ಅಂತರಸಂತೆ: ಗಂಡಾನೆಯೊಂದು ಮತ್ತೊಂದು ಕಾಡಾನೆಯೊಂದಿಗೆ ಕಾದಾಟ ನಡೆಸಿ ಗಂಭೀರವಾಗಿ ಗಾಯಗೊಂಡು ಬಳಿಕ ಸಾವನ್ನಪ್ಪಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಸಿಬ್ಬಂದಿಗಳು ಗಸ್ತು ತಿರುಗುವ ವೇಳೆ ಕಾಡಾನೆಯೊಂದು ಸಾವನ್ನಪ್ಪಿರುವುದು ತಿಳಿದುಬಂದಿದೆ. ಕೂಡಲೇ ಸಿಬ್ಬಂದಿಗಳು ಮೇಲಾಧಿಕಾರಿಗಳಿಗೆ ಈ ವಿಷಯವನ್ನು ತಿಳಿಸಿದ ಬಳಿಕ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಆನೆದ ದೇಹದ ಮೇಲೆ ಗಾಯದ ಗುರುತುಗಳು ಪತ್ತೇಯಾಗಿದ್ದು, ಆನೆಯು ಮತ್ತೊಂದು ಆನೆಯೊಂದಿಗೆ ಕಾದಾಡಿ ಸಾವನ್ನಪ್ಪಿರುವುದು ತಿಳಿದುಬಂದಿದೆ. ಬಳಿಕ ನಾಗರಹೊಳೆ ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದರವರ ಮಾರ್ಗದರ್ಶನ ಮೇರೆಗೆ ಆನೆಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಬಳಿಕ ಆನೆ ಸಾವನ್ನಪ್ಪಿದ ಹುಲಿ ಸಂರಕ್ಷಿತ ಪ್ರದೇಶವಾದ್ದರಿಂದ ಆನೆಯ ಕಳೇಬರವನ್ನು ಬೇರೆ ಪ್ರಾಣಿಗಳಿಗೆ ಆಹಾರವಾಗಲೆಂದು ಹಾಗೇಯೆ ಬಿಡಲಾಯಿತು.
ಸ್ಥಳದಲ್ಲಿ ಎಸಿಎಫ್ ರಂಗಸ್ವಾಮಿ, ಪಶುವೈದ್ಯ ಡಾ.ಬಿ.ಬಿ.ಪ್ರಸನ್ನ, ವಲಯ ಅರಣ್ಯಾಧಿಕಾರಿ ಕೆ.ಎಲ್.ಮಧು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…