ಜಿಲ್ಲೆಗಳು

ಬುದ್ಧಿವಂತಿಕೆಯಿಲ್ಲದ ಯಾವುದೇ ಶಿಕ್ಷಣವು ನಿಷ್ಪ್ರಯೋಜಕ : ಆರಿಫ್ ಮಹಮ್ಮದ್ ಖಾನ್

ಮೈಸೂರು : ಶಿಕ್ಷಣದ ಉದ್ದೇಶವು ಮಾಹಿತಿಯನ್ನು ನೀಡುವುದು ಮಾತ್ರವಲ್ಲದೆ ವ್ಯಕ್ತಿಯಲ್ಲಿ ಆಧ್ಯಾತ್ಮಿಕತೆಯನ್ನು ಬೆಳೆಸುವುದು, ಬುದ್ಧಿವಂತಿಕೆಯಿಲ್ಲದ ಯಾವುದೇ ಶಿಕ್ಷಣವು ನಿಷ್ಪ್ರಯೋಜಕವಾಗಿದೆ ಎಂದು ಕೇರಳದ ರಾಜ್ಯಪಾಲರಾದ   ಆರಿಫ್ ಮೊಹಮ್ಮದ್ ಖಾನ್  ಅವರು ಅಭಿಪ್ರಾಯಪಟ್ಟರು.


ನಗರದ ಜೆಎಸ್‌ಎಸ್‌ ಔಷಧ ವಿಜ್ಞಾನ ಮಹಾವಿದ್ಯಾಲಯದಲ್ಲಿಂದು ನಡೆದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ನವೀನ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಔಷಧೀಯ ಶಿಕ್ಷಣ, ತರಬೇತಿ ಮತ್ತು ಸಂಶೋಧನೆಯಲ್ಲಿ ಜಾಗತಿಕ ಪ್ರವರ್ತಕರಾಗಿ 50 ವರ್ಷಗಳನ್ನು ಪೂರೈಸಿದ JSSAHER ಮತ್ತು JSS ಕಾಲೇಜ್ ಆಫ್ ಫಾರ್ಮಸಿ, ಮೈಸೂರಿನ ನಾಯಕತ್ವವನ್ನು ಅಭಿನಂದಿಸಿದರು. ಮುಂದುವರಿದು ಶಿಕ್ಷಣದ ಉದ್ದೇಶವು ಮಾಹಿತಿಯನ್ನು ನೀಡುವುದು ಮಾತ್ರವಲ್ಲದೆ ವ್ಯಕ್ತಿಯಲ್ಲಿ ಆಧ್ಯಾತ್ಮಿಕತೆಯನ್ನು ಬೆಳೆಸುವುದು. ಜೆಎಸ್‌ಎಸ್‌ ವಿದ್ಯಾರ್ಥಿಗಳು ಜೆಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಲ್ಲಿ ಎರಡನ್ನೂ ಪಡೆಯುವ ಅದೃಷ್ಟವಂತರು ಎಂದು ಅವರು ಹೇಳಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರು ವಹಿಸಿದ್ದರು. ಅಧ್ಯಕ್ಷತೆಯನ್ನು ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನಗಳ ಸಚಿವರಾದ ಜೆ.ಸಿ.ಮಾಧುಸ್ವಾಮಿ  ವಹಿಸಿದ್ದರು.

ಕಾರ್ಯಕ್ರಮದಲ್ಲಿ ಡಾ.ಸಿ.ಜಿ. ಬೆಟಸೂರಮಠ, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ, ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಸಮ ಉಪ ಕುಲಪತಿ ಡಾ.ಬಿ.ಸುರೇಶ್, ಉಪಕುಲಪತಿ ಡಾ. ಸುರೀಂದರ್ ಸಿಂಗ್ ಮತ್ತು ಇತರೆ ವಿಶ್ವವಿದ್ಯಾಲಯದ ಅಧಿಕಾರಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮವು ಆಮಂತ್ರಣ ಗೀತೆಯೊಂದಿಗೆ ಪ್ರಾರಂಭವಾಯಿತು ಮತ್ತು ಅತಿಥಿಗಳನ್ನು ಉಪಕುಲಪತಿ ಡಾ. ಸುರೀಂದರ್ ಸಿಂಗ್ ಸ್ವಾಗತಿಸಿದರು, ನಂತರ ಗಣ್ಯರು ದೀಪ ಬೆಳಗಿಸಿದರು.ಬಳಿಕ ಕಾಲೇಜಿನ ಅಭಿವೃದ್ಧಿಗೆ ಕಾರಣರಾದ ಪ್ರಾಂಶುಪಾಲರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸೇರಿದಂತೆ ನಾಯಕತ್ವ ವಹಿಸಿದ ಪ್ರತಿಯೊಬ್ಬರನ್ನು ಅಭಿನಂದಿಸಲಾಯಿತು. ಮೈಸೂರಿನ ಜೆಎಸ್‌ಎಸ್ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಟಿ.ಎಂ.ಪ್ರಮೋದ್ ಕುಮಾರ್ ಅವರು ವಂದನಾರ್ಪಣೆ ನಡೆಸಿಕೊಟ್ಟರು.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago