಆತನ ಮೇಲೆ ದಾಳಿ ನಡೆಸಿದ್ದು, ದಾಳಿಯ ತೀವ್ರತೆಯಿಂದ ಯುವಕನ ತಲೆಗೆ ಗಂಭೀರವಾದ ಗಾಯವಾದ ಪರಿಣಾಮ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ: ಇನ್ನೂ ಘಟನೆಯಾದ ಬಳಿಕ ಅರಣ್ಯ ಇಲಾಖೆಯವರು ಕುಟುಂಬಸ್ಥರಿಗೆ ತಿಳಿಸದೆ ಹಾಗೂ ಹಾಡಿ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರ ತಿಳಿಸಿದಂತೆ ಮೃತದೇಹವನ್ನು ಅರಣ್ಯ ಇಲಾಖೆಯವರು ಸ್ಥಳಾಂತರ ಮಾಡಿದ್ದಾರೆ ಎಂದು ಆರೋಪಿಸಿ ಡಿ.ಬಿ.ಕುಪ್ಪೆ ಅರಣ್ಯ ಇಲಾಖೆಯ ಎದುರು ರಸ್ತೆ ನಡೆಸಿ ಡಿ.ಬಿ.ಕುಪ್ಪೆ ಮತ್ತು ಎನ್.ಬೆಳತ್ತೂರು ಗ್ರಾಮ ಪಂಚಾಯಿತಿಯ ಸದಸ್ಯರಾದ ಶಿವಕುಮಾರ್, ರಮೇಶ್, ಪುಟ್ಟಣ್ಣ, ಸುಬ್ರಮಣ್ಯ ಹಾಗೂ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ಮಾಸ್ತಯ್ಯ ರವರ ನೇತೃತ್ವದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ ಕುಟುಂಬಸ್ಥರು ಸಹ ಆಸ್ಪತ್ರೆಗೆ ತೆರಳದೆ ಪ್ರತಿಭಟಿಸಿದರು. ಬಳಿಕ ಮೇಟಿಕುಪ್ಪೆ ವಲಯದ ಎಸಿಎಫ್ ರಂಗಸ್ವಾಮಿಯವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಮನವೋಲಿಸಿದ ಬಳಿಕ ಪ್ರತಿಭಟನೆಯನ್ನು ಕೈಬಿಟ್ಟು ಮೃತದೇಹದ ಮರಣೋತ್ತರ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟರು.
ಇದೇ ವೇಳೆ ಮಾತನಾಡಿದ ಎಸಿಎಫ್ ರಂಗಸ್ವಾಮಿರವರು, ಬಳ್ಳೆಯ ಹಾಡಿಯ ಸಮೀಪವೇ ಯುವಕ ಸೌದೆಯನ್ನು ಸಂಗ್ರಹಿಸುವಾಗ ಈ ಅವಘಡ ಸಂಭವಿಸಿದ್ದು, ಕುಟುಂಬಕ್ಕೆ ಸರ್ಕಾರದಿಂದ ಬರುವ ೧೫ ಲಕ್ಷರೂ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಈಗ ಪರಿಹಾರದಲ್ಲಿನ ೨ ಲಕ್ಷದ ೫೦ ಸಾವಿರದ ಪರಿಹಾರದ ಚೆಕ್ ನೀಡಲಾಗಿದೆ ಎಂದರು.
ಹಿಂದೆಯೂ ಇಂತಹದ್ದೇ ಘಟನೆ: ೨೦೧೯ರ ಜನವರಿಯಲ್ಲಿ ಡಿ.ಬಿ.ಕುಪ್ಪೆ ಸಮೀಪವೇ ತಿಂಗಳ ಅಂತರದಲ್ಲಿ ಇಬ್ಬರನ್ನು ಹುಲಿ ಬಲಿಪಡೆದಿತ್ತು. ಬಹಿರ್ದೆಸೆಗೆ ಹೋಗಿದ್ದ ಹುಲುಮಟ್ಟಲು ಗ್ರಾಮದ ಚಿನ್ನಪ್ಪ ಎಂಬುವವರ ಮೇಲೆ ಹುಲಿ ದಾಳಿ ನಡೆಸಿ ಬಲಿಪಡೆದಿತ್ತು. ಇದಾದ ಕೆಲ ದಿನಗಳ ಬಳಿಕ ಮತ್ತೇ ಮಧು ಎಂಬುವವರು ಹುಲಿದಾಳಿಗೆ ಬಲಿಯಾಗಿದ್ದರು.

andolanait

Recent Posts

ಮೇ.2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ; ಹೈ ಆದೇಶದ ಬೆನ್ನಲ್ಲೇ ಸಕಲ ಸಿದ್ಧತೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ಐಡಿಎಸ್‌ಜಿ ಫಸ್ಟ್…

10 mins ago

ಓದುಗರ ಪತ್ರ | ಸಿಇಟಿ ; ನಿಯಮಗಳಿಗೆ ತಿದ್ದುಪಡಿ ಅವಶ್ಯ

ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಸೋಲಾದದ್ದು ಮುಚ್ಚುಮರೆಯ ಕ್ಷೇತ್ರ ಪುನರ್‌ ವಿಂಗಡಣೆಗೆ

ದೆಹಲಿ ಕಣ್ಣೋಟ ಸಂಸತ್ತು ಅಂಗೀಕರಿಸಬೇಕಿದ್ದ ಸಂವಿಧಾನದ ೧೩೧ನೇ ತಿದ್ದುಪಡಿ ಮಸೂದೆ ಮಹಿಳಾ ಮೀಸಲಾತಿಯೋ ಅಥವಾ ಜನಗಣತಿಯ ನಂತರ ಲೋಕಸಭೆ ಮತ್ತು…

1 hour ago

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ : ದಾಳಿಗೆ ಮೋದಿ ಪ್ರತಿಕ್ರಿಯೆ

ನವದೆಹಲಿ : ವಾಷಿಂಗ್ಟನ್‌ನ ಹಿಲ್ಟನ್ ಹೋಟೆಲ್‌ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು…

2 hours ago

ಆಂದೋಲನ ಹಾಡುಪಾಡು | ಚಾಮರಾಜನಗರದ ರಂಗಭೂಮಿಯ ಕಿರಣ

ಸ್ವಾಮಿ ಪೊನ್ನಾಜಿ... ಕಿರಣ್ ಗಿರ್ಗಿ ಚಾಮರಾಜನಗರದ ಕಿರಿಯ ವಯಸ್ಸಿನ ಪ್ರತಿಭಾವಂತ ರಂಗ ನಿರ್ದೇಶಕ. ಈ ಹಿಂದೆ ಚಾಮರಾಜನಗರದ ರಂಗತರಂಗ ತಂಡದ…

2 hours ago

ಶಂಕಿತ ಶೂಟರ್‌ನ ಚಿತ್ರ, ವಿಡಿಯೊ ಬಿಡುಗಡೆ ಮಾಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಗವಹಿಸಿದ್ದ ವೈಟ್‌ ಹೌಸ್‌ ಕರೆಸ್ಪಾಂಡೆಂಟ್ಸ್  ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ…

2 hours ago