ಜಿಲ್ಲೆಗಳು

ಕೋಟೆ ಆಯ್ತು, ಈಗ ಸರಗೂರಿನಲ್ಲೂ ಅಪ್ಪಾಜಿ ಕ್ಯಾಂಟೀನ್!

ಜಾ.ದಳ ಮುಖಂಡ ಕೃಷ್ಣನಾಯಕ ಅವರಿಂದ ಆರಂಭ; ೧೬ರಂದು ಉದ್ಘಾಟನೆ

ಮಂಜು ಕೋಟೆ

ಹೆಚ್.ಡಿ.ಕೋಟೆ: ಜಾ ದಳ ಪಕ್ಷದ ವರಿಷ್ಠ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಸೂಚನೆಯಂತೆ ಪಕ್ಷದ ಮುಖಂಡ ಕೃಷ್ಣನಾಯಕ ಅವರು ಕ್ಷೇತ್ರದಲ್ಲಿ ಮತ್ತೊಂದು ಬಡವರ ಪರವಾದ ಅಪ್ಪಾಜಿ ಕ್ಯಾಂಟೀನ್ ಅನ್ನು ಸರಗೂರಿನಲ್ಲಿ ಆರಂಭಿಸುತ್ತಿದ್ದಾರೆ.

ಕೋಟೆ ತಾಲ್ಲೂಕಿನ ಕೇಂದ್ರಸ್ಥಾನಮಾನ  ಪಟ್ಟಣದ ಮಿನಿ ವಿಧಾನಸೌಧ ಮುಂಭಾಗದಲ್ಲಿ ೫ ತಿಂಗಳ ಹಿಂದೆ ಕುಮಾರಸ್ವಾಮಿ ಅವರ ನಿರ್ದೇಶನದಂತೆ ಅಪ್ಪಾಜಿ ಕ್ಯಾಂಟೀನ್ ಅನ್ನು ಉದ್ಘಾಟಿಸಲಾಗಿತ್ತು. ಇದರ ಮೂಲಕ ಬಡವರಿಗೆ, ಕೂಲಿ ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ, ಜನಸಾಮಅನ್ಯರಿಗೆ ೧೦ ರೂ. ಕಡಿಮೆ ದರದಲ್ಲಿ ಊಟ ತಿಂಡಿ ನೀಡಲಾಗುತ್ತಿದೆ. ಪ್ರತಿನಿತ್ಯ ಒಂದೂವರೆ ಸಾವಿರ ಜನರು ಇದರ ಸದುಪಯೋಗಪಡೆದುಕೊಳ್ಳುತ್ತಿದ್ದು, ಪಕ್ಷಕ್ಕೆ ಮತ್ತು ಕೃಷ್ಣ ನಾಯಕ ಅವರಿಗೆ ಉತ್ತಮ ಸ್ಪಂದನೆ ದೊರೆತ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಮತ್ತೊಂದು ಕ್ಯಾಂಟೀನ್ ತೆರೆಯುವಂತೆ ಕುಮಾರಸ್ವಾಮಿ ನಿರ್ದೇಶನ ನೀಡಿದ್ದರು. ಹೀಗಾಗಿ ಸರಗೂರು ಪಟ್ಟಣದಲ್ಲಿ ಇದೇ ತಿಂಗಳು ೧೬ರಂದು ಬುಧವಾರ ಜಾ.ದಳ ಪಕ್ಷದ ಅಪ್ಪಾಜಿ ಕ್ಯಾಂಟೀನ್ ಪ್ರಾರಂಭಿಸಲಾಗುತ್ತಿದೆ.
ರಾಜ್ಯದ ಯಾವುದೇ ತಾಲ್ಲೂಕು ಕೇಂದ್ರಗಳಲ್ಲಿ ಜಾ.ದಳದ ಸ್ವಂತ ಕಚೇರಿ ಮತ್ತು ೨ ಅಪ್ಪಾಜಿ ಕ್ಯಾಂಟೀನ್‌ಗಳನ್ನು ಪ್ರಾರಂಭಿಸಿರುವ ಉದಾಹರಣೆಯೇ ಇಲ್ಲ. ಇಂತಹ ಹೆಗ್ಗಳಿಕೆ ತಾಲ್ಲೂಕಿನ ಜಾ.ದಳಕ್ಕೆ ಸಂದಿದೆ.

ಕೃಷ್ಣ ನಾಯಕ ಈ ಭಾಗದ ಬಡ ಜನರಿಗೆ, ನೊಂದವರಿಗೆ, ರೈತರಿಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕೋಟೆ ಪಟ್ಟಣದಲ್ಲಿ ಅಪ್ಪಾಜಿ ಕ್ಯಾಂಟೀನ್ ತೆರೆದು ಸಾವಿರಾರು ಜನರಿಗೆ ಅನುಕೂಲ ಮಾಡಿದ್ದಾರೆ. ಈಗ ಸರಗೂರು ಪಟ್ಟಣದಲ್ಲಿ ಮತ್ತೊಂದು ಕ್ಯಾಂಟೀನ್ ಪ್ರಾರಂಭಿಸಲಾಗುತ್ತಿದ್ದು, ಕಡಿಮೆ ದರದಲ್ಲಿ ದೊರೆಯುವ ಊಟ ತಿಂಡಿಯನ್ನು ಎಲ್ಲಾ ವರ್ಗದ ಬಡ ಜನರು ಪಡೆದುಕೊಳ್ಳಬೇಕಿದೆ.

ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ


ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ನೊಂದವರಿಗೆ, ಬಡವರಿಗೆ, ರೈತರಿಗೆ, ಕೂಲಿ ಕಾರ್ಮಿಕರಿಗೆ ಸೇವಾ ಕಾರ್ಯ ಮಾಡಲಾಗುತ್ತಿದೆ. ಅಪ್ಪಾಜಿ ಕ್ಯಾಂಟೀನ್ ಬಡವರ ಹಸಿವು ನೀಗಿಸುವ ಕೆಲಸ ಮಾಡುತ್ತಿದೆ. ಆದ್ದರಿಂದ ಪಕ್ಷದ ಹಿತದೃಷ್ಟಿ ಮತ್ತು ಕುಮಾರಸ್ವಾಮಿ ಅವರು ಮುಂದಿನ ಮುಖ್ಯಮಂತ್ರಿಯಾಗಬೇಕು ಎಂಬ ಉದ್ದೇಶದಿಂದ ಅವರ ನಿರ್ದೇಶನದಂತೆ ಎಲ್ಲಾ ಕಾರ್ಯಕ್ರಮಗಳನ್ನು  ನಡೆಸಲಾಗುತ್ತಿದೆ.
ಕೃಷ್ಣ ನಾಯಕ, ಜಾ.ದಳ ಮುಖಂಡ

andolanait

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

3 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

4 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

4 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

5 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

6 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

6 hours ago