ಜಿಲ್ಲೆಗಳು

ಸ್ಮಶಾನ ಇಲ್ಲದೆ ಹಳ್ಳದಲ್ಲಿ ಅಂತ್ಯಸಂಸ್ಕಾರ ಮಾಡಿದ ಅಂಬಿಕಾಪುರ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಅಜ್ಜೀಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಅಂಬಿಕಾಪುರ ಗ್ರಾಮದಲ್ಲಿ ಆದಿ ಜಾಂಬವ ಸಮುದಾಯದವರಿಗೆ ಸ್ಮಶಾನ ವ್ಯವಸ್ಥೆಯಿಲ್ಲದೆ ಮೃತಪಟ್ಟ ವ್ಯಕ್ತಿಯನ್ನು ಉಡುತೊರೆ ಹಳ್ಳದಲ್ಲಿ ಅಂತ್ಯಕ್ರಿಯೆ ಮಾಡಿದ್ದಾರೆ.

ಗ್ರಾಮದಲ್ಲಿ ಆದಿ ಜಾಂಬವ ಮತ್ತು ಪರಿಶಿಷ್ಟ ಜಾತಿ ಸಮುದಾಯದವರಿಗೆ ಸ್ಮಶಾನ ವ್ಯವಸ್ಥೆ ಇಲ್ಲ. ನಮ್ಮ ಸಮುದಾಯದ ವ್ಯಕ್ತಿ ಸತ್ತರೇ ನಮಗೆ ಅಂತ್ಯಕ್ರಿಯೆ ಮಾಡಲು ಉಡುತೊರೆ ಹಳ್ಳವೇ ಗತಿ. ಈ ಬಗ್ಗೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ತಿಳಿದಿದ್ದರೂ ನಮಗೆ ಸ್ಮಶಾನ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಳೆದ ವಾರ ಗ್ರಾಮದ ಪಾಪಮ್ಮ ಅವರ ಮಗ ಷಣ್ಮುಗ ಎಂಬುವವರು ಮೃತಪಟ್ಟಿದ್ದರು. ಸ್ಮಶಾನವಿಲ್ಲದೇ ಉಡುತೊರೆ ಹಳ್ಳದ ಬಳಿ ಅಂತ್ಯಕ್ರಿಯೆ ಮಾಡಲಾಗಿತ್ತು. ಸತತ ಮಳೆಯಿಂದಾಗಿ ಉಡುತೊರೆ ಹಳ್ಳ ತುಂಬಿ ಹರಿದ ಪರಿಣಾಮ ಹೂತು ಹಾಕಿದ್ದ ಶವವೇ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಈ ಮಧ್ಯೆ ಶನಿವಾರ ಪಳನಿಯಮ್ಮ(54) ಮೃತಪಟ್ಟಿದ್ದಾರೆ. ಅಂತ್ಯಕ್ರಿಯೆಯನ್ನು ಉಡುತೊರೆ ಹಳ್ಳದಲ್ಲೇ ಮಾಡಲಾಗಿದೆ. ಮತ್ತೊಮ್ಮೆ ಹಳ್ಳ ತುಂಬಿ ಹರಿದರೆ ಈ ಶವವೂ ನೀರಿನಲ್ಲಿ ಕೊಚ್ಚಿಹೋಗುವ ಆತಂಕದಲ್ಲಿದ್ದಾರೆ ಗ್ರಾಮಸ್ಥರು.

ಗ್ರಾಮದಲ್ಲಿ ನಮಗೆ ಸ್ಮಶಾನವಿಲ್ಲ ಸತ್ತವರನ್ನು ಹಳ್ಳದಲ್ಲೇ ಅಂತ್ಯಕ್ರಿಯೆ ಮಾಡುವಂತಾಗಿದೆ. ದಯವಿಟ್ಟು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಮಗೆ ಯಾವುದೆ ಸೌಲಭ್ಯ ಕೊಡದಿದ್ದರೂ ಸ್ಮಶಾನ ವ್ಯವಸ್ಥೆ ಕಲ್ಪಿಸುವ ಮೂಲಕ ಸತ್ತವರಿಗೆ ಮುಕ್ತಿ ಕಲ್ಪಿಸಿ ಎಂದು ಈಚೆಗೆ ಮೃತಪಟ್ಟ ಷಣ್ಮುಖ ಅವರ ತಾಯಿ ಗೊಳಾಡುತ್ತಿರುವ ದೃಶ್ಯ ಇದೀಗ ವೈರಲ್ ಆಗಿದೆ.

ಗ್ರಾಮದ ಸಾರ್ವಜನಿಕರಿಗೆ ಸೂಕ್ತ ಸ್ಮಶಾನ ವ್ಯವಸ್ಥೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಗುವುದು ಇದಲ್ಲದೆ ಮುಂದಿನ ವಿಧಾನಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.


ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಸ್ಮಶಾನ ವಿಲ್ಲದ ಗ್ರಾಮಗಳನ್ನು ಈಗಾಗಲೇ ಪಟ್ಟಿ ಮಾಡಲಾಗಿದೆ.ಈಗಾಗಲೇ ಸರ್ಕಾರಿ ಜಮೀನು ಇರುವ ಕಡೆ ಸರ್ವೆ ನಡೆಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಆದಷ್ಟು ಬೇಗ ಸ್ಮಶಾನವಿಲ್ಲದ ಗ್ರಾಮಗಳಲ್ಲಿ ಸ್ಮಶಾನದ ವ್ಯವಸ್ಥೆ ಕಲ್ಪಿಸಲಾಗುವುದು.

ಆನಂದಯ್ಯ
ತಹಸೀಲ್ದಾರ್ ಹನೂರು ತಾಲ್ಲೂಕು

andolanait

Recent Posts

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

3 mins ago

ಪಾಳು ಬಿದ್ದಿರುವ ವೈದ್ಯರು, ದಾದಿಯರ ವಸತಿಗೃಹಗಳು

ಭೇರ್ಯ ಮಹೇಶ್ ಭೇರ್ಯ: ಶಿಥಿಲಗೊಂಡಿರುವ ಕಾರಣದಿಂದ ವಾಸಿಸಲು ಹಿಂಜರಿಯುವ ವೈದ್ಯರು, ದಾದಿಯರು, ಸಹಾಯಕಿಯರು ಭೇರ್ಯ: ಭೇರ್ಯ ಗ್ರಾಮದ ಪ್ರಾಥಮಿಕ ಆರೋಗ್ಯ…

8 mins ago

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

8 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

9 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

11 hours ago