ಜಿಲ್ಲೆಗಳು

ಸೌದೆ ತರಲು ಕಾಡಿಗೆ ಹೋದ ಯುವಕ ಹುಲಿ ದಾಳಿಗೆ ಬಲಿ

ಅಂತರಸಂತೆ: ಸೌದೆ ತರಲು ಕಾಡಿಗೆ ಹೊದಂತಹ ಸಂದರ್ಭದಲ್ಲಿ ಹುಲಿಯೊಂದು ದಾಳಿ ನಡೆಸಿ ಯುವಕನೊಬ್ಬನನ್ನು ಬಲಿ ಪಡೆದಿರುವ ಘಟನೆ ನಾಹರಹೊಳೆ ಅರಣ್ಯ ವ್ಯಾಪ್ತಿಯ ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಸಮೀಪ ನಡೆದಿದೆ.
ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಬಳ್ಳೆ ಹಾಡಿಯ ಮಂಜು(೧೭) ಎಂಬುವವರು ಹುಲಿ ದಾಳಿಗೆ ಬಲಿಯಾದ ದುರ್ಧೈವಿ. ಪುಷ್ಪ ಮತ್ತು ಲೇ. ಬಿ.ಕಾಳ ಎಂಬುವವರ ಮಗನಾದ ಮಂಜು ಪ್ರತಿದಿನದಂತೆಯೇ ಬಳ್ಳೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸೌದೆ ತರಲು ಕಾಡಿಗೆ ತೆಳಿದ್ದಾನೆ. ಈ ವೇಳೆ ಬಳ್ಳೆ ಹಾಡಿಯ ಸಮೀಪವೇ ಹುಲಿಯೊಂದು ಏಕಾಏಕಿ ಆತನ ಮೇಲೆ ದಾಳಿ ನಡೆಸಿದ್ದು, ದಾಳಿಯ ತೀವ್ರತೆಯಿಂದ ಯುವಕನ ತಲೆಗೆ ಗಂಭೀರವಾದ ಗಾಯವಾದ ಪರಿಣಾಮ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ: ಇನ್ನೂ ಘಟನೆಯಾದ ಬಳಿಕ ಅರಣ್ಯ ಇಲಾಖೆಯವರು ಕುಟುಂಬಸ್ಥರಿಗೆ ತಿಳಿಸದೆ ಹಾಗೂ ಹಾಡಿ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರ ತಿಳಿಸಿದಂತೆ ಮೃತದೇಹವನ್ನು ಅರಣ್ಯ ಇಲಾಖೆಯವರು ಸ್ಥಳಾಂತರ ಮಾಡಿದ್ದಾರೆ ಎಂದು ಆರೋಪಿಸಿ ಡಿ.ಬಿ.ಕುಪ್ಪೆ ಅರಣ್ಯ ಇಲಾಖೆಯ ಎದುರು ರಸ್ತೆ ನಡೆಸಿ ಡಿ.ಬಿ.ಕುಪ್ಪೆ ಮತ್ತು ಎನ್.ಬೆಳತ್ತೂರು ಗ್ರಾಮ ಪಂಚಾಯಿತಿಯ ಸದಸ್ಯರಾದ ಶಿವಕುಮಾರ್, ರಮೇಶ್, ಪುಟ್ಟಣ್ಣ, ಸುಬ್ರಮಣ್ಯ ಹಾಗೂ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ಮಾಸ್ತಯ್ಯ ರವರ ನೇತೃತ್ವದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ ಕುಟುಂಬಸ್ಥರು ಸಹ ಆಸ್ಪತ್ರೆಗೆ ತೆರಳದೆ ಪ್ರತಿಭಟಿಸಿದರು. ಬಳಿಕ ಮೇಟಿಕುಪ್ಪೆ ವಲಯದ ಎಸಿಎಫ್ ರಂಗಸ್ವಾಮಿಯವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಮನವೋಲಿಸಿದ ಬಳಿಕ ಪ್ರತಿಭಟನೆಯನ್ನು ಕೈಬಿಟ್ಟು ಮೃತದೇಹದ ಮರಣೋತ್ತರ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟರು.
ಇದೇ ವೇಳೆ ಮಾತನಾಡಿದ ಎಸಿಎಫ್ ರಂಗಸ್ವಾಮಿರವರು, ಬಳ್ಳೆಯ ಹಾಡಿಯ ಸಮೀಪವೇ ಯುವಕ ಸೌದೆಯನ್ನು ಸಂಗ್ರಹಿಸುವಾಗ ಈ ಅವಘಡ ಸಂಭವಿಸಿದ್ದು, ಕುಟುಂಬಕ್ಕೆ ಸರ್ಕಾರದಿಂದ ಬರುವ ೧೫ ಲಕ್ಷರೂ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಈಗ ಪರಿಹಾರದಲ್ಲಿನ ೨ ಲಕ್ಷದ ೫೦ ಸಾವಿರದ ಪರಿಹಾರದ ಚೆಕ್ ನೀಡಲಾಗಿದೆ ಎಂದರು.
ಹಿಂದೆಯೂ ಇಂತಹದ್ದೇ ಘಟನೆ: ೨೦೧೯ರ ಜನವರಿಯಲ್ಲಿ ಡಿ.ಬಿ.ಕುಪ್ಪೆ ಸಮೀಪವೇ ತಿಂಗಳ ಅಂತರದಲ್ಲಿ ಇಬ್ಬರನ್ನು ಹುಲಿ ಬಲಿಪಡೆದಿತ್ತು. ಬಹಿರ್ದೆಸೆಗೆ ಹೋಗಿದ್ದ ಹುಲುಮಟ್ಟಲು ಗ್ರಾಮದ ಚಿನ್ನಪ್ಪ ಎಂಬುವವರ ಮೇಲೆ ಹುಲಿ ದಾಳಿ ನಡೆಸಿ ಬಲಿಪಡೆದಿತ್ತು. ಇದಾದ ಕೆಲ ದಿನಗಳ ಬಳಿಕ ಮತ್ತೇ ಮಧು ಎಂಬುವವರು ಹುಲಿದಾಳಿಗೆ ಬಲಿಯಾಗಿದ್ದರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

9 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

11 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago