ಜಿಲ್ಲೆಗಳು

ಸ್ಮಶಾನ ಇಲ್ಲದೆ ಹಳ್ಳದಲ್ಲಿ ಅಂತ್ಯಸಂಸ್ಕಾರ ಮಾಡಿದ ಅಂಬಿಕಾಪುರ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಅಜ್ಜೀಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಅಂಬಿಕಾಪುರ ಗ್ರಾಮದಲ್ಲಿ ಆದಿ ಜಾಂಬವ ಸಮುದಾಯದವರಿಗೆ ಸ್ಮಶಾನ ವ್ಯವಸ್ಥೆಯಿಲ್ಲದೆ ಮೃತಪಟ್ಟ ವ್ಯಕ್ತಿಯನ್ನು ಉಡುತೊರೆ ಹಳ್ಳದಲ್ಲಿ ಅಂತ್ಯಕ್ರಿಯೆ ಮಾಡಿದ್ದಾರೆ.

ಗ್ರಾಮದಲ್ಲಿ ಆದಿ ಜಾಂಬವ ಮತ್ತು ಪರಿಶಿಷ್ಟ ಜಾತಿ ಸಮುದಾಯದವರಿಗೆ ಸ್ಮಶಾನ ವ್ಯವಸ್ಥೆ ಇಲ್ಲ. ನಮ್ಮ ಸಮುದಾಯದ ವ್ಯಕ್ತಿ ಸತ್ತರೇ ನಮಗೆ ಅಂತ್ಯಕ್ರಿಯೆ ಮಾಡಲು ಉಡುತೊರೆ ಹಳ್ಳವೇ ಗತಿ. ಈ ಬಗ್ಗೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ತಿಳಿದಿದ್ದರೂ ನಮಗೆ ಸ್ಮಶಾನ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಳೆದ ವಾರ ಗ್ರಾಮದ ಪಾಪಮ್ಮ ಅವರ ಮಗ ಷಣ್ಮುಗ ಎಂಬುವವರು ಮೃತಪಟ್ಟಿದ್ದರು. ಸ್ಮಶಾನವಿಲ್ಲದೇ ಉಡುತೊರೆ ಹಳ್ಳದ ಬಳಿ ಅಂತ್ಯಕ್ರಿಯೆ ಮಾಡಲಾಗಿತ್ತು. ಸತತ ಮಳೆಯಿಂದಾಗಿ ಉಡುತೊರೆ ಹಳ್ಳ ತುಂಬಿ ಹರಿದ ಪರಿಣಾಮ ಹೂತು ಹಾಕಿದ್ದ ಶವವೇ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಈ ಮಧ್ಯೆ ಶನಿವಾರ ಪಳನಿಯಮ್ಮ(54) ಮೃತಪಟ್ಟಿದ್ದಾರೆ. ಅಂತ್ಯಕ್ರಿಯೆಯನ್ನು ಉಡುತೊರೆ ಹಳ್ಳದಲ್ಲೇ ಮಾಡಲಾಗಿದೆ. ಮತ್ತೊಮ್ಮೆ ಹಳ್ಳ ತುಂಬಿ ಹರಿದರೆ ಈ ಶವವೂ ನೀರಿನಲ್ಲಿ ಕೊಚ್ಚಿಹೋಗುವ ಆತಂಕದಲ್ಲಿದ್ದಾರೆ ಗ್ರಾಮಸ್ಥರು.

ಗ್ರಾಮದಲ್ಲಿ ನಮಗೆ ಸ್ಮಶಾನವಿಲ್ಲ ಸತ್ತವರನ್ನು ಹಳ್ಳದಲ್ಲೇ ಅಂತ್ಯಕ್ರಿಯೆ ಮಾಡುವಂತಾಗಿದೆ. ದಯವಿಟ್ಟು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಮಗೆ ಯಾವುದೆ ಸೌಲಭ್ಯ ಕೊಡದಿದ್ದರೂ ಸ್ಮಶಾನ ವ್ಯವಸ್ಥೆ ಕಲ್ಪಿಸುವ ಮೂಲಕ ಸತ್ತವರಿಗೆ ಮುಕ್ತಿ ಕಲ್ಪಿಸಿ ಎಂದು ಈಚೆಗೆ ಮೃತಪಟ್ಟ ಷಣ್ಮುಖ ಅವರ ತಾಯಿ ಗೊಳಾಡುತ್ತಿರುವ ದೃಶ್ಯ ಇದೀಗ ವೈರಲ್ ಆಗಿದೆ.

ಗ್ರಾಮದ ಸಾರ್ವಜನಿಕರಿಗೆ ಸೂಕ್ತ ಸ್ಮಶಾನ ವ್ಯವಸ್ಥೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಗುವುದು ಇದಲ್ಲದೆ ಮುಂದಿನ ವಿಧಾನಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.


ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಸ್ಮಶಾನ ವಿಲ್ಲದ ಗ್ರಾಮಗಳನ್ನು ಈಗಾಗಲೇ ಪಟ್ಟಿ ಮಾಡಲಾಗಿದೆ.ಈಗಾಗಲೇ ಸರ್ಕಾರಿ ಜಮೀನು ಇರುವ ಕಡೆ ಸರ್ವೆ ನಡೆಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಆದಷ್ಟು ಬೇಗ ಸ್ಮಶಾನವಿಲ್ಲದ ಗ್ರಾಮಗಳಲ್ಲಿ ಸ್ಮಶಾನದ ವ್ಯವಸ್ಥೆ ಕಲ್ಪಿಸಲಾಗುವುದು.

ಆನಂದಯ್ಯ
ತಹಸೀಲ್ದಾರ್ ಹನೂರು ತಾಲ್ಲೂಕು

andolanait

Recent Posts

ಕೆನಡಾದಲ್ಲಿ ಕನ್ನಡಿಗನ ಹತ್ಯೆ ಪ್ರಕರಣ: ಆರೋಪಿ ಭಾವಚಿತ್ರ ಬಿಡುಗಡೆ

ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…

36 mins ago

ಕೊಡಗು ಜಿಲ್ಲೆಯಲ್ಲಿ ಏಪ್ರಿಲ್.‌8ರಿಂದ ಪಾಸ್‌ಪೋರ್ಟ್‌ ಮೇಳ: ಸಂಸದ ಯದುವೀರ್‌ ಒಡೆಯರ್‌ ಮಾಹಿತಿ

ಕೊಡಗು: ಸಂಸದ ಯದುವೀರ್‌ ಕೃಷ್ಣದತತ ಚಾಮರಾಜ ಒಡೆಯರ್‌ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ…

51 mins ago

ಇರಾನ್‌ ಸರ್ವೋಚ್ಛ ನಾಯಕನಾಗಿ ಅಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಬಾ ಖಮೇನಿ ಆಯ್ಕೆ.?

ಟೆಹರಾನ್:‌ ಇರಾನ್‌ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್‌ನ ಮುಂದಿನ ಸರ್ವೋಚ್ಛ…

1 hour ago

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಿಗ್‌ ಬಜೆಟ್‌ ಸಿನಿಮಾ ಟಾಕ್ಸಿಕ್‌ ಇರಾನ್-‌ ಇಸ್ರೇಲ್‌ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.‌19ರಂದು ಬಿಡುಗಡೆಯಾಗಬೇಕಿದ್ದ…

1 hour ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ವಿಶೇಷ: ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಕಂಬ ಪ್ರತಿಷ್ಠಾಪನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…

3 hours ago

ಹನೂರು| ಚಂಗಡಿ ಗ್ರಾಮದ ಸುತ್ತಮುತ್ತ ಪ್ರತಿನಿತ್ಯ ಹುಲಿ ಓಡಾಟ: ಆತಂಕದಲ್ಲಿ ಸ್ಥಳೀಯರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…

3 hours ago